ತಾರಸಿ ಮೇಲೆ ತರಕಾರಿ ಬೆಳೆದು ಆರೋಗ್ಯ ಕಾಪಾಡಿಕೊಳ್ಳಿ

ಗೃಹಿಣಿಯರಿಗೆ ಸಲಹೆ ನೀಡಿದ ತೋಟಗಾರಿಕೆ ಕಚೇರಿ ಹೆಚ್ಚುವರಿ ನಿರ್ದೇಶಕ ಡಾ.ಎಂ.ಪ್ರಕಾಶ್‌

Team Udayavani, May 20, 2019, 2:28 PM IST

mandya-tdy-9..

ತೋಟಗಾರಿಕೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ತಾರಸಿ ಕೈತೋಟಗಳ ಉತ್ತೇಜನ ಕುರಿತ ತರಬೇತಿ ನೀಡಲಾಯಿತು.

ಮಂಡ್ಯ: ನಮಗೆ ಬೇಕಾದ ಸೊಪ್ಪು, ತರಕಾರಿ ಸಾವಯವ ಪದ್ಧತಿಯಲ್ಲಿ ಮನೆಗಳ ತಾರಸಿ ಮೇಲೆ ಬೆಳೆದು ಉಪಯೋಗಿಸಿದರೆ ಆರೋಗ್ಯ ಸುಧಾರಣೆ ಹಾಗೂ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಬೆಂಗಳೂರಿನ ಲಾಲ್ಬಾಗ್‌ ನರ್ಸರಿ ತೋಟಗಾರಿಕೆ ಕಚೇರಿ ಹೆಚ್ಚವರಿ ನಿರ್ದೇಶಕ ಡಾ.ಪ್ರಕಾಶ್‌ ಎಂ. ಸಬರದ ಸಲಹೆ ನೀಡಿದರು.

ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ತಾರಸಿ ಕೈತೋಟಗಳ ಉತ್ತೇಜನ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿನಿತ್ಯ ನಾವು ಆಹಾರದಲ್ಲಿ ಸೊಪ್ಪು, ತರಕಾರಿ ಉಪಯೋಗಿಸುತ್ತೇವೆ. ಆದರೆ ಅವು ಎಲ್ಲಿ, ಯಾವ ಪೌಷ್ಟಿಕಾಂಶ ಹಾಕಿ ಬೆಳೆಸಲಾಗಿದೆ ಎಂಬ ಮಾಹಿತಿ ಇರುವುದಿಲ್ಲ. ಆದರೆ, ನಮ್ಮ ಆಹಾರಕ್ಕೆ ತರಕಾರಿ ನಾವೇ ಬೆಳೆಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಮನೆ ಮುಂದಿನ ಖಾಲಿ ಜಾಗ, ಮನೆ ತಾರಸಿ ಹಾಗೂ ಮಣ್ಣಿನ ಕುಂಡಗಳು, ಸಸಿ ಬೆಳೆಸುವ ಚೀಲಗಳಲ್ಲಿ ಸೊಪ್ಪು, ತರಕಾರಿ ಬೆಳೆಯಬಹುದು. ಇದರಿಂದ ಉತ್ತಮ ಆರೋಗ್ಯ, ನಾವೇ ಬೆಳೆದ ಖುಷಿ ಹಾಗೂ ಬಿಡುವಿನ ವೇಳೆ ಸದುಪಯೋಗ ಮಾಡಿದಂತಾಗುತ್ತದೆ ಎಂದು ಹೇಳಿದರು.

ಉಚಿತ ತರಬೇತಿ ಕಾರ್ಯಾಗಾರ: ಮನೆಯಲ್ಲಿನ ಅನುಪಯುಕ್ತ ತರಕಾರಿಗಳಿಂದ ಎರೆಹುಳು ಗೊಬ್ಬರ ತಯಾರಿಸಿ ಸಾವಯವ ಪದ್ಧತಿಯಲ್ಲಿ ತರಕಾರಿ ಬೆಳೆಯಬಹುದು. ತರಕಾರಿ ಬೆಳೆಯಲು ಬೇಕಾದ ಸಾಮಗ್ರಿ ಉಚಿತವಾಗಿ ನೀಡಲಾಗುವುದು. ಜೊತೆಗೆ ತೋಟಗಾರಿಕೆ ಇಲಾಖೆಯಲ್ಲಿ ಉಚಿತ ತರಬೇತಿ ಕಾರ್ಯಾಗಾರ, ಪ್ರಾತ್ಯಕ್ಷಿಕೆ ಕೂಡ ಏರ್ಪಡಿಸಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಾಟ್ಸಾಪ್‌ ಗ್ರೂಪ್‌ ಮಾಡಿಕೊಳ್ಳಿ: ತರಕಾರಿ ಬೀಜಗಳ ಗಾತ್ರಕ್ಕೆ ಅನುಗುಣವಾಗಿ ಸಣ್ಣ ಬೀಜಗಳನ್ನು ಮಣ್ಣಿನ ಮೇಲ್ಪದರದ ಮಡಿಯಲ್ಲಿ ಹಾಕಿ 20 ದಿನಗಳ ನಂತರ ಸಸಿಗಳನ್ನು ಕಿತ್ತು ಬೇರೆಡೆ ನಾಟಿ ಮಾಡಬೇಕು. ತರಕಾರಿ ಬೀಜಗಳು ದೊಡ್ಡದಾಗಿದ್ದರೆ ಭೂಮಿಯ ಸ್ವಲ್ಪ ಆಳ ಹಾಗೂ ಅಂತರದಲ್ಲಿ ನೇರವಾಗಿ ಉಳುಮೆ ಮಾಡಿ ಬೆಳೆಯಬಹುದು. ಈ ಕುರಿತು ತಾರಸಿ ತೋಟ ಮಾಡುವವರು ವಾಟ್ಸಾಪ್‌ ಗ್ರೂಪ್‌ ಮಾಡಿಕೊಂಡು ತಮ್ಮ ಬೆಳೆಯ ಪ್ರಯೋಗ ಹಾಗೂ ಸಮಸ್ಯೆ ಕುರಿತು ಚರ್ಚೆ ಮಾಡಿ ಉತ್ತಮವಾಗಿ ತರಕಾರಿ ಬೆಳೆಯಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ ಮಾತನಾಡಿ, ತಾರಸಿ ತೋಟಗಳ ಕುರಿತು ನಮ್ಮ ಕಚೇರಿ ಆವರಣದಲ್ಲಿ ಕಿಚನ್‌ ಗಾರ್ಡನ್‌ ಬೆಳೆಸಿ ಪ್ರಾತ್ಯಕ್ಷಿಕೆ ನೀಡಲಾಗುವುದು. ಈ ಕುರಿತು ಯಾವುದೇ ಸಂದೇಹ ಹಾಗೂ ಸಮಸ್ಯೆಗಳಿದ್ದರೆ ಕಚೇರಿ ವೇಳೆಯಲ್ಲಿ ಬಂದು ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದರು. ಈ ವೇಳೆ ಮದ್ದೂರು ತೋಟಗಾರಿಕಾ ಕ್ಷೇತ್ರದ ಯೋಜನಾ ಅಧಿಕಾರಿ ಡಾ.ಮಂಜುನಾಥ್‌ ಅಂಗಡಿ ಇತರರಿದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.