20 ವರ್ಷ ನಂತರ 1008 ಮಿಮೀ ದಾಖಲೆ ಮಳೆ


Team Udayavani, Sep 3, 2022, 4:54 PM IST

20 ವರ್ಷ ನಂತರ 1008 ಮಿಮೀ ದಾಖಲೆ ಮಳೆ

ಮಂಡ್ಯ: ಪ್ರಸ್ತುತ ವರ್ಷ ಜಿಲ್ಲಾದ್ಯಂತ ದಾಖಲೆ ಪ್ರಮಾಣದ ಮಳೆ ಆಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಮೇ ನಿಂದ ಸೆ.2ರವರೆಗೂ 20 ವರ್ಷ ನಂತರ ಸರಾಸರಿ 1008 ಮಿ.ಮೀ. ಮಳೆಯಾಗಿದೆ.

ಪ್ರತಿ ವರ್ಷ ವಾಡಿಕೆಯಂತೆ ಸರಾಸರಿ 740 ಮಿ.ಮೀ. ಮಳೆ ಆಗುತ್ತಿತ್ತು. ಆದರೆ, ಜನವರಿ ತಿಂಗಳಿನಿಂದ ಸೆ.2ರವರೆಗೆ 1008 ಮಿ.ಮೀ. ಮಳೆ ಆಗಿರುವ ವರದಿಯಾಗಿದೆ. ಇದು ಪ್ರಸ್ತುತ ವರ್ಷದ ದಾಖಲೆಯಾಗಿದೆ.

ತಾಲೂಕುವಾರು ಮಳೆ ವಿವರ: ಜಿಲ್ಲಾದ್ಯಂತ ಜನವರಿಯಿಂದ ಇದುವರೆಗೂ ಶೇ.181 ಹೆಚ್ಚುವರಿ ಮಳೆಯಾಗಿದೆ. ಜಿಲ್ಲೆಯಲ್ಲಿಯೇ ಮಳೆಯಾಶ್ರಿತ ಪ್ರದೇಶ ನಾಗಮಂಗಲ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ ಸರಾಸರಿ 1077.3 ಮಿ.ಮೀ. ಮಳೆಯಾ ಗಿದೆ. ಕೆ.ಆರ್‌ .ಪೇಟೆ ತಾಲೂಕಿನಲ್ಲಿ 1075.9 ಮಿ.ಮೀ., ಮದ್ದೂರಿನಲ್ಲಿ 1032.1 ಮಿ.ಮೀ., ಮಳವಳ್ಳಿಯಲ್ಲಿ 841 ಮಿ.ಮೀ., ಮಂಡ್ಯ ತಾಲೂಕಿ ನಲ್ಲಿ 1149.3 ಮಿ.ಮೀ., ಪಾಂಡವಪುರದಲ್ಲಿ 989.6 ಮಿ.ಮೀ., ಶ್ರೀರಂಗಪಟ್ಟಣದಲ್ಲಿ 990.7 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ಏಳು ದಿನಗಳಲ್ಲಿ ಸರಾಸರಿ 100 ಮಿ.ಮೀ. ಮಳೆ ವರದಿ ಆಗಿದ್ದರೆ, ಜೂನ್‌ ನಿಂದ ಸೆ.2ರವರೆಗೂ ಶೇ.225 ಹೆಚ್ಚುವರಿ ಮಳೆಯಾಗಿದೆ. ಕೆ.ಆರ್‌.ಪೇಟೆ 606.3 ಮಿ.ಮೀ., ಮದ್ದೂರು 709.8 ಮಿ.ಮೀ., ಮಳವಳ್ಳಿ 487.5 ಮಿ.ಮೀ., ಮಂಡ್ಯ 784.6 ಮಿ.ಮೀ., ನಾಗಮಂಗಲ 711.9 ಮಿ.ಮೀ., ಪಾಂಡವಪುರ 585.6 ಮಿ.ಮೀ., ಶ್ರೀರಂಗಪಟ್ಟಣ 591.1 ಮಿ.ಮೀ. ಮಳೆ ಬಿದ್ದಿರುವ ವರದಿಯಾಗಿದೆ.

ಮಳೆಯಿಂದಾಗಿ ಕಬ್ಬು, ಭತ್ತ, ರಾಗಿ ಬಿತ್ತನೆ ಕುಂಠಿತ: ನಿರಂತರ ಸುರಿಯುತ್ತಿರುವ ಮಳೆಯಿಂದ ರೈತರ ಬಿತ್ತನೆಗೆ ಅಡ್ಡಿಯಾಗಿದೆ. ಆಗಸ್ಟ್‌ ಹಾಗೂ ಸೆಪ್ಟೆಂಬರ್‌ ತಿಂಗಳು ಭತ್ತ ಬಿತ್ತನೆ ಕಾಲವಾಗಿದೆ. ಜಿಲ್ಲಾದ್ಯಂತ 1.90 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ಮಳೆಯಿಂದ ಹಿನ್ನಡೆಯಾಗಿದೆ. ಈಗಾಗಲೇ ಭತ್ತ ಬಿತ್ತನೆಗೆ ಒಟ್ಲು ಹಾಕಲಾಗಿತ್ತು. ನಾಟಿ ಮಾಡಲು ಸಾಧ್ಯವಾಗುತ್ತಿಲ್ಲ. ಕಬ್ಬು ಬೆಳೆ ನಾಟಿ ಮಾಡಲಾಗಿತ್ತು. ಆದರೆ, ಮಳೆ ನೀರಿನಿಂದ ಜಲಾವೃತಗೊಂಡು ಕಬ್ಬು ಕೊಳೆಯುವ ಸ್ಥಿತಿ ತಲುಪಿದೆ. ಅಲ್ಲದೆ, ರಾಗಿ ಬಿತ್ತನೆಗೂ ಮಳೆ ಅಡ್ಡಿಯಾಗಿದೆ. ಜತೆಗೆ ಬಿತ್ತನೆಗೆ ಭೂಮಿ ಹದ ಮಾಡಿಕೊಂಡಿದ್ದ ರೈತರು, ಮತ್ತೆ ಉಳುಮೆ ಮಾಡಿ ಹದ ಮಾಡಿ ಮತ್ತೂಮ್ಮೆ ನಾಟಿ ಮಾಡಬೇ ಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ರೈತರಿಗೆ ಮತ್ತಷ್ಟು ಆರ್ಥಿಕ ಹೊರೆ ಬೀಳಲಿದೆ.

20 ಟನ್‌ ಆಹಾರ ಉತ್ಪಾದನೆ ಕುಂಠಿತ: ವಿಪರೀತ ಮಳೆಯಿಂದ ಈಗಾಗಲೇ ಸಾಕಷ್ಟು ಬೆಳೆ ನಾಶ ವಾಗಿದೆ. ಇದರಿಂದ ಉತ್ಪಾದನೆ ಕುಂಠಿತವಾಗುವ ಎಲ್ಲಾ ಸಾಧ್ಯತೆಗಳಿವೆ. ಒಂದೆಡೆ ಮಳೆಯಿಂದ ಬಿತ್ತನೆ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ನಾಟಿ ಮಾಡಿರುವ ಬಿತ್ತನೆ ಹಾಳಾಗುತ್ತಿದೆ. ಇದರಿಂದ ಉತ್ಪಾದನೆ ಕುಂಠಿತ ಆಗುವ ಆತಂಕವೂ ಎದುರಾಗಲಿದೆ. ಪ್ರತಿ ವರ್ಷ ಜಿಲ್ಲೆಯಲ್ಲಿ 20 ಟನ್‌ ಆಹಾರ ಉತ್ಪಾದನೆ ಆಗುತ್ತಿತ್ತು. ಆದರೆ, ಈ ಬಾರಿ 17ರಿಂದ 18 ಟನ್‌ ಉತ್ಪಾದನೆ ಆಗುವ ಸಾಧ್ಯತೆ ಇದೆ.

ಕೃಷಿ ಬೆಳೆ ನಾಶ : ಜಿಲ್ಲಾದ್ಯಂತ ಸುರಿದ ಧಾರಾಕಾರ ಮಳೆಗೆ ಕೃಷಿ, ತೋಟಗಾರಿಕೆ ಬೆಳೆ ನಾಶವಾಗಿದೆ. ಕೋಟಿ ರೂ.ಗೂ ಹೆಚ್ಚು ತೋಟಗಾರಿಕೆ, 3 ಕೋಟಿ ರೂ. ಹೆಚ್ಚು ಕೃಷಿ ಬೆಳೆ ನಾಶವಾಗಿದೆ. ಅಲ್ಲದೆ, ಮನೆಗಳಿಗೂ ಹಾನಿಯಾಗಿದೆ. ಪ್ರಾಣ ಹಾನಿ, ಜಾನುವಾರು ಸಾವನ್ನಪ್ಪಿರುವ ಬಗ್ಗೆ ವರದಿ ಆಗಿದೆ.

ಪ್ರಸಕ್ತ ವರ್ಷ ದಾಖಲೆ ಮಳೆ ಸುರಿದಿದೆ. ರೈತರ ಬಿತ್ತನೆಗೆ ಅಡ್ಡಿಯಾಗಿದೆ. ಆಹಾರ ಉತ್ಪಾದನೆಯೂ ಕಡಿಮೆ ಆಗಿದೆ. ರೈತರ ಮೇಲೆ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ಭತ್ತ, ಕಬ್ಬು ನಾಟಿಗೆ ಹಿನ್ನಡೆಯಾಗಿದ್ದು, ಇದಕ್ಕೆ ಪರಿಹಾರ ಕೊಡಲು ಸಾಧ್ಯವಿಲ್ಲ. ಹಾಲಿ ಇರುವ ಬೆಳೆ ಸಾಕಷ್ಟು ನಷ್ಟ ಸಂಭವಿಸಿದೆ. ● ವಿ.ಎಸ್‌.ಅಶೋಕ್‌, ಕೃಷಿ ಜಂಟಿ ನಿರ್ದೇಶಕ, ಮಂಡ್ಯ

ಎಚ್‌.ಶಿವರಾಜು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.