ಅಕ್ರಮ ಗಣಿಗಾರಿಕೆ ಬಗ್ಗೆ ಉತ್ತರಿಸಲು ಅಧಿಕಾರಿಗಳೇ ತಬ್ಬಿಬ್ಬು
Team Udayavani, Jul 8, 2021, 10:20 PM IST
ಮಂಡ್ಯ: ಇಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ನಾನು ಬಂದು ನಿಮಗೆತೋರಿಸಬೇಕಾ? ಎಂದು ಗಣಿ ಮತ್ತು ಭೂ ವಿಜಾnನ ಅಧಿಕಾರಿಗಳನ್ನು ಸಂಸದೆ ಸುಮಲತಾ ಅಂಬರೀಷ್ ತರಾಟೆಗೆ ತೆಗೆದುಕೊಂಡರು.
ಶ್ರೀರಂಗಪಟ್ಟಣ ವ್ಯಾಪ್ತಿಯ ಚೆನ್ನನಕೆರೆ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಪರಿಶೀಲನೆ ನಡೆಸಿದರು.ಅಕ್ರಮ ಗಣಿಗಾರಿಕೆ ವಿರುದ್ಧ ಎಷ್ಟು ದಂಡ ಹಾಕಿದ್ದೀರಾ? ಏನುಕ್ರಮ ಆಗಿದೆ?.
ನಿನ್ನೆಯೂ ಇಲ್ಲಿ ಅಕ್ರಮ ಗಣಿ ಚಟುವಟಿಕೆ ನಡೆದಿದೆ. ದೊಡ್ಡ ದೊಡ್ಡ ಟ್ರಕ್ಓಡಾಡಿರುವ ಗುರುತು ಕಾಣುತ್ತಿವೆ. ಸಭೆಯಲ್ಲಿ ಕುಳಿತು ಸುಲಭವಾಗಿಹೇಳುತ್ತೀರಾ?. ನೀವು ಅಕ್ರಮದ ವಿರುದ್ಧ ಏನುಕ್ರಮಕೈಗೊಂಡಿದ್ದೀರಾ? ಎಂದುಪ್ರಶ್ನಿಸಿದಾಗ ಅಧಿಕಾರಿಗಳು ತಬ್ಬಿಬ್ಬುಗೊಂಡರು.ಸುಮಲತಾ ಅವರ ಪ್ರಶ್ನೆಗೆ ಅಧಿಕಾರಿಗಳು ಉತ್ತರಿಸಲು ತಡವರಿಸಿದರು.
ಅಕ್ರಮವಾಗಿ ಎಷ್ಟು ಕಲ್ಲು ಹಾಗೂ ಇತರೆ ಗಣಿಗೆ ಸಂಬಂಧಿಸಿದ ಕಚ್ಚಾ ವಸ್ತುತೆಗೆಯಲಾಗಿದೆ ಎಂಬ ಪ್ರಶ್ನೆಗೆ ಅಧಿಕಾರಿಗಳು, ಮೌನವಾಗಿದ್ದರು. ಗಣಿಅಧಿಕಾರಿಯೊಬ್ಬ ಫೈಲ್ ತೆಗೆದು 2.74 ಲಕ್ಷ ಮೆಟ್ರಿಕ್ ಟನ್ನಷ್ಟು ಕಲ್ಲುತೆಗೆಯಲಾಗಿದೆ. ಅದಕ್ಕೆ ದಂಡ ವಿಧಿಸಲಾಗಿದೆ ಎಂದು ಉತ್ತರಿಸಿದರು.
ಎಷ್ಟುದಂಡ ಎಂದಾಗ ಸಮರ್ಪಕ ಉತ್ತರ ಬರಲಿಲ್ಲ. ಸುಮಾರು 300 ಕೋಟಿ ರೂ.ಗೂಹೆಚ್ಚು ಸರ್ಕಾರಕ್ಕೆ ನಷ್ಟವಾಗಿದೆ. ಅಷ್ಟೂ ದಂಡವನ್ನು ವಸೂಲಿ ಮಾಡಿಲ್ಲ. ಕೂಡಲೇಎಲ್ಲಾ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು. ಇಲ್ಲದಿದ್ದರೆ, ನಾನು ಪ್ರಧಾನ ಮಂತ್ರಿಗೆದೂರು ನೀಡುತ್ತೇನೆಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ