ನಾಗಮಂಗಲ ಕೆರೆಗಳಿಗೆ ಹೇಮೆಯ ನೀರು
Team Udayavani, May 27, 2020, 6:16 AM IST
ನಾಗಮಂಗಲ: ಹೇಮಾವತಿ ಅಣೆಕಟ್ಟೆಯಿಂದ ತಾಲೂಕಿನ ಕೆರೆಗಳಿಗೆ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸುರೇಶ್ ಗೌಡ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ಹರಿದು ಬರುತ್ತಿರುವ ನೀರಿನ ಪ್ರಮಾಣ ಪರಿಶೀಲಿಸಿದರು.
ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಾಮಕಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಲ್ಲಿ ಮನವಿ ಮಾಡಲಾಗಿತ್ತು. ಇದೀಗ ನಾಲೆಗಳಿಗೆ ನೀರು ಬಿಟ್ಟಿದ್ದು, ಕೆರೆಕಟ್ಟೆಗಳಿಗೆ ಹರಿಯುತ್ತಿದೆ.
ಯಾವುದೇ ಕಾರಣಕ್ಕೂ ನೀರಿನ ಪ್ರಮಾಣ ಕಡಿಮೆ ಮಾಡದಂತೆ ಹಾಗೂ ನೀರು ಪೋಲಾಗದಂತೆ ಜಾಗೃತಿ ವಹಿಸುವಂತೆ ಮತ್ತು ಎಲ್ಲಾ ಕೆರೆಗಳನ್ನು ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನನ್ನ ಮನವಿಗೆ ಸ್ಪಂದಿಸಿರುವ ಸಚಿವದ್ವಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ನೀರಿನ ಸಮಸ್ಯೆ ಬಗೆಹರಿಸಿ: ಕುಡಿಯುವ ನೀರು ಪೂರೈಕೆಗೆಂದು ಗ್ರಾಮದಲ್ಲಿ ಕೊಳವೆ ಬಾವಿ ತೆಗೆಸಿದ್ದೀರಿ. ಆದರೆ, ಇದುವರೆಗೂ ಪೈಪ್ಲೈನ್ ಕೆಲಸವಾಗಿಲ್ಲ. ವಾರ ಕ್ಕೊಮ್ಮೆ ಕುಡಿವ ನೀರು ಬಿಡುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಬಿಂಡಿಗನವಿಲೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು. ಇದಕ್ಕೆ ಶಾಸಕ ಸುರೇಶ್ಗೌಡ ಪ್ರತಿಕ್ರಿಯಿಸಿ ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಒಂದು ವಾರದೊಳಗೆ ಪೈಪ್ಲೈನ್ ಸರಿಪಡಿಸಿ ಸಾರ್ವಜನಿಕರಿಗೆ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್