ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ
ಆರೋಗ್ಯವಾಗಿದ್ದಾರೆ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ: ಪತ್ನಿ ರುಕ್ಮಿಣಿ ಮನವಿ
Team Udayavani, May 24, 2022, 7:46 PM IST
ಮಂಡ್ಯ: ರಾಜ್ಯದಲ್ಲಿಯೇ ಐದು ರೂ. ಡಾಕ್ಟರ್ ಎಂದೇ ಖ್ಯಾತಿ ಗಳಿಸಿರುವ ಚರ್ಮ ಹಾಗೂ ಲೈಂಗಿಕ ತಜ್ಞ ಡಾ.ಎಸ್.ಸಿ.ಶಂಕರೇಗೌಡ ಅವರಿಗೆ ಸೋಮವಾರ ಸಂಜೆ ಹೃದಯಾಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿರುವುದರಿಂದ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಒಂದು ವಾರದ ನಂತರ ಬೈಪಾಸ್ ಸರ್ಜರಿ ಮಾಡಬೇಕಾಗಿದ್ದು, ವಿಶ್ರಾಂತಿ ಅಗತ್ಯವಾಗಿದೆ. ಯಾವುದೇ ತೊಂದರೆ ಇಲ್ಲದೆ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸುಳ್ಳು ಸುದ್ದಿ ಹಬ್ಬಿಸಬೇಡಿ:
ವೈದ್ಯ ಡಾ.ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಕೆಲವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರ ಹಾಕಿ ಪೋಸ್ಟ್ ಮಾಡಿದ್ದರು. ಇದರಿಂದ ಜಿಲ್ಲೆಯ ಜನರಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು.
ನಂತರ ಡಾ.ಶಂಕರೇಗೌಡ ಪತ್ನಿ ರುಕ್ಮಿಣಿ, ಉದಯವಾಣಿಗೆ ಪ್ರತಿಕ್ರಿಯಿಸಿ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮಧ್ಯಾಹ್ನ ನಾನೇ ಊಟ ಮಾಡಿಸಿದ್ದೇನೆ. ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ
ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ
ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ
ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು