![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಅನುದಾನ ತಾರತಮ್ಯ: ಪ್ರತಿಭಟನೆ
Team Udayavani, Dec 29, 2019, 4:19 PM IST
![mandya-tdy-2](https://www.udayavani.com/wp-content/uploads/2019/12/mandya-tdy-2-14-620x338.jpg)
ಮಳವಳ್ಳಿ: ಪುರಸಭೆಯ ಕೆಲವೊಂದು ವಾರ್ಡ್ಗಳಿಗೆ ಶಾಸಕರು ಹಾಗು ಅಧಿಕಾರಿಗಳು ಅನುದಾನ ನೀಡದೇ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪುರಸಭೆ ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಪಟ್ಟಣದ ಪುರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ಶಾಸಕರು 23 ಪುರಸಭೆ ಸದಸ್ಯರನ್ನು ಕರೆಸಿ ಸಭೆ ನಡೆಸಿ ವಾರ್ಡ್ಗಳಿಗೆ ಅವಶ್ಯಕವಿರುವ ಕಾಮಗಾರಿಗಳನ್ನು ನಡೆಸುವ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದರು. ಆದರೇ ಸರ್ಕಾರದಿಂದ ಪ್ರಸಕ್ತ ಸಾಲಿನಲ್ಲಿ ಬಂದಂತಹ 2.49 ಕೋಟಿ ರೂ. ಅನುದಾನದಲ್ಲಿ 23 ವಾರ್ಡ್ ಗಳಿಗೂ ಹಂಚಿಕೆ ಮಾಡಬೇಕಿತ್ತು. ಆದರೇ 3,4,8,15,18,19,21 ವಾರ್ಡ್ ಗಳಿಗೆ ಯಾವುದೇ ಅನುದಾನ ನೀಡಿಲ್ಲ, ಬೇರೆ ವಾರ್ಡ್ಗಳಿಗೆ ಎರಡು ಮೂರು ಭಾರಿ ಅನುದಾನ ನೀಡುತ್ತಿದ್ದರೂ ರಾಜಕೀಯ ವೈಷಮ್ಯದಿಂದ ನಮ್ಮ ವಾರ್ಡ್ಗಳಿಗೆ ಅನುದಾನ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕ ಕೆಲಸಗಳು ಯಾವುದೂ ನಡೆಯುತ್ತಿಲ್ಲ. ಇಲ್ಲಿರುವ ಅಧಿಕಾರಿಗಳು ಇಷ್ಟಬಂದ ರೀತಿಯಲ್ಲಿ ವರ್ತಿಸುತ್ತಾರೆ. ಇಲ್ಲಿ ಹೇಳುವವರೂ ಕೇಳುವವರು ಯಾರೂ ಇಲ್ಲದಂತಾಗಿದೆ ಈ ಬಗ್ಗೆ ಜನಪ್ರತಿನಿಧಿಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. 19ನೇ ವಾಡ್ ಪುರಸಭೆ ಸದಸ್ಯ ಶಿವಸ್ವಾಮಿ, 15ನೇ ವಾರ್ಡ್ನ ರಾಜಶೇಖರ್ ಪುರಸಭೆ ಮಾಜಿ ಸದಸ್ಯರಾದ ಗಂಗರಾಜೇ ಅರಸ್, ಕೃಷ್ಣ, ವೆಂಕಟೇಶ್ ಇತರರು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.