ಕಾಂಗ್ರೆಸ್‌ ಪಕ್ಷದಿಂದಲೇ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ


Team Udayavani, Feb 22, 2019, 7:25 AM IST

cong-sum.jpg

ಪಾಂಡವಪುರ: ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇದ್ದೇನೆ, ಹಾಗಾಗಿ ಕಾಂಗ್ರೆಸ್‌ ಪಕ್ಷದಿಂದಲೇ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ ಎಂದು ಸುಮಲತಾ ಅಂಬರೀಶ್‌ ಹೇಳಿದರು. ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆ.ಎಸ್‌.ಪುಟ್ಟಣ್ಣಯ್ಯನವರ ಮನೆಗೆ ಭೇಟಿ ನೀಡಿ ಸುನೀತಾಪುಟ್ಟಣ್ಣಯ್ಯ ಹಾಗೂ ದರ್ಶನ್‌ಪುಟ್ಟಣ್ಣಯ್ಯರೊಂದಿಗೆ ಚೆರ್ಚಿಸಿ ನಂತರ ಮಾತನಾಡಿ, ನಮಗೆ ರಾಜಕೀಯದಲ್ಲಿ ಅಷ್ಟೊಂದು ಆಸಕ್ತಿ ಇರಲಿಲ್ಲ.

ಆದರೆ, ಮಂಡ್ಯ ಜಿಲ್ಲೆಯ ಜನರು, ಅಂಬರೀಶ್‌ ಅಭಿಮಾನಿಗಳು ನೀವು ರಾಜಕೀಯಕ್ಕೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆಮಾಡಬೇಕು ಎಂದು ಒತ್ತಡ ತಂದ ಹಿನ್ನೆಲೆಯಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದರು.

ಅಂಬರೀಶ್‌ ಕಾಂಗ್ರೆಸ್‌ ಪಕ್ಷದಲ್ಲಿಯೇ ಇದ್ದು ರಾಜಕೀಯ ಮಾಡಿದ್ದಾರೆ. ಹಾಗಾಗಿ ನಾವು ಸಹ ಕಾಂಗ್ರೆಸ್‌ ಪಕ್ಷದಿಂದಲೇ ಸ್ಪರ್ಧೆ ಮಾಡೋದಕ್ಕೆ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಸಿದ್ದರಾಮಯ್ಯರನ್ನು ಭೇಟಿ ನೀಡಿ ಚರ್ಚೆ ನಡೆಸಿದ್ದೇನೆ ಅವರು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ನೊಂದಿಗೆ ಚೆರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಅವರು ಸಹ ಕಡಾಖಂಡಿತವಾಗಿ ಟಿಕೆಟ್‌ ಕೋಡೋದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದ ತೀರ್ಮಾನಕ್ಕಾಗಿ ನಾನು ಕಾಯುತ್ತೇನೆ.  ಪಕ್ಷ ನನಗೆ ಟಿಕೆಟ್‌ ನೀಡಿದರೆ ಕಾಂಗ್ರೆಸ್‌ನಿಂದಲೇ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದರೆ ಅಂತಿಮ ತೀರ್ಮಾನವನ್ನು  ಜನರಿಗೆ ಬಿಡುತ್ತೇನೆ. ಜಿಲ್ಲೆಯ ಜನರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದೇ ನನ್ನ ಅಂತಿಮ ತೀರ್ಮಾನ ಜನತೆ ಪಕ್ಷೇತರವಾಗಿ ಸ್ಪರ್ಧಿಸಿ ಎಂದರೆ ಪಕ್ಷೇತರವಾಗಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎನ್ನುವುದನ್ನು ಸ್ಪಷ್ಟಪಡಿಸಿದರು.

ಜಿಲ್ಲೆಯ ಜನತೆ ಅಂಬರೀಶ್‌ ಅವರನ್ನು ಮೂರು ಬಾರಿ ಸಂಸದರಾಗಿ, ಒಮ್ಮೆ ಹೆಚ್ಚು ಮತಗಳ ಅಂತರದೊಂದಿಗೆ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದಾರೆ. ಜಿಲ್ಲೆಯ ಜನರ ಋಣ ಸಾಕಷ್ಟು ನಮ್ಮ ಕುಟುಂಜದ ಮೇಲಿದೆ, ನಾನು ಆ ಋಣ ತೀರಿಸಬೇಕಿದೆ ಹಾಗಾಗಿ ನಾನು ಸ್ಪರ್ಧೆ ಮಾಡುವುದಾದರೆ ಅದು ಮಂಡ್ಯದಿಂದಲೇ ಎಂದು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

ಸುನೀತಾ ಪುಟ್ಟಣ್ಣಯ್ಯ ಮಾತನಾಡಿ, ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಫೆ.26ರಂದು ರೈತಸಂಘ ಮುಖಂಡರ ಸಭೆ ಇದೆ. ಸಭೆಯಲ್ಲಿ ಚೆರ್ಚಿಸಿ ತೀರ್ಮಾನ  ತೆಗೆದುಕೊಳ್ಳುತ್ತೇವೆ. ಬೇರೆ ಪಕ್ಷದವರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ನೋಡೋಣ ಆ ನಂತರ ನಾವು ಬೆಂಬಲ ಕೊಡೋದೋ ಬೇಡವೋ ತೀರ್ಮಾನಿಸುತ್ತೇವೆ ಎಂದರು.

ಇದಕ್ಕೂ ಮುನ್ನ ಸುಮಲತಾ ಹಾಗೂ ಪುತ್ರ ಅಭಿಷೇಕ್‌ ದಿ.ಕೆ.ಎಸ್‌.ಪುಟ್ಟಣ್ಣಯ್ಯ ಅವರ ಸಮಾಧಿ ಬಳಿ ತೆರಳಿ ಪುಷ್ಪಾರ್ಚನೆ ಸಲ್ಲಿಸಿದರು. ಕೆಪಿಸಿಸಿ ಸದಸ್ಯರಾದ ಎಲ್‌.ಡಿ.ರವಿ  ಸಚ್ಚಿದಾನಂದ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಎಲ್‌.ಸಿ.ಮಂಜುನಾಥ್‌, ಮಹಿಳಾ ಘಟಕದ ಅಧ್ಯಕ್ಷೆ ಜಿ.ಕೆ.ಕೋಮಲಚನ್ನಪ್ಪ,

ಕಿಸಾನ್‌ ಘಟಕದ ಅಧ್ಯಕ್ಷ ಸಿ.ಆರ್‌.ರಮೇಶ್‌, ಕಾಂಗ್ರೆಸ್‌ ಅಹಿಂದ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಯುವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ್‌, ಅಂಬರೀಶ್‌ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್‌, ಮುಖಂಡರಾದ ದೇವೇಗೌಡ, ಹಾರೋಹಳ್ಳಿ ನಂಜುಂಡೇಗೌಡ, ಕೆ.ಕುಬೇರ, ಬಿ.ಕೆ.ರೇವಣ್ಣ, ಬಿ.ಜೆ.ಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.