ಸುಳ್ಳು ಮಾಹಿತಿ ನೀಡುವ ಅಧಿಕಾರಿಗಳ ವಜಾಗೊಳಿಸಿ
ನಿವೇಶನಕ್ಕಾಗಿ ಅನಿರ್ದಿಷ್ಟಾವಧಿ ಧರಣಿ ಆರಂಭ
Team Udayavani, Oct 13, 2020, 2:05 PM IST
ಮಂಡ್ಯ: ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕು. ಸುಳ್ಳು ಮಾಹಿತಿ ನೀಡುತ್ತಿರುವ ರಾಜಸ್ವ ನಿರೀಕ್ಷಕ, ಗ್ರಾಮಲೆಕ್ಕಿಗ ಹಾಗೂ ಭೂ ಮಾಪ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಹಳೇಬೂದನೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯಲ್ಲಿ 170ಕ್ಕೂ ಹೆಚ್ಚು ನಿವೇಶನ ರಹಿತರಿಗೆ ಸರ್ಕಾರ ಭೂಮಿ ವಿತರಿಸಬೇಕೆಂದು ಆಗ್ರಹಿಸಿ 4 ವರ್ಷದಿಂದ ಹೋರಾಟ ಮಾಡಲಾಗುತ್ತಿದೆ. ಆದರೂ ಜಿಲ್ಲಾಡಳಿತಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಭಾವಿಗಳ ಹಾಗೂಹಣದ ಆಮಿಷಕ್ಕೆ ಒಳಗಾಗಿ ನಿವೇಶನ ರಹಿತರಿಗೆವಂಚಿಸುವಕೆಲಸ ನಡೆದಿದೆ. ಇದಲ್ಲದೆ ಸ್ಥಳ ಪರಿಶೀಲನೆ ಬಂದಿದ್ದ ಎಸಿ ಹಾಗೂ ತಹಶೀಲ್ದಾರ್ ಅವರಿಗೆ ರಾಜಸ್ವ ನಿರೀಕ್ಷಕ, ಗ್ರಾಮಲೆಕ್ಕಿಗಹಾಗೂಭೂಮಾಪನಇಲಾಖೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭೂಮಿ ಪರಿಶೀಲನೆ ನಡೆಸಿಲ್ಲ: ಗ್ರಾಮದ ಸರ್ವೇ ನಂ 190/ಪಿ10ನ 6.20 ಎಕರೆ ಭೂಮಿಯೇ ಕಾಣುತ್ತಿಲ್ಲ ಎಂದು ಪೂರ್ವ ದಿಕ್ಕಿನಲ್ಲಿರುವ ಭೂಮಿಯ ಪರಿಶೀಲನೆ ನಡೆಸದೆ ಪಶ್ಚಿಮ ದಿಕ್ಕಿನಲ್ಲಿರುವ ಭೂಮಿಯನ್ನು ಎಸಿ, ತಹಶೀಲ್ದಾರ್ ಅವರಿಗೆ ತೋರಿಸಿ ವಂಚಿಸಲಾಗಿದೆ. ಬೂದನೂರು ಗ್ರಾಮದ ದಲಿತರ ಇನಾಮು, ಸರ್ಕಾರಿ ಶಾಲೆ ಹಾಗೂ ಸಾರ್ವಜನಿಕ ದಾರಿಗಳನ್ನು ಕಬಳಿಸಿರುವ ಭೂಗಳ್ಳರು ಬಡವರ ನಿವೇಶನ ಭೂಮಿಯನ್ನು ಕಬಳಿಸಲು ಸಂಚುರೂಪಿಸಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆ ಕೈ ಬಿಡುವುದಿಲ್ಲ: ತಾಲೂಕುಕಚೇರಿಯಲ್ಲಿ ಬೂದನೂರು ನಿವೇಶನರಹಿತರಿಗೆ ಭೂಮಿ ಮಂಜೂರು ಮಾಡುವ ಸಂಬಂಧದ ಕಡತಗಳನ್ನೇಅಧಿಕಾರಿಗಳು ಬಚ್ಚಿಟ್ಟು ಕಳೆದುಹೋಗಿದೆಎನ್ನುತ್ತಿದ್ದಾರೆ. ಕೂಡಲೇ ಇದರ ಬಗ್ಗೆ ತನಿಖೆ ನಡೆಸಿ, ಕಡತ ಪತ್ತೆ ಹಚ್ಚಿ ನಿವೇಶನ ಕಲ್ಪಿಸುವವರೆಗೂ ಪ್ರತಿಭಟನೆಕೈಬಿಡುವುದಿಲ್ಲ ಎಂದು ಎಚ್ಚರಿಸಿದರು. ಈಗಾಗಲೇಗುರುತಿಸಿರುವ ಸರ್ಕಾರಿ ಭೂಮಿಯನ್ನು 1-5 ಮಾಡಿರುವ ಪ್ರಕಾರ ಅಳತೆ ಮಾಡಿ ಹದ್ದುಬಸ್ತ್ ಗೊಳಿಸಿ ನಿವೇಶನ ರಹಿತರಿಗೆ ನೀಡಬೇಕು. ತಕ್ಷಣವೇ ಡೀಸಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಬೇಕು. ಬೂದನೂರು ಆಶ್ರಯ ನಿವೇಶನಕ್ಕೆ ಸಂಬಂಧಿಸಿದಂತೆ ಮಾಡಿರುವ ಆದೇಶ ಮತ್ತು ಆಗಿರುವ ಕ್ರಮದ ನಕಲು ಪ್ರತಿಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಕರುನಾಡು ಸೇವಕರು ಸಂಘಟನೆಯ ಗೌರವಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಬೂದನೂರು ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ, ವಕೀಲ ರಾಮಯ್ಯ,ಕಾರಸವಾಡಿ ಮಹದೇವು, ಲಕ್ಷ್ಮೀ, ಮಾದೇವಿ, ರೇವಮ್ಮ, ಪುಟ್ಟ ತಾಯಮ್ಮ, ಶೋಭಾ, ಸುಧಾ, ಕುಪ್ಪಯ್ಯ, ಮೋಹನ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಹಳೇಬೂದನೂರು ಗ್ರಾಮದ ನಿವೇಶನ ರಹಿತರಿಗೆ ನಿವೇಶನ ನೀಡುವ ಸಂಬಂಧ ಇದ್ದಕಡತಗಳು ಇಲ್ಲ ಎಂದು ಹೇಳುತ್ತಿದ್ದಾರೆ. ಪ್ರಭಾವಿಗಳ ಜೊತೆ ಸೇರಿಕೊಂಡು ಬಡವರ ನಿವೇಶನಕಬಳಿಸಲು ಮುಂದಾಗಿದ್ದಾರೆ. ಕೂಡಲೇ ಇದರ ಬಗ್ಗೆಕ್ರಮಕೈಗೊಳ್ಳಬೇಕು. ಇಲ್ಲಿಯವರೆಗೆಕ್ರಮಕೈಗೊಂಡಿರುವ ಬಗ್ಗೆ ತಿಳಿಸಬೇಕು. – ಬಿ.ಕೆ.ಸತೀಶ, ಗ್ರಾಪಂ ಮಾಜಿ ಸದಸ್ಯ
ಸ್ವಂತ ಮನೆ ಹಕ್ಕಿಗಾಗಿ ಸಾಕಷ್ಟು ಬಾರಿ ಹೋರಾಟ ಮಾಡಿ, ಮನವಿಸಲ್ಲಿಸಿದರೂ ಸರ್ಕಾರ, ಜಿಲ್ಲಾಡಳಿತವಾಗಲೀಯಾವುದೇಕ್ರಮ ಕೈಗೊಂಡಿಲ್ಲ. ನಿವೇಶನ ರಹಿತರಿಗೆ ನಿವೇಶನ ನೀಡುವವರೆಗೂ ಹೋರಾಟ ಮುಂದುವರಿಯಲಿದೆ. – ಎಂ.ಬಿ.ನಾಗಣ್ಣಗೌಡ, ಗೌರವಾಧ್ಯಕ್ಷರು, ಕರುನಾಡ ಸೇವಕರು ಸಂಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ