ಪರಿಸರ ರಕ್ಷಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

ಬಾಲಭವನದಲ್ಲಿ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ್‌, ನಗರಸಭೆ ಪರಿಸರ ಎಂಜಿನಿಯರ್‌ ಮೀನಾಕ್ಷಿ, ಸದಸ್ಯೆ ಮಂಜುಳಾ, ಆರೋಗ್ಯ ಪರಿವೀಕ್ಷಕ ಗೋವಿಂದ್‌, ಕಲ್ಮನೆ ಕಾಮೇಗೌಡ ಇತರರಿದ್ದರು.

Team Udayavani, Jun 6, 2019, 11:33 AM IST

mandya-tdy-1..

ಮಂಡ್ಯ: ನಿಸರ್ಗ ನಮಗೆ ಶುದ್ಧ ಗಾಳಿ, ನೀರು, ಆಹಾರ ನೀಡುತ್ತಿದ್ದು, ನಾವು ಅವೆಲ್ಲವನ್ನೂ ಮಲಿನಗೊಳಿಸುತ್ತಿದ್ದೇವೆ. ಈ ಪ್ರಕ್ರಿಯೆಯಿಂದ ದೂರ ಉಳಿದು ಪರಿಸರದ ಮಡಿಲಿನಲ್ಲಿ ಎಲ್ಲರೂ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ನಗರಸಭೆ ಪರಿಸರ ಎಂಜಿನಿಯರ್‌ ಮೀನಾಕ್ಷಿ ತಿಳಿಸಿದರು.

ನಗರದ ಬಾಲಭವನದಲ್ಲಿ ಬುಧವಾರ ನಗರಸಭೆ ಹಾಗೂ 19ನೇ ವಾರ್ಡ್‌ನ ನಾಗರೀಕ ವೇದಿಕೆ ವತಿಯಿಂದ ನಡೆದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯಂತ್ರಗಳಿಂದ ಪರಿಸರ ಮಾಲಿನ್ಯ: ಆಧುನಿಕತೆ ಹಾಗೂ ಜಾಗತೀಕರಣದ ಪ್ರಭಾವಕ್ಕೆ ಒಳಗಾಗಿರುವ ನಾವು ಅಮೂಲ್ಯ ಅರಣ್ಯ ಸಂಪತ್ತನ್ನು ನಾಶಗೊಳಿಸುತ್ತಿದ್ದೇವೆ. ಕಾಡನ್ನು ಕಡಿದು ಕಾಂಕ್ರೀಟ್ ಜಗತ್ತು ಸೃಷ್ಟಿಸಲು ಮುಂದಾಗಿದ್ದೇವೆ. ನಮ್ಮ ಐಷಾರಾಮಿ ಜೀವನಕ್ಕೆ ಪರಿಸರಕ್ಕೆ ಮಾರಕವಾಗುವ ಕಾರ್ಖಾನೆ, ವಾಹನ, ಹವಾ ನಿಯಂತ್ರಣ ಯಂತ್ರಗಳ ಬಳಕೆಯಿಂದ ಪರಿಸರ ಮಾಲಿನ್ಯ ಮಾಡುತ್ತಿದ್ದೇವೆ. ವಿಶ್ವದಲ್ಲಿ ಬಾಂಗ್ಲಾ, ಪಾಕಿಸ್ತಾನ ಹಾಗೂ ಭಾರತ ಕ್ರಮವಾಗಿ ವಾಯುಮಾಲಿನ್ಯದಲ್ಲಿ ಪ್ರಥಮ ಸ್ಥಾನದಲ್ಲಿವೆ. ಇದರಿಂದ ಉಸಿರಾಡಲು ಶುದ್ಧಗಾಳಿ ಕೊರತೆಯಿಂದಾಗಿ ಸಾವನ್ನಪ್ಪುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಮೀನಾಕ್ಷಿ ವಿಷಾದ ವ್ಯಕ್ತಪಡಿಸಿದರು.

ಪ್ಲಾಸ್ಟಿಕ್‌ ಬಳಕೆ ನಿಷೇಧ: ವಿಶ್ವದಲ್ಲಿ ಪ್ಲಾಸ್ಟಿಕ್‌ ಬಳಕೆಯಿಂದ ಭೂಮಿ, ಸೇರಿ ಎಲ್ಲಾ ಜೀವರಾಶಿಗಳಿಗೂ ಮಾರಕ ಪರಿಣಾಮ ಎದುರಾಗಿದೆ. ಜೀವ ಸಂಕುಲ ಉಳಿಸಿಕೊಳ್ಳಲು ಪ್ಲಾಸ್ಟಿಕ್‌ ಬಳಕೆ ತ್ಯಜಿಸುವ ಕುರಿತು ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ಈಗಾಗಲೇ ಸರ್ಕಾರದ ವತಿಯಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿದೆ. ಆದರೂ ನಾವು ಎಚ್ಚೆತ್ತುಕೊಂಡಿಲ್ಲ. ಎಲ್ಲರೂ ಪ್ಲಾಸ್ಟಿಕ್‌ ತ್ಯಜಿಸಿ ಬಟ್ಟೆ ಚೀಲಗಳನ್ನು ಬಳಸುವಂತೆ ಮನವಿ ಮಾಡಿದರು.

ನಾಲ್ಕು ಉದ್ಯಾನ ದತ್ತು: ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕ ಎಂ.ಎಸ್‌.ರಾಜು ಮಾತನಾಡಿ, ನಗರದಲ್ಲಿ ಕಾವೇರಿ ವನ ಹಾಗೂ ಭವ್ಯ ವನದಲ್ಲಿ ಗಿಡಗಳು ು ಬೆಳೆಸುವ ಮೂಲಕ ಉದ್ಯಾನದ ಸೌಂದರ್ಯ ಹೆಚ್ಚಿಸಲಾಗಿದೆ. ಇದೇ ನಿಟ್ಟಿನಲ್ಲಿ ನಗರ ಸಭೆಯಿಂದ ನಾಲ್ಕು ಉದ್ಯಾನಗಳನ್ನು ದತ್ತು ಪಡೆದು ವಿವಿಧ ಜೈವಿಕ ಉಪಯೋಗಿ ಗಿಡಗಳು ಹಾಗೂ ಹೂವಿನ ಸಸಿಗಳನ್ನು ಬೆಳೆಸಿ ಸುಂದರ ಉದ್ಯಾನವನಗಳನ್ನಾಗಿ ನಿರ್ಮಾಣ ಮಾಡ ಲಾಗುವುದು ಎಂದು ಹೇಳಿದರು.

ತಾರಸಿ ತೋಟ ನಿರ್ಮಿಸಿ: ನಾವು ಪ್ರತಿ ನಿತ್ಯ ರಾಸಾಯನಿಕ ಬಳಕೆ ಮಾಡಿದ ತರಕಾರಿ, ಸೊಪ್ಪು ಹಾಗೂ ಹಣ್ಣುಗಳನ್ನು ಬಳಕೆ ಮಾಡುತ್ತಿದ್ದೇವೆ. ಹೀಗಾಗಿ ಮನೆಯಲ್ಲಿಯೇ ತಾರಸಿ ತೋಟ ನಿರ್ಮಿಸಿ ಸಾವಯವ ರೀತಿಯಲ್ಲಿ ಸೊಪ್ಪು ತರಕಾರಿ ಬೆಳೆಯಬೇಕು. ವ್ಯಾಪಾರಿಗಳು ಹಣ್ಣು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್‌ ಬಳಕೆ ಮಾಡುತ್ತಾರೆ. ಹೀಗಾಗಿ ಕ್ಯಾಲ್ಸಿಯಂ ಕಾರ್ಬೈಡ್‌ ಬಳಸುವ ಮಂಡಿ ಮೇಲೆ ಧಾಳಿ ಮಾಡಿ, ಮಾಲೀಕರಿಗೆ 2 ಲಕ್ಷ ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಸಾವಯವ ರೀತಿಯಲ್ಲಿ ಬೆಳೆದ ತರಕಾರಿ, ಸೊಪ್ಪುಗಳ ಬಳಕೆ, ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳ ಬಳಕೆಯಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಕಲ್ಮನೆ ಕಾಮೇ ಗೌಡರನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಪರಿಸರಕ್ಕೆ ಪೂರಕವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಾಗರಿಕರು ಹಾಗೂ ಗಣ್ಯರಿಂದ ಬಾಲಭವನ ಉದ್ಯಾನದಲ್ಲಿ ಸಸಿ ನೆಡಲಾಯಿತು.

ಅರಣ್ಯ ಇಲಾಖೆ ಉಪ ಸಂರಕ್ಷಣಾ ಅಧಿಕಾರಿ ಎನ್‌.ಶಿವರಾಜ್‌, ನಗರಸಭೆ ಸದಸ್ಯೆ ಮಂಜುಳಾ ಉದಯಶಂಕರ್‌, ನಗರಸಭೆ ಆರೋಗ್ಯ ಪರಿವೀಕ್ಷಕ ಗೋವಿಂದ್‌, ನಾಗರೀಕ ವೇದಿಕೆ ಸದಸ್ಯರಾದ ಉಮೇಶ್ಚಂದ್ರ, ಹರಿಪ್ರಸಾದ್‌, ರಾಜಶ್ರೀ, ಅನಂತರಾವ್‌, ವಿಶಾಲಾಕ್ಷಿ ಇತರರಿದ್ದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.