ಕೋವಿಡ್ ತಡೆಯುವಲ್ಲಿ ಸರ್ಕಾರ ವಿಫಲ
Team Udayavani, May 18, 2021, 2:03 PM IST
ಮಂಡ್ಯ: ಕೋವಿಡ್ 2ನೇ ಅಲೆ ಅಪಾಯಕಾರಿ ಎಂದು ತಜ್ಞರು ವರದಿ ನೀಡಿದ್ದರೂ ಇದನ್ನು ಕೇಂದ್ರ-ರಾಜ್ಯ ಸರ್ಕಾರ ನಿರ್ಲಕ್ಷ್ಯಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ದೂರಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಕಾಲದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳದೇದೇಶದ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ.
ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಿಫಲ ವಾಗಿವೆ ಸೋಮವಾರಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
ಸಮರೋಪಾದಿಯಲ್ಲಿ ಕಾರ್ಯಕ್ರಮ ಅಗತ್ಯ: ಕೋವಿಡ್ ಹಾವಳಿ ನಿಯಂತ್ರಿಸಲು ಯುದ್ಧೋಪಾದಿಯಲ್ಲಿ ಕಾರ್ಯಕಮಗಳನ್ನುಹಮ್ಮಿಕೊಂಡು ನಿವೃತ್ತ ವೈದ್ಯರು ಇತರೆ ವೈದ್ಯ ಸಿಬ್ಬಂದಿಬಳಸಿಕೊಂಡುಅತಿಹೆಚ್ಚುಕೋವಿಡ್ ಕೇರ್ ಸೆಂಟರ್ಗಳನ್ನು ತೆರೆದು ಕೋವಿಡ್
ಸೋಂಕಿತರನ್ನು ಉಪಚರಿಸುವ ಕಾರ್ಯ ಕೈಗೊಳ್ಳದಿರುವಹಿನ್ನೆಲೆಯಲ್ಲಿಇಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮುಂದಾದರೂ ಈ ನಿಟಿ®r ಲ್ಲಿ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಮೋದಿಯಿಂದ ಏನನ್ನು ನಿರೀಕ್ಷಿಸಲು ಸಾಧ್ಯ: ದೇಶದ ಜನತೆಗೆ 30 ಸಾವಿರ ಕೋಟಿ ರೂ.ವ್ಯಯಿಸಿ ಲಸಿಕೆ ನೀಡುವ ಕಾರ್ಯಕ್ರಮವನ್ನುಜಾರಿಗೊಳಿಸಲಾಗದ ಮೋದಿ ಅವರಿಂದದೇಶದ ಜನತೆ ಏನನ್ನೂ ತಾನೇ ನಿರೀಕ್ಷಿಸಲು ಸಾಧ್ಯ?. ರಾಜ್ಯದಲ್ಲಿ ಪ್ರತಿದಿನ ಕೋವಿಡ್ಪ್ರಕರಣಗಳು ವೃದ್ದಿಯಾಗುತ್ತಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಉತ್ತಮ ಉದಾಹರಣೆಯಾಗಿದ್ದು, ಈ ಸಂಬಂಧ ಕೇಂದ್ರದ ಮೇಲೆಒತ್ತಡ ತಂದು ಸಾಂದರ್ಭಿಕ ವೈದ್ಯಕೀಯ ಪರಿಕರಗಳನ್ನು ಒದಗಿಸುವಲ್ಲಿ ರಾಜ್ಯದ ಸಂಸದರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
3ನೇ ಅಲೆ ಮೆಟ್ಟಿ ನಿಲ್ಲಲು ಸೂಕ್ತ ಮಾರ್ಗಬೇಕು: 2ನೇ ಅಲೆಗೆ ರಾಜ್ಯದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಮೂರನೇ ಅಲೆ ಆರಂಭವಾದರೆ, ಯಾವ ವಿಷಮ ಪರಿಸ್ಥಿತಿ ಉಂಟಾಗಲಿದೆ ಎಂಬುದನ್ನು ರಾಜ್ಯ ಸರ್ಕಾರ ಹಾಗೂ ಅಧಿಕಾರಿ ವರ್ಗ ಅರಿತುಕೊಳ Ûಬೇಕು. ಮುಂದಿನ ಸವಾಲುಗಳನ್ನು ಮೆಟ್ಟಿನಿಲ್ಲಲು ಸೂಕ್ತ ಮಾರ್ಗೋಪಾಯ ಕಂಡುಕೊಂಡು, ಆಕ್ಸಿಜನ್ ಉತ್ಪಾದನೆ, ತೀವ್ರ ನಿಗಾ ಘಟಕ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕು. ಸಿಎಂತುರ್ತು ಅಗತ್ಯತೆಗೆ ಹಣ ವ್ಯಯಿಸಬೇಕು ಎಂದರು.
ಮಾಜಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ, ಯುವ ಮುಖಂಡ ಗಣಿಗ ರವಿಕುಮಾರ್, ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಎಸ್.ಡಿ.ಜಯರಾಂ, ರುದ್ರಪ್ಪ, ಸಿ.ಎಂ.ದ್ಯಾವಪ್ಪ ಇತರರಿದ್ದರು.
ಆಡಳಿತ ವ್ಯವಸ್ಥೆಕ್ರಿಯಾಶೀಲವಾಗಿಲ್ಲ :
ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕ್ರಿಯಾಶೀಲತೆ ಕಂಡು ಬರುತ್ತಿಲ್ಲ. ಸಿಎಂಗಿಂತ ಸಂಪುಟದ ಸಚಿವರುಗಳು ಕ್ರಿಯಾಶೀಲತೆಯಿಂದ ಏಕಧ್ವನಿಯಲ್ಲಿ ಕೆಲಸ ಮಾಡಲು ಮುಂದಾಗುತ್ತಿಲ್ಲ. ಸಚಿವರುಗಳ ನಿರ್ಲಿಪ್ತತೆ ಎದ್ದು ಕಾಣುತ್ತಿದೆ ಎಂದು ಎನ್.ಚಲುವರಾಯಸ್ವಾಮಿ ದೂರಿದರು. ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮಧ್ಯೆ ಪ್ರವೇಶಿಸಿ ಸರ್ಕಾರಗಳಿಗೆ ನಿರ್ದೇಶನ ನೀಡಿದರೂ, ವಸ್ತುಸ್ಥಿತಿಯನ್ನು ಸರಿದಾರಿಗೆ ತರುವಲ್ಲಿ ಆಡಳಿತ ವ್ಯವಸ್ಥೆ
ವಿಫಲವಾಗಿದೆ. ಕೇಂದ್ರ ಸಚಿವ ಸದಾನಂದಗೌಡ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಸಿ.ಟಿ.ರವಿ ಕುಹುಕದ ಮಾತುಗಳು ಸರಿಯಲ್ಲ. ರಾಜ್ಯದ ಮುಖ್ಯಕಾರ್ಯದರ್ಶಿಗಳು ಅಸಹಾಯಕತೆ ವ್ಯಕ್ತಪಡಿಸುವ ಬದಲು ರಾಜ್ಯಾಂಗದತ್ತ ಅಧಿಕಾರವನ್ನು ಬಳಸಿಕೊಂಡು ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮಾರ್ಗಸೂಚಿ ಹಾಗೂ ಪರಿಹಾರಕಂಡುಹಿಡಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು