ಅಪಾಯದ ಸ್ಥಿತಿ ತಲುಪಿದ ಅಂತರ್ಜಲ

ಮಿತಿ ಮೀರಿದ ಬಳಕೆ, ಮರುಪೂರಣ ಮರೀಚಿಕೆ • ಅರೆ ಕ್ಲಿಷ್ಟಕರ ಪ್ರದೇಶಕ್ಕೆ ಸೇರಿದ ಮಳವಳ್ಳಿ ತಾಲೂಕು

Team Udayavani, Jul 29, 2019, 11:53 AM IST

mandya-tdy-2

ಮಂಡ್ಯ: ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕ್ಷೀಣಿಸುತ್ತಿರುವ ಮಾದರಿಯಲ್ಲೇ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವೂ ಕುಸಿಯುತ್ತಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಸರಾಸರಿ 9.97 ಮೀಟರ್‌ನಷ್ಟು ಇಳಿಕೆ ಕಂಡಿದ್ದ ಅಂತರ್ಜಲ ಮಟ್ಟ ಈ ವರ್ಷ ಜುಲೈ ಅಂತ್ಯದವರೆಗೆ 11.94 ಮೀ.ಗೆ ಜಾರಿದೆ. ಇದರೊಂದಿಗೆ ಅಪಾಯದ ಕರಗಂಟೆ ಮೊಳಗಿಸಿದೆ.

ಅಂತರ್ಜಲವನ್ನು ಮನಸೋಇಚ್ಚೆ ಬಳಸಲಾಗುತ್ತಿದೆ. ಅದರ ಮೇಲೆ ಯಾರೂ ನಿಯಂತ್ರಣ ವಿಧಿಸುವ ಪ್ರಯತ್ನವನ್ನೂ ನಡೆಸುತ್ತಿಲ್ಲ. ಅಂತರ್ಜಲ ಅಭಿವೃದ್ಧಿಗೆ ಪೂರಕವಾದ ಯಾವೊಂದು ಪರಿಣಾಮಕಾರಿ ಕ್ರಮಗಳೂ ಜಾರಿಯಾಗುತ್ತಿಲ್ಲ. ಕೆರೆ-ಕಟ್ಟೆಗಳು ಕಣ್ಮರೆಯಾಗುತ್ತಿದ್ದು, ಮಳೆಗಾಲದ ಅವಧಿಯಲ್ಲಿ ಮಳೆಯೂ ಕುಂಠಿತಗೊಳ್ಳುತ್ತಿದೆ. ಇದರಿಂದ ಅಂತರ್ಜಲ ಮರುಪೂರಣ ಮರೀಚಿಕೆಯಾಗಿ ಉಳಿದಿದೆ.

ಅಂತರ್ಜಲ ಮೌಲೀಕರಣ ವರದಿ: 2012-13ರ ಅಂತರ್ಜಲ ಮೌಲೀಕರಣ ವರದಿ ತಯಾರಾಗಿತ್ತು. ಇದರಲ್ಲಿ ಅತಿ ಬಳಕೆ, ಕ್ಲಿಷ್ಟಕರ, ಅರೆ ಕ್ಲಿಷ್ಟಕರ ಹಾಗೂ ಸುರಕ್ಷಿತ ಪ್ರದೇಶಗಳೆಂದು ಪ್ರತಿಯೊಂದು ತಾಲೂಕುಗಳನ್ನು ವರ್ಗೀಕರಿಸಲಾಗಿತ್ತು. ಪ್ರತಿ ಐದು ವರ್ಷಗಳಿಗೊಮ್ಮೆ ಈ ಮೌಲ್ಯೀಕರಣ ನಡೆಸಲಾಗುತ್ತದೆ. ಅದರಂತೆ 2012ರಲ್ಲಿ ಅಂತರ್ಜಲ ಬಳಕೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳು ಸುರಕ್ಷಿತ ವಲಯದಲ್ಲಿದ್ದವು. ಮಳವಳ್ಳಿ ಶೇ.64, ಕೆ.ಆರ್‌.ಪೇಟೆ ಶೇ.63 ಹಾಗೂ ನಾಗಮಂಗಲ ಶೇ.62ರಷ್ಟು ಅಂತರ್ಜಲ ಬಳಸುವುದು ಕಂಡುಬಂದಿತ್ತು.

2017ರಲ್ಲಿ ನಡೆದ ಮೌಲ್ಯೀಕರಣ ವರದಿಯಲ್ಲಿ ಪ್ರಸ್ತಾಪಿಸಿರುವಂತೆ ಮಂಡ್ಯ ತಾಲೂಕು ಶೇ.44, ಕೆ.ಆರ್‌.ಪೇಟೆ ಶೇ.67, ನಾಗಮಂಗಲ ಶೇ.62, ಪಾಂಡವಪುರ ಶೇ.58, ಶ್ರೀರಂಗಪಟ್ಟಣ ಶೇ.44, ಮದ್ದೂರು ಶೇ.56ರಷ್ಟು ಅಂತರ್ಜಲ ಬಳಕೆಯೊಂದಿಗೆ ಸುರಕ್ಷಿತ ವಲಯದಲ್ಲಿದ್ದರೆ ಮಳವಳ್ಳಿ ತಾಲೂಕು ಶೇ.71ರಷ್ಟು ಅಂತರ್ಜಲ ಬಲಕೆಯೊಂದಿಗೆ ಅರೆ ಕ್ಲಿಷ್ಟಕರ ಪ್ರದೇಶಕ್ಕೆ ಸೇರ್ಪಡೆಯಾಗಿದೆ.

ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆಗಾಲದ ಅವಧಿಯಲ್ಲಿ ಮಳೆಯಾಗದಿದ್ದರೆ, ಕೆರೆ-ಕಟ್ಟೆಗಳು, ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾದಲ್ಲಿ ಅಂತರ್ಜಲ ಗಂಭೀರ ಸ್ಥಿತಿ ತಲುಪುವುದರಲ್ಲಿ ಯಾವ ಸಂದೇಹವಿಲ್ಲ. ಮುಖ್ಯವಾಗಿ ಕುಡಿಯುವ ನೀರಿಗೆ ಅಂತರ್ಜಲವನ್ನೇ ಸಂಪೂರ್ಣವಾಗಿ ಅವಲಂಬಿಸಬೇಕಾದ ಸನ್ನಿವೇಶ ಸೃಷ್ಟಿಯಾಗುವ ಸಾಧ್ಯತೆಗಳಿವೆ.

ನಿರ್ದಿಷ್ಟ ಮಿತಿ ಇಲ್ಲ: ಅಂತರ್ಜಲ ಎನ್ನುವುದು ಅತ್ಯಮೂಲ್ಯ ನೈಸರ್ಗಿಕ ಸಂಪತ್ತಾಗಿದ್ದರೂ ಅದರ ಬಳಕೆಗೆ ಯಾವುದೇ ನಿರ್ದಿಷ್ಟ ಮಿತಿ ಹಾಕಿಕೊಂಡಿಲ್ಲ. ಅದನ್ನು ಅಭಿವೃದ್ಧಿಪಡಿಸುವ ಇಚ್ಛಾಶಕ್ತಿ, ಬದ್ಧತೆ ಯಾರಿಗೂ ಇಲ್ಲ. ಬಳಕೆಗೆ ನೀಡುತ್ತಿರುವ ಪ್ರಾಮುಖ್ಯತೆಯನ್ನು ಮರುಪೂರಣಕ್ಕೆ ನೀಡದಿರುವುದೇ ಅಂತರ್ಜಲ ಪಾತಾಳ ಸೇರಿಕೊಳ್ಳುವುದಕ್ಕೆ ಕಾರಣವಾಗಿದೆ.

ಭೂಮಿಯೊಳಗಿರುವ ನೀರನ್ನು ಒಂದು ಹಂತದವರೆಗೆ ಬಳಕೆ ಮಾಡಿದರೆ ಉತ್ತಮ. ನಿರ್ದಿಷ್ಟ ಹಂತವನ್ನು ಮೀರಿ ಬಳಸುವುದಕ್ಕೆ ಮುಂದಾದರೆ ನೀರಿನ ಗುಣಮಟ್ಟದ ಮೇಲೆ ಅಷ್ಟೇ ಪರಿಣಾಮ ಬೀರುತ್ತದೆ. ಸಕಾಲದಲ್ಲಿ ಮಳೆಯಾಗದೆ ಏರು-ಪೇರಾಗುತ್ತಿದೆ. ಇದರಿಂದ ಅಂತರ್ಜಲ ಪೂರೈಕೆಗಿಂತ ಬಳಕೆಯೇ ಹೆಚ್ಚಾಗುತ್ತಿದೆ. ಇದರಿಂದ ಅಸಮತೋಲನ ಉಂಟಾಗುತ್ತಿದೆ. ಇದನ್ನು ಸಮತೋಲನ ಸ್ಥಿತಿಗೆ ತರುವುದಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವುದು ಪ್ರಸ್ತುತ ಅಗತ್ಯ ಮತ್ತು ಅನಿವಾರ್ಯವೆನಿಸಿದೆ.

ಮರುಪೂರಣ ನಿರ್ಲಕ್ಷ್ಯ: ಅಂತರ್ಜಲ ಮರುಪೂರಣಕ್ಕೆ ಪೂರಕವಾಗಿ ಚೆಕ್‌ ಡ್ಯಾಮ್‌, ಕಾಂಟರ್ಬಂಡ್ಸ್‌, ಪಿಕಪ್‌, ಮಳೆ ನೀರು ಕೊಯ್ಲು, ಹೊಸ ಕೆರೆಗಳ ನಿರ್ಮಾಣ, ಹಳೆ ಕೆರೆಗಳ ಪುನಶ್ಚೇತನ, ಬಾವಿಗಳಿಗೆ ಮರುಜೀವ ನೀಡುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಜಾರಿಗೆ ತರಬೇಕು. ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಂಬಂಧಿಸಿದ ಇಲಾಖೆಗಳು ತ್ವರಿತ ಕ್ರಮ ಜರುಗಿಸಬೇಕಿದೆ. ಇಲಾಖೆಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದಾಗಿ ಅಂತರ್ಜಲ ಮರುಪೂರಣ ಕಾರ್ಯಕ್ರಮಗಳು ಹಳ್ಳ ಹಿಡಿಯುವಂತಾಗಿದೆ.

ಮಳೆಕೊಯ್ಲು ಕಡ್ಡಾಯಾಗಬೇಕಿದೆ: ಸರ್ಕಾರಿ ಕಟ್ಟ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಇಲಾಖೆಗಳಿಗೆ ಕಾಮಗಾರಿಗಳ ಅಂದಾಜುಪಟ್ಟಿ ತಯಾರಿಸುವಾಗಲೇ ಮಳೆ ಕೊಯ್ಲು ರಚನೆಯನ್ನು ಅಳವಡಿಸಿಕೊಳ್ಳಲು ಹಾಗೂ ಪಟ್ಟಣ ಪ್ರದೇಶಗಳಲ್ಲಿ ಸ್ವಂತ ಕಟ್ಟಡ ಹೊಂದಿರುವ ವಿವಿಧ ಇಲಾಖಾ ಸರ್ಕಾರಿ ಕಟ್ಟಡಗಳಿಗೆ ಕಡ್ಡಾಯ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳುವ ಅಗತ್ಯವಿದೆ.

ಜಿಲ್ಲೆಯ ಪಟ್ಟಣ, ಪುರಸಭೆ, ಪಟ್ಟಣ ಹಾಗೂ ಗ್ರಾಪಂ ವ್ಯಾಪ್ತಿಗಳಲ್ಲೂ ಮಳೆ ನೀರು ಸಂಗ್ರಹಣಾ ಘಟಕಗಳನ್ನು ಕೊಳಬೆ ಬಾವಿಗಳಿಗೆ ನೀರು ಇಂಗಿಸುವ ವ್ಯವಸ್ಥೆಯನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕಿದೆ.

ಮಳೆ ಜತೆಗೆ ಕೆರೆಗಳೂ ಮಾಯ: ಮಳೆಗಾಲದಲ್ಲಿ ವಾಡಿಕೆಯಂತೆ ಮಳೆಯಾಗದೆ ಮಾಯವಾಗುತ್ತಿರುವ ಬೆನ್ನಹಿಂದೆಯೇ ಅಂತರ್ಜಲಕ್ಕೆ ಸಂಜೀವಿನಿಯಂತಿರುವ ಕೆರೆಗಳೂ ಮಾಯವಾಗುತ್ತಿವೆ. ರಾಜ್ಯಸರ್ಕಾರ ಹಾಲಿ ಇರುವ ಕೆರೆಗಳನ್ನೂ ಉಳಿಸಿಕೊಳ್ಳುತ್ತಿಲ್ಲ. ಹೊಸ ಕೆರೆಗಳನ್ನೂ ನಿರ್ಮಿಸುತ್ತಿಲ್ಲ. ಬಹುತೇಕ ಕೆರೆಗಳು ಒತ್ತುವರಿಯಾಗಿದ್ದರೂ ತೆರವಿಗೆ ಮುಂದಾಗುತ್ತಿಲ್ಲ.

ಕಳೆದ ವರ್ಷ ವಾಡಿಕೆಗಿಂತಲೂ ಹೆಚ್ಚು ಮಳೆ ಸುರಿದು ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನೂರಾರು ಟಿಎಂಸಿ ನೀರು ಹರಿದುಹೋಯಿತು. ಅದರಲ್ಲಿ ಹನಿ ನೀರನ್ನು ಸಂಗ್ರಹಿಸಿಡಲು ಸಾಧ್ಯವಾಗಲೇ ಇಲ್ಲ. ನಮ್ಮಲ್ಲಿ ನೀರು ಸಂಗ್ರಹ ಮಾಡಿಕೊಳ್ಳುವುದಕ್ಕೆ ಪರ್ಯಾಯ ವ್ಯವಸ್ಥೆಗಳು ಇಲ್ಲದಿರುವುದು ದೊಡ್ಡ ಲೋಪವಾಗಿದೆ. ಆದರೂ ಇಂದಿರೂ ಸರ್ಕಾರವಾಗಲೀ, ಸ್ಥಳೀಯ ಜಿಲ್ಲಾಡಳಿತವಾಗಲೀ ಕೆರೆಗಳ ಪುನಶ್ಚೇತನ, ಒತ್ತುವರಿ ತೆರವು, ಹೊಸ ಕೆರೆಗಳ ನಿರ್ಮಾಣಕ್ಕೆ ಆಸಕ್ತಿಯನ್ನೇ ತೋರದಿರುವುದು ದೊಡ್ಡ ದುರಂತವಾಗಿದೆ.

ಅಂತರ್ಜಲ ರಕ್ಷಣೆ ಸವಾಲು: ಪ್ರಸ್ತುತ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಕೆರೆಗಳಿದ್ದರೂ ಶೇ.90ರಷ್ಟು ಕೆರೆಗಳು ನೀರಿಲ್ಲದೆ ಭಣಗುಡುತ್ತಿವೆ. ಮೊದಲು ನಾಲೆಗಳಲ್ಲಿ ನೀರು ಮಣ್ಣಿನ ಮೇಲೆ ಹರಿಯುತ್ತಿತ್ತು. ಆ ಸಂದರ್ಭಗಳಲ್ಲಿ ನಾಲೆಗಳಲ್ಲಿ ನೀರು ಹರಿಸಿದರೆ ಸುತ್ತಮುತ್ತಲ ಕೊಳವೆ ಬಾವಿಗಳು ಜೀವಕಳೆ ಪಡೆದುಕೊಳ್ಳುತ್ತಿದ್ದವು. ಈಗ ನಾಲೆಗಳಿಗೆ ಕಾಂಕ್ರೀಟ್ ಅಳವಡಿಸಿರುವುದರಿಂದ ನಾಲೆಗಳ ಪಕ್ಕದಲ್ಲಿರುವ ಕೊಳವೆ ಬಾವಿಗಳು ಬತ್ತಿಹೋಗುವ ಸ್ಥಿತಿ ತಲುಪಿವೆ. ಹೀಗಾಗಿ ಅಂತರ್ಜಲ ರಕ್ಷಣೆ ಸವಾಲಾಗಿದೆ.

 

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.