ಸುರಕ್ಷತೆಗಾಗಿ ಹೆಲ್ಮೆಟ್ಕಡ್ಡಾಯ: ಶಿವಮೂರ್ತಿ
Team Udayavani, Jan 31, 2021, 5:32 PM IST
ಮಂಡ್ಯ: ಪೊಲೀಸರಿಗೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಹಾಗೂ ನಿಮ್ಮ ಕುಟುಂಬದ ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ತಹಶೀಲ್ದಾರ್ ಎಂ. ಶಿವಮೂರ್ತಿ ಹೇಳಿದರು. ಕೆ.ಆರ್.ಪೇಟೆ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಸಾರ್ವಜನಿಕರಿಗೆ ಹೆಲ್ಮೆಟ್ ಜಾಗೃತಿ ಮೂಡಿಸುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತಾಲೂ ಕಿನಲ್ಲಿ 1 ವರ್ಷದ ಹಿಂದೆ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸು ವುದನ್ನು ಜಾರಿಗೆ ತರಲಾ ಗಿತ್ತು.
ಆದರೆ, ಕೋವಿಡ್ ಆಗಮನದಿಂದಾಗಿ ಒಂದು ವರ್ಷ ಹೆಲ್ಮೆಟ್ನಿಂದ ವಿನಾಯಿತಿ ನೀಡಲಾ ಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಕೋರ್ಟ್ ನಿರ್ದೇಶನದಂತೆ ಎಲ್ಲ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾ ಯಗೊಳಿಸಿದ್ದು, ಸಾರ್ವಜನಿಕರು ಪೊಲೀಸ ರೊಂದಿಗೆ ಸಹಕರಿಸಬೇಕು ಎಂದರು.
ಹಲವು ವಾಹನಗಳಿಗೆ ದಾಖಲೆಗಳೇ ಇಲ್ಲ: ಪ್ರಸ್ತುತ ಹಲವು ವಾಹನಗಳಿಗೆ ದಾಖಲೆಗಳೇ ಇಲ್ಲ. ಇನ್ನು ಕೆಲವು ವಾಹನಗಳಿಗೆ ವಿಮೆ ಅವಧಿ ಮುಗಿದಿರುವುದು ಕಂಡು ಬರುತ್ತಿದೆ. ಅಲ್ಲದೆ, ಕಳವು ಮಾಡಿರುವ ವಾಹನಗಳನ್ನು ಖರೀದಿಸಿ, ಚಲಾವಣೆ ಮಾಡುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ವಾಹನ ಏರುವ ಸಮಯದಲ್ಲಿ ಹೆಲ್ಮೆಟ್ ಧರಿಸಿ, ಇನ್ಸೂರೆನ್ಸ್ ಚಾಲನೆ ಯಲ್ಲಿ ಇದೆಯೇ ಎಂಬುದನ್ನು ಪರೀಕ್ಷಿಸಿ ಕೊಂಡು, ನಿಮ್ಮ ವಾಹನಗಳ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ವಾಹನದಲ್ಲಿ ಇಟ್ಟುಕೊಂಡು ಸಂಚಾರ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದರು.
ಇದನ್ನೂ ಓದಿ:ಜಿಲ್ಲಾಡಳಿತದಿಂದ ಹುತಾತ್ಮರ ಸ್ಮರಣೆ
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ತಹಶೀಲ್ದಾರ್ ಶಿವಮೂರ್ತಿ ಪೊಲೀಸ್ ಸಿಬ್ಬಂದಿಗಳೊಡನೆ ಹೆಲ್ಮೆಟ್ ಧರಿಸಿ, ದ್ವಿಚಕ್ರ ವಾಹನ ಚಲಾಯಿಸುವ ಮೂಲಕ ಸಂಚಾರ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಪಿಎಸ್ಐ ಬ್ಯಾಟರಾಯ ಗೌಡ, ಗ್ರಾಮಾಂತರ ಠಾಣೆಯ ಪಿಎಸ್ಐ ಸುರೇಶ್, ವಕೀಲ ಪ್ರವೀಣ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ