ಮನೆ ತ್ಯಾಜ್ಯ ವಿಂಗಡಣೆ ನಾಗರಿಕರ ಜವಾಬ್ದಾರಿ

ಆರೋಗ್ಯಕರ ನಗರ ನಿರ್ಮಾಣಕ್ಕೆ ಸಹಕರಿಸಿ: ಲೋಕೇಶ್‌ ಹಸಿ, ಒಣ ಕಸ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ

Team Udayavani, Jul 7, 2019, 12:40 PM IST

mandya-tdy-2..

ಮಂಡ್ಯ: ಮನೆಯ ತ್ಯಾಜ್ಯದಲ್ಲಿ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡುವುದು ನಾಗರಿಕರ ಜವಾಬ್ದಾರಿ ಎಂದು ನಗರಸಭಾ ಆಯುಕ್ತ ಎಸ್‌.ಲೋಕೇಶ್‌ ಹೇಳಿದರು.

ಇಲ್ಲಿನ ಅಶೋಕನಗರದಲ್ಲಿರುವ ಜಿಲ್ಲಾ ಬಾಲಭವನದಲ್ಲಿ ನಗರಸಭೆ ಕಾರ್ಯಾಲಯದ ವತಿಯಿಂದ ನಡೆದ ಹಸಿ-ಒಣ ಮತ್ತು ಹಾನಿಕಾರಕ ಕಸ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮನೆಗಳಲ್ಲಿ ದೊರೆಯುವ ತ್ಯಾಜ್ಯ ಮತ್ತು ಹಾನಿಕಾರಕ ಕಸವನ್ನು ಮೂಲದಲ್ಲೇ ಬೇರ್ಪಡಿಸಿ ಕಸ ಸಂಗ್ರಹ ವಾಹನಗಳಿಗೆ ನೀಡುವುದು ಉತ್ತಮ. ಇದರಿಂದ ಉತ್ತಮ ಪರಿಸರ ಮತ್ತು ಆರೋಗ್ಯಕರ ನಗರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪ್ಲಾಸ್ಟಿಕ್‌ ನಿಷೇಧಕ್ಕೆ ಕೈಜೋಡಿಸಿ: ಪ್ಲಾಸ್ಟಿಕ್‌ ಮುಕ್ತ ನಗರಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ಲಾಸ್ಟಿಕ್‌ನಂತಹ ಹಾನಿಕಾರಕ ವಸ್ತುಗಳನ್ನು ದೂರವಿಟ್ಟು ಕಾಗದ ಅಥವಾ ಕೈಚೀಲಗಳಲ್ಲಿ ತರಕಾರಿ, ಹಣ್ಣು-ಸೊಪ್ಪು ಮತ್ತು ದಿನನಿತ್ಯ ಬಳಕೆ ವಸ್ತುಗಳನ್ನು ತರಲು ಬಳಸುವಂತೆ ಸಲಹೆ ನೀಡಿದರು.

ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದ ಸಾರ್ವಜನಿಕರಿಗೆ, ಪ್ಲಾಸ್ಟಿಕ್‌ ಬಳಸುವ ಮತ್ತು ನೀಡುವವವರಿಗೆ ಘನತ್ಯಾಜ್ಯ ನಿರ್ವಹಣೆ ನಿಯಮಗಳು-2016ರಂತೆ 100 ರಿಂದ 5000 ರೂ.ವರಗೆ ದಂಡ ವಿಧಿಸಲಾಗುವುದು ಮತ್ತು ಜೈಲು ಶಿಕ್ಷೆಯೂ ಆಗಬಹುದೆಂದು ಎಚ್ಚರಿಸಿದರು.

ಪರಿಸರ ಕಾಳಜಿ ಇರಲಿ: ನಗರಸಭಾ ಸದಸ್ಯೆ ಮಂಜುಳಾ ಉದಯಶಂಕರ್‌ ಮಾತನಾಡಿ, ಬಡಾವಣೆಗಳಲ್ಲಿ ನೆಲೆಸಿರುವ ನಾಗರಿಕರು ಪರಿಸರ ಕಾಳಜಿ ಬೆಳೆಸಿಕೊಂಡು ಮನೆಯಲ್ಲಿನ ತ್ಯಾಜ್ಯ ವಿಂಗಡಿಸಿಟ್ಟುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ನಸಿಂಗ್‌ ಹೋಂಗಳ ಪ್ಲಾಸ್ಟಿಕ್‌ ತ್ಯಾಜ್ಯವು ಒಳಚರಂಡಿಯಲ್ಲಿ ಕಟ್ಟಿಕೊಂಡು ತೊಂದರೆ ಯಾಗುತ್ತಿದೆ, ವಿದ್ಯಾವಂತ ಸಮುದಾಯವೇ ಹೀಗೆ ಲೋಪ ಎಸಗಿದರೆ ಯಾರಿಗೆ ಬುದ್ಧಿ ಹೇಳುವುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ನಾಗರೀಕರಿಗೆ ಘನತ್ಯಾಜ್ಯ ಮತ್ತು ಪರಿಸರ ರಕ್ಷಣೆಯ ಜಾಗೃತಿ ಕರಪತ್ರಗಳನ್ನು ಅಧಿಕಾರಿಗಳು ವಿತರಿಸಿದರು.

ನಗರಸಭೆ ಪರಿಸರ ಅಭಿಯಂತರೆ ಮೀನಾಕ್ಷಿ, ಉದ್ಯಾನವನ ನಿರೀಕ್ಷಕ ಕುಳ್ಳೇಗೌಡ, ಆರೋಗ್ಯ ನಿರೀಕ್ಷಕ ಗೋವಿಂದರಾಜು ಮತ್ತು ಸ್ಥಳೀಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.