Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Team Udayavani, Mar 28, 2024, 8:43 PM IST
ಮಂಡ್ಯ: ಮಂಡ್ಯಕ್ಕೆ ಕುಮಾರಸ್ವಾಮಿ ಅದ್ಭುತವಾದ ಅಭ್ಯರ್ಥಿ. ಮಂಡ್ಯದ ಋಣ ತೀರಿಸಲು ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ವಿರೋಧಿಸುತ್ತಿದ್ದ ಕೆ.ಸಿ.ನಾರಾಯಣ ಗೌಡ ಅವರು ಸಮನ್ವಯ ಸಮಿತಿ ಸಭೆಯ ಭಾಷಣ ಮಾಡಲು ಮುಂದಾದಾಗ ಆರಂಭದಲ್ಲಿಯೇ ಜೆಡಿಎಸ್ ಪರ ಘೋಷಣೆ ಕೂಗುವ ಮೂಲಕ ಅಚ್ಚರಿ ಮೂಡಿಸಿದರು.
ಬಳಿಕ ಮಾತನಾಡಿದ ಅವರು, ನಾನು ಎಲ್ಲೋ ಒಂದು ಕಡೆ ನೋವಿನಲ್ಲಿದ್ದೆ ಎಂಬುದು ಸತ್ಯ. ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವ ಸಂಕಲ್ಪ ಮಾಡಿದ್ದೆ. ಜೆಡಿಎಸ್ನವರೇ ಮುಂದೆ ಬಂದು ನಮ್ಮ ಜತೆ ಕೈ ಜೋಡಿಸಿದ್ದಾರೆ. ಬಿಜೆಪಿಯನ್ನು ಗೆಲ್ಲಿಸಲು ಹಾಗೂ ಮೋದಿಯವರನ್ನು ಪ್ರಧಾನಿ ಮಾಡಲು ಬಂದಿದ್ದಾರೆಂದ ಅವರು, ಕುಮಾರಸ್ವಾಮಿಯವರೇ ನೀವು ಬರಲೇಬೇಡಿ. ನೀವು ಗೆದ್ದೇ ಗೆಲ್ಲುತ್ತೀರಿ. ನಿಮ್ಮನ್ನು ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ