ವೈಭವದ ವೀರಭದ್ರೇಶ್ವರ ರಥೋತ್ಸವ


Team Udayavani, May 3, 2019, 3:07 PM IST

man-2

ಕಿಕ್ಕೇರಿ: ಹೋಬಳಿಯ ಕುಂದೂರು ಗ್ರಾಮದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೀರಭದ್ರೇಶ್ವರಸ್ವಾಮಿ ಜಾತ್ರೆಯಲ್ಲಿ ರಥೋತ್ಸವ ವೈಭವವಾಗಿ ನೆರವೇರಿಸಲಾಯಿತು. ವೀರಭದ್ರೇಶ್ವರಸ್ವಾಮಿ ರಥೋತ್ಸವಕ್ಕೆ ಎತ್ತ ನೋಡಿದರೂ ಭಕ್ತ ಸಮೂಹ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ರಥೋತ್ಸವ ಕಣ್ತುಂಬಿಕೊಂಡರು. ಹರಕೆ ಹೊತ್ತ ಕುರಿಗಾಹಿಗಳು ತಂಡೋಪತಂಡವಾಗಿ ಕ್ಷೇತ್ರಕ್ಕೆ ಆಗಮಿಸಿದ್ದರು. ಗ್ರಾಮದಲ್ಲಿರುವ ದೇಗುಲದ ಬಳಿ ಭಕ್ತರು, ಗ್ರಾಮಸ್ಥರು ಸೇರಿದರು. ರಥ ತಯಾರಿಸಲು ಅಣಿಯಾದರು. ದೇಗುಲದಲ್ಲಿದ್ದ ರಥದ ಗಾಲಿಚಕ್ರಗಳನ್ನು ಒಂದೆಡೆ ಸೇರಿಸಿದರು.

ರಥದಲ್ಲಿ ಮೂರ್ತಿ ಪ್ರತಿಷ್ಠಾಪನೆ: ರಥ ನಿರ್ಮಾಣಕ್ಕೆ ಬಿದರುಬೊಂಬು ಕಟ್ಟಿಗೆಗಳನ್ನು ಕಟ್ಟಿ ಭದ್ರಪಡಿಸಿದರು. ಬಳಿಕ ರಥಕ್ಕೆ ಭಕ್ತರು ಸಮರ್ಪಿಸಿದ್ದ ವಿವಿಧ ಜರತಾರಿ, ರೇಷ್ಮೆ ಸೀರೆ, ಬಟ್ಟೆಗಳಿಂದ ಶೃಂಗರಿಸಿದರು. ವಿವಿಧ ವರ್ಣಗಳ ಧ್ಜಜ ಪತಾಕೆಗಳಿಂದ ಅಲಂಕರಿಸಿದರು. ವಿವಿಧ ಪರಿಮಳ ಪುಷ್ಪ ಮಾಲೆಯಿಂದ ರಥವನ್ನು ಪುಷ್ಪಪಲ್ಲಕ್ಕಿ ತಯಾರಿಸಿದರು.

ವೀರಭದ್ರೇಶ್ವರಸ್ವಾಮಿ ಉತ್ಸವಮೂತಿಯನ್ನು ಮೆರವಣಿಗೆ ಮಾಡುವ ಮೂಲಕ ರಥಬೀದಿಗೆ ಸಾಗಿದರು. ರಥವನ್ನು ಪ್ರದಕ್ಷಿಣೆ ಹಾಕಿಸಿ ಸ್ವಾಮಿ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಸರ್ವಾಲಂಕಾರಪ್ರಿಯ ದೇವರಿಗೆ ಅಗ್ರ ಪೂಜೆ ಸಲ್ಲಿಸಲಾಯಿತು.

ಪೂಜಾ ವಿಧಿ ವಿಧಾನ: ಅರ್ಚಕರು ರಥೋತ್ಸವ ನಿರ್ವಿಘ್ನವಾಗಿ ಸಾಗಲು ರಥದ ಸುತ್ತ ಬಲಿಯನ್ನ, ಕಳಶ ಪೂಜೆ, ನವಗ್ರಹ ಪೂಜೆಯಂತಹ ಹಲವಾರು ಪೂಜಾ ವಿಧಿ ವಿಧಾನಗಳನ್ನು ಮಾಡಿದರು. ದೇಗುಲದ ಪ್ರಧಾನ ಅರ್ಚಕರಾದ ಡಾ. ಕುಂದೂರು ಜಗದೀಶ್‌ ವೀರಭದ್ರೇಶ್ವರಸ್ವಾಮಿಗೆ ನಮಿಸಿ ವೀರಭದ್ರನ ಕುಣಿತದ ಸೇವೆಯನ್ನು ತಂಡದೊಂದಿಗೆ ದೇವರಿಗೆ ಅರ್ಪಿಸಿದರು. ಗ್ರಾಮದ ಹೊರವಲಯದಲ್ಲಿರುವ ಗುಡಿಯ ವರೆಗೆ ಎಳೆದರು. ಹೊಲಗದ್ದೆ, ಬದುಗಳು ಎನ್ನದೆ ರಥ ಹಳ್ಳ ದಿಣ್ಣೆ ಏರಿ ಉಯ್ನಾಲೆಯಂತೆ ಸುಗಮವಾಗಿ ಸಾಗಿತು. ವೀರಭದ್ರೇಶ್ವರಸ್ವಾಮಿ ಉಘೇ ಉಘೇ ಎಂದು ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ಭಕ್ತರು ಸಂಭ್ರಮ ದಿಂದ ರಥವನ್ನು ಸ್ವಸ್ಥಾನದವರಿಗೆ ಎಳೆದರು. ಭಕ್ತರು ಹಣ್ಣು, ದವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಆರೋಗ್ಯ ರಕ್ಷಣೆಗೆ ಪ್ರಾರ್ಥನೆ: ಕುರಿಗಾಹಿಗಳು ರೋಗರುಜಿನ ಬಾರದಂತೆ ದೇವರಲ್ಲಿ ಪ್ರಾರ್ಥಿಸಿ ರಥದ ಸುತ್ತ ಪ್ರದಕ್ಷಿಣೆ ಹಾಕಿಸಿ ತೀರ್ಥ ಪ್ರೋಕ್ಷಣೆ ಮಾಡಿಸಿದರು. ಯುವಕರು, ದಾನಿಗಳು ಸ್ವಯಂಪ್ರೇರಣೆಯಿಂದ ನೀರು ಮಜ್ಜಿಗೆ ಪಾನಕ, ಅನ್ನ ದಾಸೋಹವನ್ನು ವಿತರಿಸಿ ಭಕ್ತರ ಪ್ರಶಂಸೆಗೆ ಪಾತ್ರರಾದರು.

ಮಹಾರಾಷ್ಟ್ರ, ತಮಿಳುನಾಡು, ತುಮಕೂರು, ಬೆಂಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅದಿಕ ಸಂಖ್ಯೆಯಲ್ಲಿ ಭಕ್ತರು, ಕುಂದೂರು, ಬೆಡದಹಳ್ಳಿ ಸೇರಿದಂತೆ ಸುತ್ತಮುತ್ತ ಗ್ರಾಮಸ್ಥರು, ಮುಖಂಡರು, ಜನಪ್ರತಿನಿಧಿಗಳು, ವೀರಭದ್ರೇಶ್ವರಸ್ವಾಮಿಯ ಅಸಂಖ್ಯಾತ ಭಕ್ತರು ರಥ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.