ಪುರಸಭೆ ಸದಸ್ಯರು ಲೆಕ್ಕಕ್ಕಿಲ್ಕದಂತಾಗಿದೆ: ಕಿಡಿ


Team Udayavani, Apr 23, 2022, 2:33 PM IST

Untitled-1

ಪಾಂಡವಪುರ: ಪುರಸಭೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು ಅಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಪುರಸಭೆ ಸದಸ್ಯರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬತಾಗಿದೆ ಎಂದು ಬಿಜೆಪಿ ಸದಸ್ಯ ಪಾರ್ಥಸಾರಥಿ ಆರೋಪಿಸಿದರು.

ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಅರ್ಚನಾ ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವರ್ತನೆ ಬಗ್ಗೆ ನೇರ ಆರೋಪ ಮಾಡಿದ ಅವರು, ಕಚೇರಿ ಅಧಿಕಾರಿಗಳು ಮಧ್ಯವರ್ತಿಗಳಿಗೆ ನೀಡುವ ಗೌರವವನ್ನು ಸದಸ್ಯರಿಗೆ ನೀಡುವುದಿಲ್ಲ. ನಮ್ಮನ್ನು ಚುನಾಯಿಸಿ ಕಳುಹಿಸಿರುವ ಮತದಾರರು ಸಣ್ಣ ಕೆಲಸಕ್ಕಾಗಿ ಕಚೇರಿಗೆ ಅಲೆಯುವ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು.

ಪಟ್ಟಣದ ಕಾಮನಚೌಕದ ಆಟೋ ಸ್ಟ್ಯಾಂಡ್‌ ನಿಂದಾಗಿ ಈ ಭಾಗದ ನಿವಾಸಿಗಳಿಗೆ ಬಹಳ ತೊಂದರೆಯಾಗು ತ್ತಿದೆ. ತಕ್ಷಣ ಆಟೋ ಸ್ಟ್ಯಾಂಡ್‌ ತೆರವುಗೊಳಿಸಿ ನೆಮ್ಮದಿಯಾಗಿ ಬದುಕಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಎಲ್ಲರು ಸಾಮೂಹಿಕವಾಗಿ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರಲ್ಲದೇ, ಹಿಂದೂ ರುದ್ರ ಭೂಮಿಯಲ್ಲಿ ಅಪರಿಚಿತ ಶವ ಸಂಸ್ಕಾರ ನಮಗೆ ಶ್ರೇಯಸ್ಸಲ್ಲ ಹೀಗಾಗಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ವೇ ಮಾಡಿಸಿ: ಬಿಜೆಪಿ ಸದಸ್ಯ ಎಲ್‌.ಅಶೋಕ್‌ ಮಾತನಾಡಿ, ಸಂತೆಮೈದಾನ ಜಾಗದ ಅಳತೆ ಬಗ್ಗೆ ಪುರಸಭೆ ಕಚೇರಿಯಲ್ಲಿ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದರೆ ಯಾರಲ್ಲೂ ಉತ್ತರ ಇಲ್ಲವಾಗಿದೆ. ಇಡೀ ಸಂತೆ ಮೈದಾನ ಜಾಗ ಸರ್ವೇ ಮಾಡಿಸಿ ಒತ್ತುವರಿ ತೆರವು ಮಾಡಿಸಬೇಕು. ಪ್ರಭಾವಿಗಳು ತಮ್ಮ ಪ್ರಭಾವ ಬಳಸಿ ಒತ್ತುವರಿ ಮಾಡಿಕೊಂಡಿರುವ ಜಾಗ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ. ತಕ್ಷಣ ಸರ್ವೇ ಮಾಡಿಸಿ ಸಂತೆಮೈದಾನ ಜಾಗದ ಗಡಿ ಗುರುತಿಸಿ ಕಾಪಾಡಿಕೊಳ್ಳಬೇಕಿದೆ ಎಂದರು.

ರಸ್ತೆಗಳು ಒತ್ತುವರಿ: ಸದಸ್ಯ ಚಂದ್ರಶೇಖರ್‌ ಮಾತನಾಡಿ, ಮಾಸಿಕವಾಗಿ ಎಷ್ಟು ಖಾತೆ, ಇ-ಸ್ವತ್ತು ಮಾಡಲಾಗಿದೆ ಎಂಬುದನ್ನು ಸಭೆಯ ಗಮನಕ್ಕೆ ತರಬೇಕು. ಅಂಗಡಿಗಳಿಗೆ ಪರವಾನಗಿ ಕೊಟ್ಟರೆ ಅಲ್ಲಿಗೆ ಕೆಲಸ ಮುಗಿಯಿತು ಎಂದು ಅಧಿಕಾರಿಗಳು ಭಾವಿಸಿದ್ದಾರೆ. ಪರವಾನಗಿ ತಯಾರಿಸಿದ ನಂತರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವು ದಿಲ್ಲ. ಪಟ್ಟಣದ ಬಹುತೇಕ ರಸ್ತೆಗಳು, ಪಾದಚಾರಿ ಮಾರ್ಗ ಒತ್ತುವರಿಯಾಗಿದೆ. ಜತೆಗೆ ಚರಂಡಿ ಮೇಲೆ ಕಟ್ಟಡ ನಿರ್ಮಿಸಲಾಗಿದೆ ಎಂದು ಆರೋಪಿಸಿದರು.

ಆದಾಯವೂ ವೃದ್ಧಿ: ಬಿಜೆಪಿ ಸದಸ್ಯ ಶ್ರೀನಿವಾಸ ನಾಯಕ ಮಾತನಾಡಿ, ಪುರಸಭೆಗೆ ಸೇರಿದ 82 ವಾಣಿಜ್ಯ ಮಳಿಗೆಗಳನ್ನು ಮೂಲ ಬಿಡ್ಡುದಾರರು 5 ರಿಂದ 10 ಲಕ್ಷದವರೆಗೆ ಇತರರರಿಗೆ ವರ್ಗಾಯಿಸಿದ್ದಾರೆ. ಕಳೆದ 30 ವರ್ಷಗಳ ಹಿಂದೆ ನಿಗದಿಯಾಗಿದ್ದ 150, 200 ರೂ. ಬಾಡಿಗೆಯನ್ನೇ ಈಗಲೂ ವಸೂಲಿ ಮಾಡಲಾಗುತ್ತಿದೆ. ಆದರೆ ಮಳಿಗೆ ವಹಿಸಿಕೊಂಡಿರುವ ವ್ಯಕ್ತಿಗಳು ವಾಸ್ತವವಾಗಿ 8 ರಿಂದ 10 ಸಾವಿರ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಪುರಸಭೆಗೆ ಮಾಸಿಕ ಲಕ್ಷಾಂತರ ನಷ್ಟವಾಗುತ್ತಿದೆ. ಇರುವ ಮಳಿಗೆ ನವೀಕರಣಗೊಳಿಸಿ ಹೊಸದಾಗಿ ಹರಾಜು ಹಾಕಿದರೆ ಅಭಿವೃದ್ಧಿ ಕೆಲಸಗಳಿಗೆ ಬೇಕಾಗಿರುವ ಹಣ ಲಭ್ಯವಾಗುತ್ತದೆ. ಜತೆಗೆ ಪುರಸಭೆ ಮಾಸಿಕ ಆದಾಯವೂ ವೃದ್ಧಿಯಾಗುತ್ತದೆ ಎಂದರು.

ಪಕ್ಷದ ಸದಸ್ಯರಿಂದ ಅಧಿಕಾರಿಗಳ ವಿರುದ್ಧ ಮಾಡಿದ ಆರೋಪ ಮತ್ತು ಸಮಸ್ಯೆ ಆಲಿಸಿದ ಶಾಸಕ ಸಿ.ಎಸ್‌. ಪುಟ್ಟರಾಜು ಅಧಿಕಾರಿಗಳಿಗೆ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ತಾಕೀತು ಮಾಡಿದ್ದರಲ್ಲದೇ, ವಾಣಿಜ್ಯ ಮಳಿಗೆ ವ್ಯಾಪಾರಿಗಳು, ಆಟೋನಿಲ್ದಾಣದ ಸಮಸ್ಯೆ, ಸಂತೆ ಮೈದಾನ ಒತ್ತುವರಿ ಸೇರಿದಂತೆ ಇತರೆ ವಿಚಾರ ಚರ್ಚಿಸಿ ಬಗೆಹರಿಸಲು ಏ.29 ರಂದು ಸಭೆ ನಿಗದಿಪಡಿಸಿ ಇದಕ್ಕೆ ಸಂಬಂಧ ಪಟ್ಟ ಎಲ್ಲರನ್ನೂ ಕರೆಯಿರಿ, ಸೌಹಾರ್ದಯುತವಾಗಿ ಎಲ್ಲವನ್ನು ತೀರ್ಮಾನಿಸೋಣ ಎಂದರು. ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷೆ ಶ್ವೇತಾ ಉಮೇಶ್‌, ಮುಖ್ಯಾಧಿಕಾರಿ ವೀಣಾ, ಸದಸ್ಯರಾದ ಮಹಾತ್ಮಗಾಂಧಿನಗರ ಚಂದ್ರು, ಎಚ್‌.ಡಿ.ಶ್ರೀಧರ, ಶಿವಕುಮಾರ್‌, ಸರಸ್ವತಿ, ಬಿ.ವೈ. ಬಾಬು, ಆರ್‌.ಸೋಮಶೇಖರ್‌, ಗೀತಾ, ಸುನೀತಾ, ಎಂ.ಗಿರೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.