Highway Service Road: ಸ್ಥಳೀಯರಿಗೆ ಶಾಪವಾದ ಹೆದ್ದಾರಿ ಸರ್ವಿಸ್‌ ರಸ್ತೆ


Team Udayavani, Aug 22, 2023, 2:51 PM IST

tdy-15

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸರ್ವಿಸ್‌ ರಸ್ತೆಯು ಗ್ರಾಮಗಳು ಹಾಗೂ ಜನವಸತಿ ಪ್ರದೇಶಗಳು ಸೇರಿದಂತೆ ಸ್ಥಳೀಯರಿಗೆ ಶಾಪವಾಗಿ ಪರಿಣಮಿಸಿದೆ. 6 ಪಥದ ಹೈವೇ ರಸ್ತೆ ನಿರ್ಮಾಣದಲ್ಲಿ ವಹಿ ದಷ್ಟು ಮುತು ವರ್ಜಿ ಸರ್ವಿಸ್‌ ರಸ್ತೆ ನಿರ್ಮಾಣ ದಲ್ಲಿ ತೋರದ ಹಿನ್ನೆಲೆ ಯಲ್ಲಿ ಸರ್ವಿಸ್‌ ರಸ್ತೆ ಸಂಚಾರ ಜೀವಭಯ ಹುಟ್ಟಿ ಸುವಂತಾಗಿದೆ.

ಹೆದ್ದಾರಿಯ 2 ಕಡೆ ತಲಾ ದ್ವಿಪಥ ರಸ್ತೆ ನಿರ್ಮಾಣ ಮಾಡಲಾಗಿದೆ. ಗ್ರಾಮಮಿತಿಗಳಲ್ಲಿ ಪಾದಚಾರಿ ರಸ್ತೆ ನಿರ್ಮಿಸದೆ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಜಾನುವಾರು ಗಳ ಓಡಾಟ ದುಸ್ತರವಾಗಿದೆ. ಶಾಲೆ, ಅಸ್ಪತ್ರೆ, ಹೊಲಗದ್ದೆಗಳಿಗೆ ನಡೆದುಕೊಂಡು ಹೋಗಲು ಪಾದಚಾರಿ ರಸ್ತೆ ಅಗತ್ಯದ ಕುರಿತು ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದರೂ ಪ್ರಾ ಕಾರ ಮೌನ ವಹಿಸಿದೆ.

ಸರ್ವಿಸ್‌ ರಸ್ತೆಯುದ್ದಕ್ಕೂ ಒಂದೇ ಒಂದು ಪ್ರಯಾಣಿಕರ ತಂಗುದಾಣವಿಲ್ಲ. ಪ್ರಯಾಣಿಕರು ಮಳೆ ಗಾಳಿ, ಬಿಸಿಲಿನಲ್ಲಿ ನಿಂತು ವಾಹನಗಳಿಗೆ ಕಾಯಬೇಕಾದ ಅನಿವಾರ್ಯತೆ ಬಂದೊದಗಿದೆ. ಅವೈಜಾnನಿಕ ರಸ್ತೆ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಲ್ಲುವ ಸೂಚನೆ ಅರಿತ ಹೈವೇ ಕಾಮಗಾರಿ ಡಿಬಿಎಲ್‌ ಕಂಪನಿ ರಸ್ತೆಯಲ್ಲೇ ಕಿಂಡಿ ನಿರ್ಮಿಸಿದೆ. ಪಾದಚಾರಿಗಳು ಕಿಂಡಿಯಲ್ಲಿ ಕಾಲು ಹಾಕಿದರೆ ಮುರಿಯುವುದಂತೂ ಪಕ್ಕವಾಗಿದೆ. ಸರ್ವಿಸ್‌ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಇದ್ದರೂ ಅಂಡರ್‌ ಪಾಸ್‌ಗೆ ತೆರಳಲು ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಸಂಖ್ಯೆ ನಿತ್ಯ ಹೆಚ್ಚುತ್ತಿದ್ದು, ಇದರ ಪರಿಣಾಮ ಅಪಘಾತ ನಿತ್ಯ ಸಾಮಾನ್ಯವಾಗಿದೆ.

ಸರ್ವಿಸ್‌ ರಸ್ತೆಯಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬು ನಿರ್ಮಾಣ:

ಸರ್ವಿಸ್‌ ರಸ್ತೆಯುದ್ದಕ್ಕೂ ಸಂಚಾರ ನಿಯಮ ಪಾಲನೆ ನಿಟ್ಟಿನಲ್ಲಿ ನಿರ್ಮಿಸಿರುವ ರಸ್ತೆ ಉಬ್ಬುಗಳಂತೂ ಅವೈಜ್ಞಾನಿಕವಾಗಿದ್ದು, ಸ್ವಲ್ಪ ಯಾಮಾರಿದರೆ ವಾಹನದ ಜೊತೆಗೆ ಸವಾರರ ಜೀವಕ್ಕೂ ಕುತ್ತು ಬರುವಂತಿದೆ. ರಸ್ತೆ ಉಬ್ಬು ನಿರ್ಮಾಣ ಮಾಡಿದ್ದರೂ ಅದಕ್ಕೆ ತಕ್ಕಂತೆ ಸೂಚನಾ ಫಲಕ ಅಳವಡಿಸದೆ ಸವಾರರು ವೇಗವಾಗಿ ಬಂದು ಉಬ್ಬು ಹತ್ತಿಸಿ ಬೀಳುವ ಪ್ರಸಂಗಗಳು ಹೆಚ್ಚಾಗಿದೆ.

ಅಪಾಯಕಾರಿಯಾದ ಸರ್ವಿಸ್‌ ರಸ್ತೆಯ ಸಂಚಾರ: ಆಕ್ರೋಶ: 

ಸರ್ವಿಸ್‌ ರಸ್ತೆ ನಿರ್ಮಾಣವಾಗಿ ವರ್ಷ ಕಳೆದರೂ ಕೆಲವು ಕಡೆ ರಸ್ತೆ ಬದಿ, ಕಾಲುವೆ, ಕೆರೆಕಟ್ಟೆಗಳಿಗೆ ತಡೆಗೋಡೆ ನಿರ್ಮಿಸಲು ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಬೂದನೂರು ಬಳಿ ಕೆರೆ, ಕಾಲುವೆ, ಗುಂಡಿಗಳಿಗೆ ಸರಿಯಾದ ಭದ್ರತೆ ಒದಗಿಸಿಲ್ಲ. ಇದರಿಂದ ರಾತ್ರಿ ವೇಳೆ ಸಂಚಾರ ದುಸ್ತರವಾಗಿದೆ. ಇನ್ನೂ ಹೈವೇ ಪ್ರಾ ಕಾರ ಕೇಂದ್ರದಿಂದ 150 ಕೋಟಿ ರೂ. ಅನುದಾನ ಬರಲಿದ್ದು, ಬಳಿಕ ಕಾಮಗಾರಿ ಮಾಡುವುದಾಗಿ ತಿಳಿಸಿದೆ. ಆದರೆ ಯಾವಾಗ ಅನುದಾನ ಬರುತ್ತದೆಯೋ ಗೊತ್ತಿಲ್ಲ. ಇದರಿಂದ ಕಾಮಗಾರಿ ಮಾಡುವ ಸೂಚನೆಯೂ ಗೋಚರಿಸುತ್ತಿಲ್ಲ. ಅಲ್ಲಿಯ ವರೆಗೂ ಮುಂಜಾಗ್ರತೆಯಾಗಿ ಸರ್ವಿಸ್‌ ರಸ್ತೆಗೆ ಭದ್ರತೆ ಒದಗಿಸಬೇಕು. ಇಲ್ಲದಿದ್ದರೆ ಮುಂದೆ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚಿದೆ.

ರಸ್ತೆಯ ಬಹುತೇಕ ಕಡೆ  ಪೂರ್ಣ ಗೊಳ್ಳದ ಕಾಮಗಾರಿ:

ಸರ್ವಿಸ್‌ ರಸ್ತೆಯ ಬಹುತೇಕ ಕಡೆ ಚರಂಡಿ ಕಾಮಗಾರಿ ಪೂರ್ಣಗೊಂಡಿಲ್ಲ. ಚರಂಡಿ ಸ್ಥಳೀಯ ಕೆರೆ ಕಟ್ಟೆ ಕಾಲುವೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಪರಿಣಾಮ ಪರಿಸರ ಮಾಲಿನ್ಯ ಹೆಚ್ಚುವ ಆತಂಕ ಸೃಷ್ಟಿಯಾಗಿದೆ. ಆದರೆ ಹೆದ್ದಾರಿ ಪ್ರಾ ಧಿಕಾರದವರು ಕಾಮಗಾರಿ ನಿಲ್ಲಿಸಿದ್ದಾರೆ. ಹೆದ್ದಾಗಿ ಕಾಮಗಾರಿಗೆ ಆಗಮಿಸಿ ಅಲ್ಲಲ್ಲಿ ವಾಸ ಮಾಡುತ್ತಿದ್ದ ಕಾರ್ಮಿಕರು ಸಹ ಜಾಗ ಖಾಲಿ ಮಾಡಿದ್ದಾರೆ. ಇದರಿಂದ ಮುಂದೆ ಅಲ್ಲಲ್ಲಿ ಉಳಿದಿರುವ ಕಾಮಗಾರಿ ನಡೆಯುವುದು ಅನುಮಾನವಾಗಿದೆ.

-ಎಚ್‌.ಶಿವರಾಜು

 

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.