ಅಕ್ರಮ ಕಲ್ಲು ಗಣಿಗಾರಿಕೆ, ಕ್ರಷರ್‌ ಬಂದ್‌

ಜೈ ಮಾರುತಿ ಕಲ್ಲು ಗಣಿ, ಟಿ.ಜೆ.ಸ್ಟೋನ್‌ ಕ್ರಷರ್‌ಗೆ ಬೀಗ • ಗಣಿ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

Team Udayavani, Aug 20, 2019, 5:24 PM IST

mandya-tdy-2

ಜೈ ಮಾರುತಿ ಕ್ರಷರ್‌ನಲ್ಲಿ ದಾಖಲೆ ಪರಿಶೀಲಿಸಿದ ಅಧಿಕಾರಿಗಳು.

ಕೆ.ಆರ್‌.ಪೇಟೆ: ತಾಲೂಕಿನ ಸೋಮೇನಹಳ್ಳಿ ಗ್ರಾಮ ದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜೈ ಮಾರುತಿ ಕಲ್ಲು ಗಣಿಗಾರಿಕೆ ಮೇಲೆ ದಾಳಿ ನಡೆಸಿದ ತಹಶೀಲ್ದಾರ್‌ ಎಂ.ಶಿವಮೂರ್ತಿ ನೇತೃತ್ವದ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಗೆ ಬೀಗ ಮುದ್ರೆ ಹಾಕಿ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಜೈಮಾರುತಿ ಕಲ್ಲು ಗಣಿಗಾರಿಕೆಯ ಮಾಲೀಕ ಮಂಜುನಾಥ್‌ ಸುಮಾರು 2014ರಿಂದ ಈವರೆಗೆ ಯಾವುದೇ ಪರವಾನಗಿ ಪಡೆಯದೆ ಕಲ್ಲು ಗಣಿಗಾರಿಕೆ ನಡೆಸುವ ಮೂಲಕ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿ ದ್ದಲ್ಲದೆ, ಪರಿಸರಕ್ಕೆ ಹಾನಿಯಾಗುವಂತೆ ಗಣಿಗಾರಿಕೆ ನಡೆಸಿ ಪರಿಸರ ನಾಶಕ್ಕೂ ಕಾರಣರಾಗಿದ್ದರು.

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಆದೇಶದ ಮೇರೆಗೆ ಸೋಮೇನಹಳ್ಳಿಯ ಜೈಮಾರುತಿ ಸ್ಟೋನ್‌ ಕ್ರಷರ್‌ಗೆ ದಾಳಿ ನಡೆಸುವ ಸುಳಿವು ಅರಿತ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ದಂಧೆಕೋರರು ಸ್ಥಳದಿಂದ ಪರಾರಿಯಾಗಿದ್ದರು. ಆಗ ಅಧಿಕಾರಿಗಳು ಕ್ರಷರ್‌ ಬಳಿ ನಿಲ್ಲಿಸಿದ್ದ 2 ಜೆಸಿಬಿ ಮತ್ತು 2 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡು ಕ್ರಷರ್‌ಗೆ ಬೀಗ ಜಡಿದು ಮಾಲೀ ಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಶಿವಪುರ ಬಳಿ ಕ್ರಷರ್‌ ಬಂದ್‌: ಶೀಳನೆರೆ ಹೋಬಳಿ ಶಿವಪುರದ ಬಳಿ ಗಣಿಗಾರಿಕೆ ನಡೆಸುತ್ತಿದ್ದ ಟಿ.ಜೆ.ಸ್ಟೋನ್‌ ಕ್ರಷರ್‌ಗೆ ಅಧಿಕೃತ ಪರವಾನಗಿ ಇದ್ದರೂ ಎಂ.ಸ್ಯಾಂಡ್‌, ಜಲ್ಲಿ, ಸೈಜುಗಲ್ಲುಗಳನ್ನು ಹೊರ ಸಾಗಾಣಿಕೆ ಮಾಡಿರುವ ಲೋಡ್‌ಗಳ ಬಗ್ಗೆ ಸೂಕ್ತ ದಾಖಲೆ ಸಲ್ಲಿಸದ ಕಾರಣ ಅಲ್ಲಿಯವರೆಗೆ ಕ್ರಷರ್‌ ಬಂದ್‌ ಮಾಡಿ ದಾಖಲೆ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳುವಂತೆ ಮಾಲೀಕರಿಗೆ ಅಧಿಕಾರಿಗಳು ಸಲಹೆ ನೀಡಿದ್ದರು.

ದಾಖಲೆಗಳ ಪರಿಶೀಲನೆ: ಅಧಿಕಾರಿಗಳು ಕ್ರಷರ್‌ಗೆ ಭೇಟಿ ನೀಡಿದ ವೇಳೆ ವಿವಿಧ ಇಲಾಖೆಗಳಿಂದ ಪಡೆದಿರುವ ಅಧಿಕೃತ ಪರವಾನಗಿ ಪತ್ರಗಳನ್ನು ಕ್ರಷರ್‌ ಮಾಲೀಕ ಹೆಚ್.ಟಿ.ಲೋಕೇಶ್‌ ನೀಡಿದರು. ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು ಅಧಿಕೃತ ಪರವಾನಗಿ ಪಡೆದು ಕೊಂಡಿರುವಂತೆಯೇ ಎಂಸ್ಯಾಂಡ್‌, ಜಲ್ಲಿ, ಸೈಜುಗಲ್ಲುಗಳನ್ನು ಹೊರ ಸಾಗಿಸುವಾಗ ಅಗತ್ಯ ಬಿಲ್ ಇತರೆ ದಾಖಲೆ ಪತ್ರಗಳನ್ನು ನೀಡುವ ಮೂಲಕ ಕ್ರಷರ್‌ ನಡೆಸುವಂತೆ ಸಲಹೆ ನೀಡಿದರು. ಟಿ.ಜೆ.ಸ್ಟೋನ್‌ ಕ್ರಷರ್‌ ಮಾಲೀ ಕರು ಕ್ರಷರ್‌ ನಡೆಸಲು ಕಂದಾಯ ಇಲಾಖೆ, ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿದ್ದಾರೆ. ಆದರೆ, ಪ್ರತಿನಿತ್ಯ 75 ರಿಂದ 80 ಲೋಡ್‌ನ‌ಷ್ಟು ಜಲ್ಲಿ, ಎಂ ಸ್ಯಾಂಡ್‌ ಉತ್ಪನ್ನಗಳನ್ನು ಹೊರಗೆ ಸಾಗಾಟ ನಡೆಸಿ ದ್ದಾರೆ. ಆದರೆ, ಇದಕ್ಕೆ ಸಂಬಂಧಿಸಿದ ಇಲಾಖೆ ಗಳಿಗೆ ಪೂರ್ಣ ಪ್ರಮಾಣದಲ್ಲಿ ಲೆಕ್ಕಪತ್ರಗಳನ್ನು ತೋರಿಸಿಲ್ಲ ವಾದ್ದರಿಂದ ಮಂಡ್ಯ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಕ್ರಷರ್‌ನ್ನು ಸೀಜ್‌ ಮಾಡಲಾಗಿದೆ ಎಂದು ತಹಶೀಲ್ದಾರ್‌ ಶಿವಮೂರ್ತಿ ತಿಳಿಸಿದರು.

ಆದೇಶ ನೀಡುವವರೆಗೂ ಸ್ಥಗಿತ: ಮುಂದಿನ ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಸಭೆ ನಡೆಸಿ ಮುಂದಿನ ಆದೇಶವನ್ನು ನೀಡುವವರೆಗೆ ಕ್ರಷರ್‌ನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಅಲ್ಲಿಯವರೆಗೆ ಯಾವುದೇ ರೀತಿಯ ಚಟುವಟಿಕೆಗಳನ್ನು ಮಾಡದಂತೆ ಜಿಲ್ಲಾ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಮುತ್ತಪ್ಪ ಮಾಲೀಕರಿಗೆ ತಿಳಿಸಿದರು.

ದಾಳಿಯಲ್ಲಿ ತಹಶೀಲ್ದಾರ್‌ ಶಿವಮೂರ್ತಿ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಅಧಿಕಾರಿ ಮುತ್ತಪ್ಪ, ಜಿಲ್ಲಾ ಪರಿಸರ ಇಲಾಖೆಯ ಅಧಿಕಾರಿ ಸವಿತಾ, ಅರಣ್ಯ ಇಲಾಖೆ ಅಧಿಕಾರಿ ಮಧುಸೂದನ್‌, ಸಬ್‌ ಇನ್ಸ್‌ಪೆಕ್ಟರ್‌ ಹೆಚ್.ಎಸ್‌.ವೆಂಕಟೇಶ್‌, ರಾಜಸ್ವ ನಿರೀಕ್ಷಕ ಚಂದ್ರಶೇಖರ್‌, ಉಪತಹಶೀಲ್ದಾರ್‌ ಚಂದ್ರಶೇಖರ್‌ಗೌಡ, ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾಜರ್ಜುನ್‌, ಸಂತೇಬಾಚಹಳ್ಳಿ ಉಪ ತಹಶೀಲ್ದಾರ್‌ ರಾಮಚಂದ್ರು ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.