ಖಾಸಗಿ ಶಾಲೆಗಳಲ್ಲಿ ಅಧಿಕ ಶುಲ್ಕ ವಸೂಲಿ

ನಿಗದಿತ ಶುಲ್ಕ ಪ್ರಕಟಿಸಲು ಜನಪರ ವೇದಿಕೆ ಆಗ್ರಹ • ಕ್ಷೇತ್ರ ಸಮನ್ವಯಾಧಿಕಾರಿ ಗೆ ಮನವಿ

Team Udayavani, Jun 21, 2019, 1:40 PM IST

mandya-tdy-2..

ಖಾಸಗಿ ಶಾಲೆಗಳ ಹೆಚ್ಚು ಶುಲ್ಕ ವಸೂಲಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಕ್ಷೇತ್ರ ಸಮನ್ವಯ ಅಧಿಕಾರಿ ಯೋಗೇಶ್‌ರವರಿಗೆ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಮಳವಳ್ಳಿ: ತಾಲೂಕಿನ ಖಾಸಗಿ ಶಾಲೆಗಳು ಪೋಷಕರಿಂದ ಅಧಿಕ ಶುಲ್ಕ ವಸೂಲಿ ಮಾಡಿ ಅದಕ್ಕೆ ಯಾವುದೇ ರಶೀದಿ ನೀಡದೆ ವಂಚಿಸುತ್ತಿರುವುದರಿಂದ ಎಲ್ಲಾ ಖಾಸಗಿ ಶಾಲೆಗಳು ನಿಗದಿತ ಶುಲ್ಕವನ್ನು ಸೂಚನಾ ಫ‌ಲಕಗಳನ್ನು ಕಡ್ಡಾಯವಾಗಿ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಸಮನ್ವಯ ಅಧಿಕಾರಿ ಯೋಗೇಶ್‌ ಅವರಿಗೆ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕರ್ನಾಟಕ ಜನಪರ ವೇದಿಕೆಯ ಯುವ ಘಟಕ ರಾಜ್ಯಾಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ತಾಲೂಕಿನಲ್ಲಿ ಖಾಸಗಿ ಶಾಲೆಗಳು ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ. ಪೋಷಕರಿಂದ ಹೆಚ್ಚು ಹಣ ವಸೂಲಿ ಮಾಡುತ್ತಾ ಸುಲಿಗೆ ಮಾಡುತ್ತಿವೆ. ಸರ್ಕಾರದಿಂದ ನಿಗದಿಪಡಿಸಿರುವ ಶುಲ್ಕದ ಮಾಹಿತಿಯನ್ನು ಪ್ರಕಟಣಾ ಫ‌ಲಕದಲ್ಲಿ ಪ್ರದರ್ಶಿಸುವಂತೆ ಸೂಚಿಸಿದ್ದರೂ ಕೇವಲ ಸರ್ಕಾರಕ್ಕೆ ಮಾಹಿತಿ ನೀಡುವುದಕ್ಕೆ ಮಾತ್ರ ಫೋಟೋ ಹೊಡೆದು ಕಳುಹಿಸಿ ನಂತರ ತೆರವುಗೊಳಿಸಿವೆ. ಪೋಷಕರಿಗೂ ಸರ್ಕಾರದ ನಿಖರ ಶುಲ್ಕ ಮಾಹಿತಿ ತಿಳಿಯುವಂತೆ ಪ್ರದರ್ಶಿಸಬೇಕೆಂದು ತಾಕೀತು ಮಾಡಿದರು.

ಶಾಲೆಗಳ ನವೀಕರಣ ರದ್ದುಪಡಿಸಿ: ಆರ್‌ಟಿಇ ವಿದ್ಯಾರ್ಥಿಗಳಿಂದಲೂ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ತಾಲೂಕಿನ ಹಲವಾರು ಖಾಸಗಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿದ್ದರೂ ಮಾನ್ಯತೆ ನೀಡಲಾಗಿದೆ. ಪ್ರತಿವರ್ಷವೂ ಕೂಡ ನವೀಕರಣ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಶಾಲೆಯ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡುತ್ತಿಲ್ಲ. ಮೂಲ ಸೌಕರ್ಯವಿಲ್ಲದ ಶಾಲೆಗಳ ನವೀಕರಣವನ್ನು ತಕ್ಷಣದಿಂದಲೇ ರದ್ದುಪಡಿಸುವಂತೆ ಆಗ್ರಹಿಸಿದರು.

ಅರ್ಹ ಶಿಕ್ಷಕರನ್ನು ನೇಮಿಸಿ:

ಖಾಸಗಿ ಶಾಲೆಗಳಲ್ಲಿ ಅರ್ಹತೆ ಇಲ್ಲದವರೂ ಕೂಡ ಪಾಠ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಹೆಚ್ಚು ಹಣ ವಸೂಲಿ ಮಾಡಿಕೊಂಡು ಪಿಯುಸಿಯಲ್ಲಿಯೂ ಫೇಲಾಗಿರುವವನ್ನು ಶಿಕ್ಷಕರಾಗಿ ನೇಮಕ ಮಾಡಿಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅರ್ಹ ಶಿಕ್ಷಕರನ್ನು ನೇಮಿಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಲು ಅದೇಶ ಹೊರಡಿಸಬೇಕೆಂದು ಒತ್ತಾಯಿಸಿದ ಅವರು, ತಾವು ಸಲ್ಲಿಸಿರುವ ಮನವಿಗೆ ಸ್ಪಂದಿಸಿ ಆಗತ್ಯ ಕ್ರಮ ಕೈಗೊಳ್ಳದಿದ್ದರೆ ಜೂ 25ರಂದು ಆಮರಣಾಂತ ಉಪವಾಸವನ್ನು ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ಈ ವೇಳೆ ಕರ್ನಾಟಕ ಜನಪರ ವೇದಿಕೆಯ ಸುರೇಶ, ಮಹದೇವು, ವೀರಸ್ವಾಮಿ, ಶಿವಮೂರ್ತಿ, ರಮೇಶ್‌, ನಾಗರಾಜು, ಮಲ್ಲಿಕಾರ್ಜುನಸ್ವಾಮಿ, ವೇದಾವತಿ, ತಮ್ಮಯ್ಯ, ಕೃಷ ಚಂದ್ರಶೇಖರ್‌ ಇತರರಿದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.