ಗಂಗೇನಹಳ್ಳಿ ಕೆರೆ ಈಗ ತ್ಯಾಜ್ಯ ವಿಲೇವಾರಿ ತಾಣ: ಆಕ್ರೋಶ


Team Udayavani, May 13, 2023, 1:26 PM IST

ಗಂಗೇನಹಳ್ಳಿ ಕೆರೆ ಈಗ ತ್ಯಾಜ್ಯ ವಿಲೇವಾರಿ ತಾಣ: ಆಕ್ರೋಶ

ಕಿಕ್ಕೇರಿ: ಪಟ್ಟಣಕ್ಕೆ ಹೊಂದಿಕೊಂಡಿರುವ ಗಂಗೇನಹಳ್ಳಿ ಕೆರೆಯ ಆಸುಪಾಸಿನ ನಿವಾಸಿಗಳು ನೆಮ್ಮದಿಯಿಂದ ವಾಸಿಸಲು ಆಗದೇ ನಿತ್ಯ ದುರ್ವಾಸನೆಯ ಕಿರಿಕಿರಿ ಅನುಭವಿಸುತ್ತಿದ್ದಾರೆ.

25 ಎಕರೆ ವಿಸ್ತಾರದ ಕೆರೆ ಹೂಳು ತುಂಬಿದ್ದು, ರೈತರು ಸ್ವಲ್ಪ ಮಣ್ಣನ್ನು ಜಮೀನಿಗೆ ಬಳಸಿಕೊಂಡಿ ದ್ದಾರೆ. ನೀರಾವರಿ ಇಲಾಖೆ ಕಾಟಾಚಾರಕ್ಕೆ ಅಲ್ಲಲ್ಲಿ ಹೂಳು ತೆಗೆದು ಕೈಚೆಲ್ಲಿದೆ. ಬೇಸಿಗೆ ಕಾಲವಾಗಿದ್ದು ಕೆರೆ ಒಣಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿ ರುವ ಆಸ್ಪತ್ರೆ, ಹೋಟೆಲ್‌, ಮಾಂಸ ದಂಗಡಿ, ಬೀದಿ ಬದಿ ಚಾಟ್ಸ್‌ ಅಂಗಡಿ ಯವರು ಅಳಿದುಳಿದ ಆಹಾರ, ಪ್ಲಾಸ್ಟಿಕ್‌ ಪೇಪರ್‌ ಮುಂದಾದವುಗಳನ್ನು ಕೆರೆ ಎಸೆಯುತ್ತಿದ್ದಾರೆ. ಕೆರೆ ಆಸುಪಾಸಿನ ಜನರಿಗೆ ತ್ಯಾಜ್ಯದ ದುರ್ವಾಸೆ ಸಹಿಸಲು ಕಷ್ಟವಾಗಿದೆ. ಆಸ್ಪತ್ರೆಯ ತ್ಯಾಜ್ಯ, ಸಿರಂಜ್‌ ಸೇರಿ ಮದ್ಯದ ಬಾಟಲ್‌ ನಂತಹ ವಸ್ತುಗಳು ಕೆರೆ ಸೇರುತ್ತಿವೆ. ಜೊತೆಗೆ ಮನೆಯಲ್ಲಿ ಬಳಸಿ ಬಿಸಾಡಿದ ವಸ್ತು, ಪ್ಲಾಸ್ಟಿಕ್‌ ವಸ್ತುಗಳ ಕೆರೆ ಸೇರುತ್ತಿವೆ.

ಸೊಳ್ಳೆ ಕಾಟ: ಈ ಅನುಪಯುಕ್ತ ವಸ್ತುಗಳು ಕರಗದೇ ಕೊಳೆಯುತ್ತಿವೆ. ಗಾಳಿ ಬಂದಾಗ ಅಸಹ್ಯಕರ ವಾಸನೆ ಪರಿಸರದಲ್ಲಿ ವ್ಯಾಪಿಸು ತ್ತಿದ್ದು, ನಿವಾಸಿಗಳಿಗೆ ತೊಂದರೆಯಾಗಿದೆ. ಕೊಳೆತ ತ್ಯಾಜ್ಯ ದಿಂದ ಸೊಳ್ಳೆಗಳ ಹಾವಳಿ ವಿಪರೀತ ವಾಗಿದೆ. ಕೆರೆ ಪಕ್ಕದಲ್ಲಿಯೇ ಶಾಲೆ ಇರುವುದ ರಿಂದ ಮಕ್ಕಳಿಗೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಾಗಿದೆ. ಹಗಲು ವೇಳೆಯೇ ಮುಲಾಮು ಹಚ್ಚಿಕೊಂಡು ಆಸುಪಾಸಿನ ನಿವಾಸಿಗಳು ಓಡಾಡುವಂತಾಗಿದೆ.

ರಾತ್ರಿ ವೇಳೆ ಸೊಳ್ಳೆ ಪರದೆ ಇಲ್ಲದೆ ಮಲಗುವಂತಾಗಿಲ್ಲ. ಮನೆ ಕಟ್ಟುವವರು, ರಿಪೇರಿ ಮಾಡುವವರು ಅಳಿದುಳಿದ ಕಲ್ಲು, ಮಣ್ಣು, ಮರಮುಗ್ಗಟ್ಟು ಕೆರೆಗೆ ತಂದು ಸುರಿಯುತ್ತಿದ್ದಾರೆ. ಇದರಿಂದ ವಾಸ ಮಾಡಲು ಕಷ್ಟವಾಗಿದೆ. ಮೊದಲು ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಸಂಬಂಧಪಟ್ಟವರು ಮುಂದಾಗಬೇಕು ಎನ್ನುವುದು ಸ್ಥಳೀಯ ನಿವಾಸಿ ಶೇಖರ್‌ ನಿವೇದನೆಯಾಗಿದೆ. ಕೆರೆಯ ಉಳಿಸುವುದು ಎಲ್ಲರ ಕರ್ತವ್ಯ. ಕೆರೆ ಇದ್ದರೆ ನಾವು ನೀವು ಎನ್ನುವ ಪರಿಕಲ್ಪನೆ ಎಲ್ಲರಲ್ಲಿ ಮೂಡಬೇಕು. ಕೆರೆಗೆ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ಎಚ್ಚರಿಕೆ ನೀಡಲಾಗುವುದು ಎನ್ನುತ್ತಾರೆ ಕಾವೇರಿ ನೀರಾವರಿ ನಿಗಮದ ಎಇಇ ಗುರುಪ್ರಸಾದ್‌.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.