ತುಂಗಭದ್ರಾ ನದಿಯಲ್ಲಿಂದು ಗುರು ಚಿತಾಭಸ್ಮ ವಿಸರ್ಜನೆ
Team Udayavani, Feb 19, 2019, 12:30 AM IST
ಭಾರತೀನಗರ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಮಾನ ಮನಸ್ಕ ವೇದಿಕೆ ಸದಸ್ಯರು ಫೆ.19ರಂದು ಹುತಾತ್ಮ ಯೋಧ ಎಚ್.ಗುರು ಚಿತಾಭಸ್ಮವನ್ನು ಮಂಗಳವಾರ (ಫೆ.19) ದಕ್ಷಿಣ ಕಾಶಿ ಹಂಪಿಯ ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡುವರು.
ಸೋಮವಾರ ಭಾರತೀನಗರಕ್ಕೆ ಆಗಮಿಸಿದ ಸದಸ್ಯರು ಗುರು ಅಂತ್ಯ ಸಂಸ್ಕಾರ ನಡೆದ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಚಿತಾಭಸ್ಮ ಸಂಗ್ರಹಿಸಿದರು. ನಂತರ ಗುಡಿಗೆರೆ ಕಾಲೋನಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ವೀರಯೋಧ ಗುರು ಚಿತಾಭಸ್ಮವನ್ನು ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡುವುದಾಗಿ ತಿಳಿಸಿದರು. ಅದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಹೊಸಪೇಟೆ ಎಪಿಎಂಸಿ ವೃತ್ತದಿಂದ ವಾಲ್ಮೀಕಿ ವೃತ್ತ, ವೀರ ಮದಕರಿ ನಾಯಕ ವೃತ್ತ, ಮಾರುಕಟ್ಟೆ, ಮಸೀದಿ ವೃತ್ತ, ಗಾಂಧಿ ವೃತ್ತ ಸೇರಿದಂತೆ ಹಲವೆಡೆ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿ ಹುತಾತ್ಮ ಯೋಧ ಗುರುವಿಗೆ ನಮನ ಸಲ್ಲಿಸುವರು ಎಂದರು.
ನನ್ನ ಗಂಡ ಸೇರಿ ಹಲವು ಯೋಧರ ಸಾವಿಗೆ ಸಂಚು ರೂಪಿಸಿದ್ದ ಮಾಸ್ಟರ್ ಮೈಂಡ್ ಉಗ್ರನ ಹತ್ಯೆ ಖುಷಿ ತಂದಿದೆ. ಉಗ್ರರ ನಾಮಾವಶೇಷವಾಗುವವರೆಗೆ ಕಾರ್ಯಾಚರಣೆ ನಿಲ್ಲಕೂಡದು.
– ಕಲಾವತಿ, ವೀರಯೋಧ ಗುರು ಪತ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ