ಮಕ್ಕಳ ಹರಿದ ಬಟ್ಟೆ ಹೊಲಿದು ಕೊಡುತ್ತಿದ್ದ ಶಿಕ್ಷಕನಿಗೆ ಪ್ರಶಸ್ತಿ
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನ ; ಶಾಲೆಯಲ್ಲಿ ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಾಣ
Team Udayavani, Sep 4, 2021, 9:17 PM IST
ಮಂಡ್ಯ: ಶಾಲಾ ಮಕ್ಕಳ ಹರಿದ ಬಟ್ಟೆ ಹೊಲಿದು ಕೊಡುತ್ತಿದ್ದ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸ್ವಾಮಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
1967ನೇ ಜೂ.20ರಂದು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಜವರಯ್ಯ-ಚನ್ನಮ್ಮ ದಂಪತಿಯ ಪುತ್ರರಾಗಿ ಜನಿಸಿದ ಸ್ವಾಮಿ ಅವರು, ಪ್ರಾಥಮಿಕ ಶಿಕ್ಷಣವನ್ನು ಬಳ್ಳೂರಿನಲ್ಲೇ ಮುಗಿಸಿದರು. ಪ್ರೌಢ ಶಿಕ್ಷಣವನ್ನು ಸಾಲಿಗ್ರಾಮದಲ್ಲಿ ಪಡೆದರೆ, ಪದವಿ ಪೂರ್ವ ಶಿಕ್ಷಣವನ್ನು ಕೆ.ಆರ್.ನಗರದಲ್ಲಿ ಮುಗಿಸಿದರು.
ಆಲಕೆರೆಯ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ:
ಕೊಡಗು ಜಿಲ್ಲೆಯ ಕೂಡಿಗೆಯಲ್ಲಿ ಟಿಸಿಎಚ್ ಮುಗಿಸಿದ ಸ್ವಾಮಿ ಅವರು 1989ರ ನವೆಂಬರ್ನಲ್ಲಿ ಮಂಡ್ಯ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿದರು. ಪ್ರಸ್ತುತ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
60 ಮಕ್ಕಳಿಗೆ ಶಿಕ್ಷಣ:
ಇವರು ಈ ಶಾಲೆಗೆ ಮುಖ್ಯ ಶಿಕ್ಷಕರಾಗಿ ನೇಮಕವಾಗಿ ಬಂದ ನಂತರ ಶಾಲೆಯನ್ನು ಭೌತಿಕವಾಗಿ ಹಾಗೂ ಶೈಕ್ಷಣಿಕವಾಗಿ ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ಮಕ್ಕಳ ಮನೆ ಮಾಡುವ ಮೂಲಕ 60 ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.
ಕೊಠಡಿಗಳಿಗೆ ಸ್ಪೀಕರ್ ಅಳವಡಿಕೆ
ದಾನಿಗಳು ಹಾಗೂ ಎಸ್ಡಿಎಂಸಿ ಸದಸ್ಯರಿಂದ ಸುಮಾರು 25 ಲಕ್ಷ ರೂ. ಸಂಗ್ರಹಿಸಿ ಶಾಲೆಯಲ್ಲಿ ರಂಗಮಂದಿರ, ಶುದ್ಧ ಕುಡಿಯುವ ನೀರು, ಸೌರ ವಿದ್ಯುತ್, ಕ್ರೀಡಾ ಸಾಮಗ್ರಿಗಳು, ಅಲ್ಮೇರಾ, ಎಜುಸ್ಯಾಟ್ ಹಾಗೂ ರೇಡಿಯೋ ಕಾರ್ಯಕ್ರಮಕ್ಕೆ ಅಗತ್ಯವಾಗಿ ಬೇಕಾಗಿರುವ ಎಲ್ಲ ಕೊಠಡಿಗಳಿಗೆ ಸ್ಪೀಕರ್ಗಳನ್ನು ಅಳವಡಿಸಿದ್ದಾರೆ.
ವಿಶೇಷವೆಂದರೆ ಶಾಲೆಗೆ ಬರುತ್ತಿದ್ದ ಮಕ್ಕಳು ಹರಿದ ಬಟ್ಟೆಯಲ್ಲಿ ಬಂದಿದ್ದರೆ, ಕೂಡಲೇ ತಾವೇ ಹರಿದ ಬಟ್ಟೆಗಳನ್ನು ಹೊಲಿದು ಕೊಡುವ ಮೂಲಕ ಮಕ್ಕಳಿಗೆ ಶಿಸ್ತು, ಸ್ವಚ್ಛತೆ, ಪರಿಸರ ಜ್ಞಾನ ಬೆಳೆಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಖುಷಿ ತಂದಿದೆ. ಪ್ರಶಸ್ತಿಯಿಂದ ನನ್ನ ಕರ್ತವ್ಯ ಪ್ರಜ್ಞೆ ಹಾಗೂ ಜವಾಬ್ದಾರಿ ಹೆಚ್ಚಿಸಿದೆ. ಶಾಲೆಯ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಶ್ರಮ ವಹಿಸಬೇಕು ಎಂಬುದನ್ನು ಪ್ರಶಸ್ತಿ ಸಾಬೀತುಪಡಿಸಿದೆ.
– ಸ್ವಾಮಿ, ಮುಖ್ಯ ಶಿಕ್ಷಕ, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್