ನಾನು 2 ಲಕ್ಷ ಮತಗಳ ಅಂತರದಿಂದ ಗೆಲ್ಲುವೆ
Team Udayavani, May 11, 2019, 11:25 AM IST
ಕೆ.ಆರ್.ಪೇಟೆ: ಏಪ್ರಿಲ್ 18ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಜನರು ನನಗೆ ಆಶೀರ್ವಾದ ಮಾಡಿದ್ದು, ನಾನು ಈಗಾಗಲೇ ಎರಡು ಲಕ್ಷ ಮತಗಳ ಅಂತರದಲ್ಲಿ ಗೆದ್ದಾಗಿದೆ, 23ರಂದು ಅಧಿಕೃತವಾಗಿ ಫಲಿತಾಂಶ ಹೊರಬೀಳಬೇಕಾಗಿದೆ ಅಷ್ಟೇ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಶಾಸಕ ನಾರಾಯಣಗೌಡರ ನಿವಾಸದಲ್ಲಿ ಯೋಜಿಸಿದ್ದ ಪುರಸಭಾ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ. ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಶಾಸಕರು ಮತ್ತು ಕಾರ್ಯಕರ್ತರು ಸುಮಾರು ಒಂದೂವರೆ ತಿಂಗಳು ತುಂಬಾ ಶ್ರಮ ಹಾಕಿ ಪ್ರಚಾರ ಮಾಡಿದ್ದಾರೆ. ಅವರ ಶ್ರಮದಿಂದ ನಾನು ಕನಿಷ್ಠ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಹಕಾರಿಯಾಗಿದೆ. ಇದರ ಜೊತೆಗೆ ನಾವು ರಾಜ್ಯದಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಿದ್ದೇವೆ. ಮಂಡ್ಯದಲ್ಲಿಯೂ ಮೈತ್ರಿಧರ್ಮ ಪಾಲಿಸಿ ಸಹಕರಿಸಿದ್ದಾರೆ ಎಂದು ನಾನು ನಂಬಿದ್ದೇನೆ. ನನಗಾಗಿ ದುಡಿದ ಸಚಿವರು, ಶಾಸಕರು, ಎಂಎಲ್ಸಿಗಳು, ಮುಖಂಡರು, ಕಾರ್ಯಕರ್ತರು, ಮತದಾರರಿಗೆ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದರು.
ಮಂಡ್ಯದಲ್ಲೇ ನೆಲೆಸುತ್ತೇನೆ: ನಾನು ಚುನಾವಣಾ ಪೂರ್ವದಲ್ಲಿ ಮಂಡ್ಯದಲ್ಲಿ ಮನೆ ಮಾಡಿಕೊಂಡು ಇಲ್ಲಿಯೇ ನೆಲೆಸುತ್ತೇನೆ ಎಂದು ಭರವಸೆ ನೀಡಿದ್ದೆ. ಅದರಂತೆ ನಾನು ಮಂಡ್ಯದಲ್ಲಿ ನೆಲೆಸಲು ಸಿದ್ದನಿದ್ದೇನೆ. ಆದರೆ ನಾನು ಬಾಡಿಗೆ ಮನೆಯಲ್ಲಿ ವಾಸ ಮಾಡುವುದಿಲ್ಲ. ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಂಡು ಜಿಲ್ಲೆಯಲ್ಲಿ ಇರುತ್ತೇನೆ. ಆದರೆ ಮನೆಯನ್ನು ಒಂದು ತೋಟದಲ್ಲಿ ನಿರ್ಮಾಣ ಮಾಡಬೇಕು ಎಂದುಕೊಂಡಿರುವೆ. ಅದಕ್ಕಾಗಿ ಸೂಕ್ತ ಸ್ಥಳದಲ್ಲಿ ತೋಟ ನಿರ್ಮಾಣ ಮಾಡಲು ಸ್ಥಳ ಹುಡುಕುತ್ತಿದ್ದೇನೆ.
ಆರು ತಿಂಗಳ ಒಳಗಾಗಿ ಮನೆ ನಿರ್ಮಾಣ ಮಾಡಿ ಮಂಡ್ಯದಲ್ಲಿಯೆ ವಾಸ್ತವ್ಯ ಹೂಡುತ್ತೇನೆ ಎಂದು ತಿಳಿಸಿದರು.
ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಸಚಿವ ಪುಟ್ಟರಾಜು, ಜಿಪಂ ಸದಸ್ಯ ಬಿ.ಎಲ್.ದೇವರಾಜ್, ಮುಖಂಡ ಕೆ.ಶ್ರೀನಿವಾಸ್ ಹಾಗೂ ಪುರಸಭಾ ಚುನಾವಣೆಯಲ್ಲಿ ಸ್ವರ್ಧೆಗೆ ಸಿದ್ದರಾಗಿರುವ ಆಕಾಂಕ್ಷಿಗಳು ಸೇರಿದೆಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ