ಗ್ರಾಪಂ: ಇನ್ನೇನಿದ್ದರೂ ಫಲಿತಾಂಶದತ್ತ ಎಲ್ಲರ ಚಿತ್ತ


Team Udayavani, Dec 28, 2020, 6:02 PM IST

ಗ್ರಾಪಂ: ಇನ್ನೇನಿದ್ದರೂ ಫಲಿತಾಂಶದತ್ತ ಎಲ್ಲರ ಚಿತ್ತ

ಮಂಡ್ಯ: ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ರಾಜಕೀಯ ಗರಿಗೆದರಿತ್ತು. ಗ್ರಾಮ ಪಂಚಾಯಿತಿ ಚುನಾವಣೆ ಡಿ.1ರಂದು ಘೋಷಣೆಯಾಗುತ್ತಿದ್ದಂತೆರಾಜಕೀಯ ಪಕ್ಷಗಳ ಮುಖಂಡರು, ಆಕಾಂಕ್ಷಿಗಳುಇನ್ನಿಲ್ಲದಂತೆ ಚುನಾವಣೆಗೆ ತಯಾರಿಯಲ್ಲಿ ತೊಡಗಿದ್ದರು. ಆದರೆ, ಈಗ ಅದು ಮುಗಿದಿದ್ದು, ಫಲಿತಾಂಶದತ್ತ ಚಿತ್ತ ನೆಟ್ಟಿದ್ದಾರೆ.

ಜಿಲ್ಲೆಯ ಪ್ರತೀ ಗ್ರಾಮಗಳಲ್ಲೂಚುನಾವಣೆ ಹಬ್ಬದ ವಾತಾವರಣನಿರ್ಮಾಣವಾಗಿತ್ತು. ಚುನಾವಣೆ ಸ್ಪರ್ಧೆಗೆಆಕಾಂಕ್ಷಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಗ್ರಾಮದಲ್ಲಿ ಓಡಾಡಿದರು. ಸ್ಪರ್ಧೆಗೆ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದರು. ಅಲ್ಲದೆ,

ಎದುರಾಳಿ, ಪ್ರತಿಸ್ಪರ್ಧಿಗಳ ಮನವೊಲಿಕೆಗಳು, ರಾಜಿ ಸಂಧಾನ, ಪಂಚಾಯಿತಿಗಳು ನಡೆಯುತ್ತಿದ್ದವು. ನಂತರ ಕೆಲವೊಂದು ಕಡೆ ಸದಸ್ಯಸ್ಥಾನಗಳ ಹರಾಜುಗಳು ನಡೆದವು. ಮತ್ತೆಕೆಲವು ಗ್ರಾಮಗಳಲ್ಲಿ ದೇಗುಲ ಅಭಿವೃದ್ಧಿಗೆ ಹಣ ನೀಡುವ ಭರವಸೆ ಮೇಲೆ ಅವಿರೋಧಆಯ್ಕೆ ನಡೆದರೆ, ಕೆಲವು ಕಡೆ ಯಾವುದೇ ಅಭ್ಯರ್ಥಿಗಳಿಲ್ಲದೆ ಅವಿರೋಧ ನಡೆದವು. ಈ ನಡುವೆ ಸ್ಪರ್ಧಿಗಿಳಿದ ಅಭ್ಯರ್ಥಿಗಳು ಗೆಲ್ಲಲೇಬೇಕು ಎಂಬ ಹಠದಲ್ಲಿ ತೀವ್ರ ಜಿದ್ದಾಜಿದ್ದಿ ನಿಂದ ಕಣಕ್ಕಿಳಿದಿದ್ದರು. ಪ್ರತಿದಿನ ಗ್ರಾಮದ ಮುಖಂಡರು, ಮತದಾರರಿಗೆ ಹಣದ ಹೊಳೆ,ಬಾಡೂಟ, ಮದ್ಯವನ್ನೇ ಹರಿಸಿದರು. ಗ್ರಾಮ ಮಟ್ಟದಲ್ಲಿ ನಡೆಯುವ ಚುನಾವಣೆಯಾಗಿದ್ದು, ಸ್ಥಳೀಯ ಮುಖಂಡರೇ ಸ್ಪರ್ಧಿಸಿದ್ದರಿಂದ ಚುನಾವಣೆಗೆ ಕಳೆ ಬಂದಿತ್ತು. ಯಾವವಿಧಾನಸಭೆ, ಲೋಕಸಭೆ ಚುನಾವಣೆಗಳು ನಡೆಯದ ರೀತಿಯಲ್ಲಿ ಚುನಾವಣೆ ನಡೆಯಿತು.

ಗ್ರಾಮ ಪಂಚಾಯಿತಿ ಚುನಾವಣೆಯಿಂದ ಈಗಾಗಲೇ ಗ್ರಾಮಗಳಲ್ಲಿ ರಾಜಕೀಯದ್ವೇಷಗಳು ಹುಟ್ಟಿಕೊಂಡರೆ, ಕೆಲವೆಡೆ ದೂರವಾಗಿದ್ದ ಸಂಬಂಧಗಳು ಚುನಾವಣೆ ದೃಷ್ಟಿ ಯಿಂದಹತ್ತಿರವಾಗಿದ್ದಾರೆ. ಸ್ನೇಹದಲ್ಲಿ ಬಿರುಕು ಬಿಟ್ಟಿದೆ. ಸಂಬಂಧಿಕರಲ್ಲಿ ಮನಸ್ತಾಪ ಉಂಟಾಗಿದೆ. ಕೆಲವು ಗ್ರಾಮಗಳಲ್ಲಿ ಅಣ್ಣ, ತಮ್ಮಂದಿರು, ಅತ್ತೆ ಸೊಸೆಯಂದಿರು ಹೀಗೆ ಸಾಲು ಸಾಲು ಸಂಬಂಧಗಳಿಗೆ ಚುನಾವಣೆಯಿಂದ ಭಿನ್ನಮತ ಹುಟ್ಟು ಹಾಕಿದೆ.

ನೀರವ ಮೌನ: ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಗ್ರಾಮಗಳಲ್ಲಿ ನೀರವ ಮೌನ ‌ಆವರಿಸಿದೆ. ಜಿಲ್ಲೆಯ 7 ತಾಲೂಕುಗಳ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿಚುನಾವಣೆ ಹಬ್ಬದ ಸಂಭ್ರಮವಿಲ್ಲದಂತಾಗಿದೆ.ಪ್ರತಿದಿನ ಬೆಳಗ್ಗೆ, ರಾತ್ರಿ ಕಾರ್ಯಕರ್ತರು,ಅಭ್ಯರ್ತಿಗಳಿಂದ ಗಿಜಿಗುಡುತ್ತಿದ್ದ ಗ್ರಾಮದ ಬೀದಿಗಳು ಮೌನವಾಗಿವೆ.

ಲಕ್ಷಾಂತರ ರೂ. ಖರ್ಚು: ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಅಭ್ಯರ್ಥಿಗಳು ಗೆಲುವಿಗಾಗಿ ಲಕ್ಷಾಂತರ ರೂ. ಹಣ ಖರ್ಚು ಮಾಡಿದ್ದಾರೆ. ತೀವ್ರ ಪೈಪೋಟಿ ಇರುವ ಕೆಲವೊಂದು ಗ್ರಾಮಗಳಲ್ಲಿ 5ರಿಂದ 10 ಲಕ್ಷ ರೂ.ವರೆಗೂ ಹಣ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಗೆ ಈ ರೀತಿಯಲ್ಲಿ ಅಭ್ಯರ್ಥಿಗಳು ಹಣ ಖರ್ಚುಮಾಡುತ್ತಿದ್ದಾರೆ. ಇನ್ನು ಮುಂದಿನ ತಾಪಂ, ಜಿಪಂ ಚುನಾವಣೆಗಳು ಬರಲಿದ್ದು, ಯಾವ ಮಟ್ಟಿಗೆ ಅಭ್ಯರ್ಥಿಗಳು ಹಣ ಖರ್ಚು ಮಾಡಲಿದ್ದಾರೆ ಎಂಬ ಚರ್ಚೆಗಳು ಗ್ರಾಮಗಳಲ್ಲಿ ನಡೆಯುತ್ತಿದೆ.

ನಿರಾಳದ ನಡುವೆ ಫಲಿತಾಂಶದತ್ತ ಚಿತ್ತ :

ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ತಿಂಗಳ ಓಡಾಟಕ್ಕೆ ಬ್ರೇಕ್‌ತೆಗೆದುಕೊಂಡು ನಿರಾಳ ಮನಸ್ಥಿತಿಯಲ್ಲಿದ್ದಾರೆ. ಇದರ ನಡುವೆಫಲಿತಾಂಶ ಏನಾಗಬಹುದು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ. ಮತದಾನ ಮುಗಿದು ಮತಪೆಟ್ಟಿಗೆಗಳುಸ್ಟ್ರಾಂಗ್‌ ರೂಂ ಸೇರಿವೆ. ಗ್ರಾಮದಲ್ಲಿ ಯಾರ್ಯಾರುನಮಗೆ ಮತ ಹಾಕಿದ್ದಾರೆ. ಎಷ್ಟು ಮತಗಳು ಬರಲಿವೆ ಎಂಬ ಲೆಕ್ಕಾಚಾರದಲ್ಲಿ ಬ್ಯುಸಿಯಾಗಿದ್ದಾರೆ.

ಬೆಟ್ಟಿಂಗ್‌ ಭರಾಟೆ ಜೋರು.. :  ಜಿದ್ದಾಜಿದ್ದಿನಿಂದ ನಡೆದಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಅಭ್ಯರ್ಥಿಗಳ ಪರ ಬೆಟ್ಟಿಂಗ್‌ ಜೋರಾಗಿದೆ. ಗ್ರಾಮ ಮಟ್ಟದಲ್ಲಿ ಯುವಕರು, ಮುಖಂಡರು, ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಬೆಟ್ಟಿಂಗ್‌ ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ಮೊದಲ ಹಂತದ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಲ್ಲಿ ಬೆಟ್ಟಿಂಗ್‌ ವಿಷಯಗಳು ಬೆಳಕಿಗೆ ಬರುತ್ತಿವೆ. ಇನ್ನೂ ಎರಡನೇ ಹಂತದ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್‌.ಪೇಟೆ ಹಾಗೂ ನಾಗಮಂಗಲತಾಲೂಕುಗಳಲ್ಲಿ ಮತದಾನ ಮುಗಿದಿದ್ದು, ಅಭ್ಯರ್ಥಿಗಳ ಪರ ಬೆಟ್ಟಿಂಗ್‌ ಕಟ್ಟಲು ಸಿದ್ಧತೆಗಳು ನಡೆದಿದ್ದು, ಡಿ.30ರಂದು ಎಲ್ಲದಕ್ಕೂ ಮತದಾರರ ಅಂತಿಮ ನಿರ್ಧಾರ ಹೊರ ಬೀಳಲಿದೆ.

ಹೆಚ್ಚು ಸ್ಥಾನದ ನಿರೀಕ್ಷೆಯಲ್ಲಿ ನಾಯಕರು :  ಜಿಲ್ಲೆಯ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ನಾಯಕರು ಹೆಚ್ಚಿನ ಸ್ಥಾನಗಳ ನಿರೀಕ್ಷೆಯ ಲೆಕ್ಕಾಚಾರದಲ್ಲಿದ್ದಾರೆ. ಈಗಾಗಲೇ ಜಿಲ್ಲೆಯಾದ್ಯಂತ ಒಟ್ಟಾರೆಯಾಗಿ 548 ಅವಿರೋಧ ಆಯ್ಕೆ ನಡೆದಿದ್ದು,ಇದರಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ಪಕ್ಷಗಳ ಬೆಂಬಲಿತರು ಇದ್ದಾರೆ. ಇನ್ನೂ ಮತದಾನ ನಡೆದಿದರುವ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ತಾಲೂಕು ಅಧ್ಯಕ್ಷರಿಂದ ಎಷ್ಟು ಸ್ಥಾನ ಗೆಲ್ಲಬಹುದು ಎಂಬ ಮಾಹಿತಿಯನ್ನು ಹಾಲಿ-ಮಾಜಿ ಶಾಸಕರು, ಪಕ್ಷಗಳ ಜಿಲ್ಲಾಧ್ಯಕ್ಷರು ಪಡೆಯುತ್ತಿದ್ದಾರೆ.

 

ಎಚ್‌.ಶಿವರಾಜು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.