ಸರ್ಕಾರಿ ಶಾಲೆಗಳಿಗೆ ಬೇಕಿದೆ ಕಾಯಕಲ್ಪ; ಜಿಲ್ಲೆಯಲ್ಲಿ 1497 ಕೊಠಡಿ ಶಿಥಿಲಾವಸ್ಥೆ

106 ಕೊಠಡಿ ದುರಸ್ತಿಗೆ 79.50 ಲಕ್ಷ ರೂ.ಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ.

Team Udayavani, Jun 20, 2022, 6:25 PM IST

ಸರ್ಕಾರಿ ಶಾಲೆಗಳಿಗೆ ಬೇಕಿದೆ ಕಾಯಕಲ್ಪ; ಜಿಲ್ಲೆಯಲ್ಲಿ 1497 ಕೊಠಡಿ ಶಿಥಿಲಾವಸ್ಥೆ

ಮಂಡ್ಯ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ದುರಸ್ತಿಯಲ್ಲಿವೆ. ಇಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉನ್ನತ ಹುದ್ದೆ ಸೇರಿದಂತೆ ವಿವಿಧ ಸ್ತರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಬಡ ಮಕ್ಕಳ ಭವಿಷ್ಯ ರೂಪಿಸುವ ಇಂಥ ಸರ್ಕಾರಿ ಶಾಲೆಗಳು ಶಿಥಿಲಗೊಂಡು ದುರಸ್ತಿಗಾಗಿ ಕಾಯುತ್ತಿವೆ.

ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳ ಕೊಠಡಿಗಳು ಶಿಥಿಲಾವಸ್ಥೆ ತಲುಪಿವೆ. ಸರ್ಕಾರ ಕಣ್ಣು ತೆರೆದು ಅಗತ್ಯದಷ್ಟು ಅನುದಾನ ಬಿಡುಗಡೆ ಮಾಡಬೇಕಿದೆ.

ದುರಸ್ತಿಗೆ ಕಾಯುತ್ತಿರುವ 1107ಸರ್ಕಾರಿ ಶಾಲೆ: ಜಿಲ್ಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪೌಢಶಾಲೆ ಸೇರಿದಂತೆ ಒಟ್ಟು 1107 ಸರ್ಕಾರಿ ಶಾಲೆಗಳ ಕೊಠಡಿ ದುರಸ್ತಿಗಾಗಿ ಕಾಯುತ್ತಿವೆ. ಕೆ.ಆರ್‌ .ಪೇಟೆ 243, ಮದ್ದೂರು 139, ಮಳವಳ್ಳಿ 188, ಮಂಡ್ಯ ಉತ್ತರ 105, ಮಂಡ್ಯ ದಕ್ಷಿಣ 60, ನಾಗಮಂಗಲ 195, ಪಾಂಡವಪುರ 100 ಹಾಗೂ ಶ್ರೀರಂಗಪಟ್ಟಣದಲ್ಲಿ 77 ಶಾಲೆಗಳಿವೆ.

1494 ಸಣ್ಣ ಪ್ರಮಾಣದ ಶಿಥಿಲಗೊಂಡ ಕೊಠಡಿ: ಸಣ್ಣ ಪ್ರಮಾಣದಲ್ಲಿ ಶಿಥಿಲಗೊಂಡಿರುವ 1494 ಶಾಲಾ ಕೊಠಡಿಗಳಿವೆ. ಕೆ.ಆರ್‌.ಪೇಟೆ 243 ಕೊಠಡಿ, ಮದ್ದೂರು 236, ಮಳವಳ್ಳಿ 256, ಮಂಡ್ಯ ಉತ್ತರ 124, ಮಂಡ್ಯ ದಕ್ಷಿಣ 157, ನಾಗಮಂಗಲ 203, ಪಾಂಡವಪುರ 151 ಹಾಗೂ ಶ್ರೀರಂಗಪಟ್ಟಣದ 124 ಕೊಠಡಿ ದುರಸ್ತಿಯಲ್ಲಿವೆ.

1497 ಸಂಪೂರ್ಣ ಶಿಥಿಲಗೊಂಡ ಕೊಠಡಿ: ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ 1497 ಕೊಠಡಿ ಶಿಥಿಲಾವಸ್ಥೆಯಲ್ಲಿವೆ. ಕೆ.ಆರ್‌.ಪೇಟೆ 258 ಕೊಠಡಿ, ಮದ್ದೂರು 221, ಮಳವಳ್ಳಿ 255, ಮಂಡ್ಯ ಉತ್ತರ 132, ಮಂಡ್ಯ ದಕ್ಷಿಣ 123, ನಾಗಮಂಗಲ 250, ಪಾಂಡವಪುರ 119 ಹಾಗೂ ಶ್ರೀರಂಗಪಟ್ಟಣದ 139 ಕೊಠಡಿ ದುರಸ್ತಿಯಾಗಬೇಕಿದೆ.

ಸರ್ಕಾರಕ್ಕೆ 30.07 ಕೋಟಿ ರೂ.ಗೆ ಪ್ರಸ್ತಾವನೆ: ಶಾಲೆ ಹಾಗೂ ಕೊಠಡಿಗಳ ದುರಸ್ತಿಗೆ ಸರ್ಕಾರಕ್ಕೆ ರಾಜ್ಯವಲಯ, ಜಿಪಂ ಅನುದಾನ ಸೇರಿ ಒಟ್ಟು 30.07 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ರಾಜ್ಯವಲಯಕ್ಕೆ 24.58 ಕೋಟಿ ರೂ. ಹಾಗೂ ಜಿಪಂಗೆ 5.49 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಂದಾಜು ಪಟ್ಟಿ ಸಲ್ಲಿಸಿದೆ.

ಕ್ರಿಯಾ ಯೋಜನೆ ವಿವರ: ಶಾಲಾ ಕೊಠಡಿಗಳ ದುರಸ್ತಿಗೆ ಬೇಕಾಗಿರುವ ಅಗತ್ಯ ಅನುದಾನದ ಹಿನ್ನೆಲೆ 2022-23ನೇ ಸಾಲಿನ ರಾಜ್ಯ ವಲಯಕ್ಕೆ ವಿವಿಧ ಯೋಜನೆಯಡಿ ಹಣ ಬಿಡುಗಡೆಗೆ 522 ಶಾಲೆಗಳ 391 ಕೊಠಡಿಗೆ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ. ರಾಜ್ಯ ವಲಯ ಯೋಜನೆಯಡಿ ಸಾಮಾನ್ಯ ವಲಯದಿಂದ 3 ಶಾಲೆಗಳ 3 ಕೊಠಡಿ ನಿರ್ಮಾಣಕ್ಕೆ 43.80 ಲಕ್ಷ ರೂ., ಎಸ್‌ಡಿಪಿ ಯೋಜನೆಯಡಿ 58 ಪ್ರಾಥಮಿಕ ಶಾಲೆಗಳ 78 ಕೊಠಡಿ ನಿರ್ಮಾಣಕ್ಕೆ 11.38 ಕೋಟಿ ರೂ., ಎಸ್‌ಡಿಪಿ ಯೋಜನೆಯಡಿ 23 ಪ್ರಾಥಮಿಕ ಶಾಲೆಗಳ 27 ಕೊಠಡಿಗಳ ದುರಸ್ತಿಗೆ 13.50 ಲಕ್ಷ ರೂ., ಸಾಮಾನ್ಯ ವಲಯದ 30 ಪ್ರಾಥಮಿಕ ಶಾಲೆಗಳ 66 ಕೊಠಡಿಗಳ ದುರಸ್ತಿಗೆ 33 ಲಕ್ಷ ರೂ., ಸಾಮಾನ್ಯ ವಲಯ 25 ಪ್ರೌಢಶಾಲೆಗಳ 44 ಕೊಠಡಿ ನಿರ್ಮಾಣಕ್ಕೆ 7.48 ಕೋಟಿ ರೂ., ಸಾಮಾನ್ಯ ವಲಯ 32 ಪ್ರೌಢಶಾಲೆಗಳ 106 ಕೊಠಡಿ ದುರಸ್ತಿಗೆ 79.50 ಲಕ್ಷ ರೂ.ಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ.

ಶೌಚಾಲಯ, ಪೀಠೊಪಕರಣಕ್ಕೂ ಪ್ರಸ್ತಾವನೆ: ರಾಜ್ಯ ವಲಯದ ಕ್ರಿಯಾ ಯೋಜನೆಯಲ್ಲೂ ಶೌಚಾಲಯ, ಪೀಠೊಪಕರಣಗಳಿಗೂ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಕ್ಷಣ ಇಲಾಖೆ ಅನುದಾನವನ್ನು ನರೇಗಾ ಯೋಜನೆಯಡಿ ಒಗ್ಗೂಡಿಸುವಿಕೆಯೊಂದಿಗೆ 67 ಶಾಲೆಗೆ 67 ಶೌಚಾಲಯ ನಿರ್ಮಾಣಕ್ಕೆ 1.34 ಕೋಟಿ ರೂ. ಹಾಗೂ ರಾಜ್ಯ ವಲಯ ಯೋಜನೆಯಡಿ ಸರ್ಕಾರಿ ಶಾಲೆಗೆ ಅಗತ್ಯವಿರುವ ಸುಮಾರು 284 ಶಾಲೆಗೆ 5029 ಪೀಠೊಪಕರಣ ಒದಗಿಸುವಂತೆ 2.67 ಕೋಟಿ ರೂ. ಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ.

ಸರ್ಕಾರದಿಂದ ಬಿಡುಗಡೆಯಾಗದ ಅನುದಾನ: ಶಾಲಾ ಕೊಠಡಿ, ಕಟ್ಟಡಗಳ ದುರಸ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಹಲವು ವರ್ಷಗಳ ಹಿಂದೆಯೇ ಸರ್ಕಾರಕ್ಕೆ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದೆ. ಆದರೂ, ಇದುವರೆಗೂ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ. ಜಿಪಂ ಹಾಗೂ ರಾಜ್ಯವಲಯ ಸೇರಿ ವಿವಿಧ ಯೋಜನೆಯಡಿ ಅನುದಾನ ಬಿಡುಗಡೆ ಅಂದಾಜು ಪಟ್ಟಿ ಸಲ್ಲಿಸಿದ್ದರೂ ಸರ್ಕಾರದ ನಿರ್ಲಕ್ಷ್ಯ ಮುಂದುವರಿದಿದೆ.

ಮಳೆಗಾಲದಲ್ಲೇ ಶಾಲೆಗಳಲ್ಲಿ ಮಕ್ಕಳಿಗೆ ಹೆಚ್ಚು ತೊಂದರೆ
ಪ್ರಸ್ತುತ ಮಳೆಗಾಲ ಆರಂಭಗೊಂಡಿದೆ. ಜಿಲ್ಲಾದ್ಯಂತ ಈಗಾಗಲೇ ಪೂರ್ವ ಮುಂಗಾರಿನಲ್ಲಿ ಹಲವು ಶಾಲೆಗಳು ಸೋರುತ್ತಿದ್ದವು. ಅಲ್ಲಲ್ಲಿ ಶಾಲೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿತ್ತು. ಈಗ ಮುಂಗಾರು ಮಳೆ ಅಬ್ಬರಿಸುತ್ತಿದೆ. ಇದರಿಂದ ಮತ್ತೆ ದುರಸ್ತಿಯಲ್ಲಿರುವ ಶಾಲಾ ಕೊಠಡಿಗಳು
ಮಳೆ ನೀರಿನಿಂದ ಸೋರುವ ಸ್ಥಿತಿ ಎದುರಾಗಿದೆ. ಕೋವಿಡ್‌ ನಿಂದ 2 ವರ್ಷಗಳ ನಂತರ ಸರ್ಕಾರಿ ಶಾಲೆಗಳು ಆರಂಭಗೊಂಡಿವೆ. ಕೂಡಲೇ ಸರ್ಕಾರ ಇತ್ತ ಗಮನಹರಿಸಬೇಕಿದೆ.

ದಾನಿಗಳ ನೆರವು ಅಗತ್ಯ
ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ದಾನಿಗಳು, ಸಂಘ-ಸಂಸ್ಥೆಗಳು ಕೈಜೋಡಿಸಬೇಕಾಗಿದೆ. ಸರ್ಕಾರಿ ಶಾಲೆಗಳ ಉಳಿವಿನಿಂದ ಬಡ ವಿದ್ಯಾರ್ಥಿಗಳ ಶಿಕ್ಷಣ ಸುಧಾರಿಸಲಿದೆ. ಈಗಾಗಲೇ ಜಿಲ್ಲೆಯಲ್ಲಿ ಹಲವು ಶಾಲೆಗಳಲ್ಲಿ ಹಿರಿಯ ವಿದ್ಯಾರ್ಥಿಗಳು, ದಾನಿಗಳು, ಸಂಘ-ಸಂಸ್ಥೆಗಳು ಕೈಜೋಡಿಸುವ ಮೂಲಕ ಕಾಯಕಲ್ಪಕ್ಕೆ ಮುಂದಾಗಿವೆ. ಈ ನೆರವು ಇನ್ನೂ ಹೆಚ್ಚಾಗಬೇಕಿದೆ.

ಶಾಲೆ ಕೊಠಡಿಗಳ ನಿರ್ಮಾಣ, ಶಿಥಿಲಗೊಂಡಿರುವ ಶಾಲಾ ಕೊಠಡಿ ದುರಸ್ತಿಗೆ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಪಂ ಹಾಗೂ ರಾಜ್ಯವಲಯದ ಅನುದಾನಕ್ಕೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸಲಾಗಿದೆ.
ಡಾ.ಜವರೇಗೌಡ,
ಉಪನಿರ್ದೇಶಕ, ಸಾರ್ವಜನಿಕ
ಶಿಕ್ಷಣ ಇಲಾಖೆ, ಮಂಡ್ಯ

ಎಚ್‌.ಶಿವರಾಜು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.