ಅತ್ತ ಚುನಾವಣೆ ಅಬ್ಬರ, ಇತ್ತ ಅನ್ನದಾತನ ಕಣ್ಣೀರು


Team Udayavani, Apr 20, 2023, 2:52 PM IST

ಅತ್ತ ಚುನಾವಣೆ ಅಬ್ಬರ, ಇತ್ತ ಅನ್ನದಾತನ ಕಣ್ಣೀರು

ಕೆ.ಆರ್‌.ಪೇಟೆ: ಅತ್ತ ಕ್ಷೇತ್ರಾದ್ಯಂತ ರಾಜಕಾರಣಿಗಳು ಮತಬೇಟೆಯಲ್ಲಿದ್ದರೆ, ಇತ್ತ ಹೇಮಾವತಿ ಮುಖ್ಯ ನಾಲೆಯಲ್ಲಿ ನೀರು ಹರಿಯದೆ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ.

ಸಂಕಷ್ಟ: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾದ ಪರಿಣಾಮ ಗೊರೂರಿನ ಹೇಮಾವತಿ ಜಲಾಶಯ ಭರ್ತಿಯಾಗಿತ್ತು. ಇನ್ನು ತಾಲೂಕಿನ ರೈತರು ಬೇಸಿಗೆಯಲ್ಲಿ ಹೇಮೆಯ ನೀರಿನಿಂದ ಕೆರೆ ಕಟ್ಟೆಗಳು ತುಂಬಿ ತಮ್ಮ ಜಮೀನಿಗಳಿಗೆ ನೀರು ಹರಿಯುವ ಸಂಭ್ರಮದಲ್ಲಿದ್ದರು. ಆದರೆ, ಹೇಮಾವತಿ ಎಡದಂಡೆ ನಾಲೆಯಲ್ಲಿ ನೀರು ಹರಿಯದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

5255 ಎಕರೆ ನೀರಾವರಿ: ಗೊರೂರಿನ ಹೇಮಾವತಿ ಜಲಾಶಯದ ಎಡದಂಡೆ ನಾಲೆ ನೀರು ತಾಲೂಕಿನ ರೈತರ ಜೀವನಾಡಿ. ಎಡದಂಡೆ ನಾಲೆ ತಾಲೂಕು ವ್ಯಾಪ್ತಿಯಲ್ಲಿ ಸರಪಳಿ 106 ರಿಂದ 150.95 ರವರೆಗೆ ಒಟ್ಟು 45.975 ಕಿ. ಮೀ.ಉದ್ದ ಹರಿದು ನೆರೆಯ ಪಾಂಡವಪುರ ತಾಲೂಕಿಗೆ ಹೋಗುತ್ತದೆ. ವಿತರಣಾ ನಾಲೆ 47 ರಿಂದ 64 ರವರೆಗೆ ಒಟ್ಟು 17 ವಿತರಣಾ ನಾಲೆಗಳ ಮುಖಾಂತರ ತಾಲೂಕಿನ 54,088 ಎಕರೆ ಭೂ ಪ್ರದೇಶ ನೀರಾವರಿಗೆ ಒಳಪಟ್ಟಿದೆ. ಇದಲ್ಲದೆ ಸದರಿ ನಾಲಾ ವ್ಯಾಪ್ತಿಯಲ್ಲಿ ತಾಲೂಕಿನ 95 ಕೆರೆಗಳಿದ್ದು ಕೆರೆಗಳ ಮುಖಾಂತರ 5255 ಎಕರೆ ನೀರಾವರಿಗೆ ಒಳಪಟ್ಟಿದೆ. ಪ್ರಸಕ್ತ ಸಾಲಿನಲ್ಲಿ ನೀರಾವರಿ ಇಲಾಖೆ ನಾಲೆ ಮುಖಾಂತರ ನೀರು ಹರಿಸಿ ಕೆರೆ-ಕಟ್ಟೆ ತುಂಬಿಸದ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಡಚಣೆ: ರೈತರ ಹೂವು ಮತ್ತಿತರ ಅಲ್ಪಾವಧಿ ಬೆಳೆಗಳು ನೆಲಕಚ್ಚಿವೆ. ಕಾಲುವೆ ನಿರ್ವಹಣೆಗೂ ನೀರಾವರಿ ಇಲಾಖೆ ಗಮನ ಹರಿಸುತ್ತಿಲ್ಲ. ಕಳಪೆ ಕಾಮಗಾರಿಯಿಂದ ನಾಲೆ ಉದ್ದಗಲಕ್ಕೂ ಅಲ್ಲಲ್ಲಿ ಲೈನಿಂಗ್‌ ಕುಸಿದು ಬಿದ್ದು ನಾಲೆಯಲ್ಲಿ ಸೇರಿಕೊಂಡಿದೆ. ಕುಸಿದ ಲೈನಿಂಗ್‌ ಮೇಲೆ ಗಿಡಗಂಟಿ ಬೆಳೆಯುತ್ತಿದ್ದು ನೀರಿನ ಸರಾಗ ಹರಿಯುವಿಕೆಗೆ ಅಡಚಣೆಯಾಗುತ್ತಿದೆ. ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದ ನೀರಿನ ಸಂಗ್ರಹವಿದ್ದರೂ ನಾಲೆಗಳ ಮುಖಾಂತರ ನೀರು ಹರಿಸದ ನೀರಾವರಿ ಇಲಾಖೆ ಅಧಿಕಾರಿಗಳ ವರ್ತನೆಯನ್ನು ರೈತರು, ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಖಂಡಿಸಿದ್ದಾರೆ.

ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಪರದಾಟ: ಈಗಾಗಲೇ ಬಿರು ಬೇಸಿಗೆ ಆರಂಭವಾಗಿದ್ದು ಜನ ಜಾನುವಾರುಗಳಿಗೆ ನೀರಿನ ಅಭಾವ ಕಾಣಿಸಿಕೊಂಡಿದೆ. ಕೆರೆಗಳು ಹೇಮೆ ನೀರಿನಿಂದ ಭರ್ತಿಯಾಗದ ಕಾರಣ ಅಂತರ್ಜಲ ಮಟ್ಟ ಕುಸಿದಿದೆ. ರೈತರ ಕೃಷಿ ಪಂಪ್‌ ಸೆಟ್ಟುಗಳು ಸ್ಥಗಿತಗೊಳ್ಳುತ್ತಿವೆ. ನಾಲೆಯಲ್ಲಿ ಬೇಸಿಗೆ ಕಾಲದಲ್ಲಿ ಅನುಸರಿಸುವ ಕಟ್ಟು ನೀರಿನ ಪದ್ಧತಿ ಜಾರಿಗೆ ಬಂದಿದ್ದರೆ, ತಾಲೂಕಿನ ಎಲ್ಲಾ ಕೆರೆ-ಕಟ್ಟೆ ಹೇಮೆಯ ನೀರಿನಿಂದ ಭರ್ತಿಯಾಗಿ ಜನ-ಜಾನುವಾರುಗೆ ಕುಡಿಯುವ ನೀರಿನ ಬವಣೆ ತಪ್ಪುತ್ತಿತ್ತು. ನಾಲಾ ವ್ಯಾಪ್ತಿಯಲ್ಲಿ ಬಹುತೇಕ ರೈತರು ಕಬ್ಬು, ತೆಂಗು, ಅಡಕೆ, ಬಾಳೆ ಮುಂತಾದ ಬೆಳೆ ಬೆಳೆಯುತ್ತಿದ್ದಾರೆ. ಜತೆಗೆ ಕೆಲವು ರೈತರು ಕೆರೆ ನೀರಿನಿಂದ ಭತ್ತ, ರಾಗಿ ಮುಂತಾದ ಬೆಳೆ ಬೆಳೆದರೆ ಮತ್ತಷ್ಟು ರೈತರು ರೇಷ್ಮೆ ಮತ್ತು ಹೂವಿನ ಬೇಸಾಯ ಮಾಡುತ್ತಾರೆ. ಕಾಲುವೆಯಲ್ಲಿ ನೀರು ಹರಿಯದ ಪರಿಣಾಮ ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.

ಕ್ಷೇತ್ರದಲ್ಲಿ ರೈತರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಯಥಾ ರಾಜಾ ತಥಾ ಪ್ರಜಾ ಎನ್ನುವಂತೆ ಇಲ್ಲಿನ ಅಧಿಕಾರಿಗಳ ವರ್ತನೆಗಳಿವೆ. ರೈತರ ಹಿತದೃಷ್ಟಿಯಿಂದ ತಕ್ಷಣವೇ ನಾಲೆಗೆ ನೀರು ಹರಿಸದಿದ್ದರೆ, ಚುನಾವಣೆ ನಿಯಮ ಮೀರಿ ನೀರಾವರಿ ಇಲಾಖೆ ಮುಂದೆ ಚಳವಳಿ ರೂಪಿಸಬೇಕಾಗುತ್ತದೆ. ● ಕಾರಿಗನಹಳ್ಳಿ ಪುಟ್ಟೇಗೌಡ, ತಾಲೂಕು ರೈತಸಂಘದ ಅಧ್ಯಕ್ಷ

-ಅರುಣ್‌ಕುಮಾರ್‌

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.