ಎಕರೆಗೆ 50 ಸಾವಿರ ಪರಿಹಾರ ನೀಡಿ

ಕಾರ್ಖಾನೆ ಆರಂಭಿಸದಿದ್ದರೆ ಜು.8ರಿಂದ ಆಮರಣಾಂತ ಉಪವಾಸ

Team Udayavani, Jul 5, 2019, 11:29 AM IST

mandya-tdy-2..

ನೀರಿಲ್ಲದೆ ಒಣಗಿರುವ ಕಬ್ಬಿಗೆ ಪ್ರತಿ ಎಕರೆಗೆ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಮಂಡ್ಯ: ನೀರಿಲ್ಲದೆ ಒಣಗಿಹೋದ ಕಬ್ಬಿಗೆ ಕನಿಷ್ಠ ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಜಿಲ್ಲೆಯಲ್ಲಿ ಬೆಳೆದ ನಿಂತ ಬೆಳೆಗೆ ಕಾವೇರಿ ಜಲಾಶಯಗಳಿಂದ ನೀರು ಹರಿಸಲು ಸಾಧ್ಯವಾಗದೆ ಒಣಗಿಹೋಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತರ ಸಂಕಷ್ಟ ದೂರ ಮಾಡಲು ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸುಮಾರು 70 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದು ನಿಂತ ಕಬ್ಬನ್ನು ಅರೆಯಲು ತಕ್ಷಣವೇ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು. ಜೊತೆಗೆ ಮಂಡ್ಯದ ಭಾವನಾತ್ಮಕ ಆಸ್ತಿಯಾದ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ಕಾರ್ಖಾನೆಗಳನ್ನು ಉಳಿಸಿಕೊಂಡು ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು. ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಈ ವ್ಯಾಪ್ತಿಯಲ್ಲಿ ಬೆಳೆದು ನಿಂತ ಕಬ್ಬನ್ನು ಬೇರೆಡೆಗೆ ಸಾಗಿಸಲು ಅವಕಾಶ ಕಲ್ಪಿಸಿಕೊಡಬೇಕು.

ಇಲ್ಲದಿದ್ದರೆ ರೈತರು ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬಾಕಿ ಪಾವತಿಗೆ ಕ್ರಮ-ಸ್ವಾಗತ: ರೈತರು, ವಿವಿಧ ಸಂಘಟನೆಗಳ ಮುಖಂಡರ ಒತ್ತಾಯದ ಮೇರೆಗೆ ಜಿಲ್ಲಾಡಳಿತ ರೈತರ ಬಾಕಿ ಪಾವತಿಸಲು ಸಂಬಂ—ಸಿದ ಕಾರ್ಖಾನೆ ಆಡಳಿತ ಮಂಡಳಿ ಸಭೆ ಕರೆದು ಚರ್ಚಿಸಿ ಶೀಘ್ರ ಬಾಕಿ ಪಾವತಿಗೆ ಸೂಚನೆ ನೀಡಿರುವುದನ್ನು ಸ್ವಾಗತಿಸಿದರು. ಮಳೆ ಬಾರದೆ, ನಾಲೆಗಳಲ್ಲೂ ನೀರು ಹರಿಸದೆ ಜಿಲ್ಲೆಯಲ್ಲಿ ಬೆಳೆದು ನಿಂತ ಬೆಳೆ ಒಣಗುತ್ತಿದೆ. ಈಗಾಗಲೇ ಸಾಲಬಾಧೆಯಿಂದಾಗಿ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಕಬ್ಬಿನ ಬಾಕಿ ಹಣವನ್ನು ಶೀಘ್ರವೇ ರೈತರಿಗೆ ಕೊಡಿಸಿಕೊಟ್ಟಲ್ಲಿ ರೈತರಿಗೆ ಅನುಕೂಲವಾಗುತ್ತದೆ.

ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಹಣ ಕೊಡಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್‌ ಮುಖಂಡ ಡಾ. ರವೀಂದ್ರ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ವಿವಿಧ ಸಂಘಟನೆಗಳ ಮುಖಂಡರಾದ ಎಂ.ಬಿ. ನಾಗಣ್ಣ, ಸಿದ್ದರಾಜುಗೌಡ, ನಿತ್ಯಾನಂದ, ಲತಾಶಂಕರ್‌, ಸಿ.ಟಿ. ಮಂಜುನಾಥ್‌, ಎಂ. ಚಂದ್ರಶೇಖರ್‌ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.