ಬೇಸಿಗೆಯಲ್ಲಿ ಅಕ್ರಮವಾಗಿ ಕೆರೆಕಟ್ಟೆ ನೀರು ಬಳಕೆ 


Team Udayavani, May 18, 2023, 3:26 PM IST

ಬೇಸಿಗೆಯಲ್ಲಿ ಅಕ್ರಮವಾಗಿ ಕೆರೆಕಟ್ಟೆ ನೀರು ಬಳಕೆ 

ಕಿಕ್ಕೇರಿ: ಬೇಸಿಗೆ ಬಂತೆಂದರೆ ಜೀವ ಸಂಕುಲಕ್ಕೆ ಬೇಕಾದ ಕೆರೆಕಟ್ಟೆಯ ನೀರನ್ನು, ಕೆರೆಕಟ್ಟೆ ಪಾತ್ರದ ಜಮೀನಿನವರು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೆರೆ ಬತ್ತಲು ಆರಂಭಿಸುತ್ತಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾಣಿಪಕ್ಷಿಗಳು ಆಹಾರಕ್ಕಿಂತ ನೀರಿಗಾಗಿ ಹುಡುಕಾಟ ದೊಡ್ಡ ಸಮಸ್ಯೆವಾಗಿದೆ. ತಾಲೂಕಿನ ದೊಡ್ಡಕೆರೆಯಾದ ಅಮಾನಿಕೆರೆಯಲ್ಲಿ ಹೂಳು ಹೆಚ್ಚಾದ ಕಾರಣ ನೀರಿನ ಸಂಗ್ರಹದ ಸಾಮರ್ಥ್ಯ ಕುಸಿದಿದೆ. ಒತ್ತುವರಿ ಕಾಟದಿಂದ ಈಗಾಗಲೇ ಸಾಕಷ್ಟು ಕೆರೆ ಪಾತ್ರ ಕಿರಿದಾಗಿದೆ. ಹಿಂದಿದ್ದ ದಕ್ಷ ಅಧಿಕಾರಿ ಡಾ.ಎಚ್‌.ಎಲ್‌. ನಾಗರಾಜು ತಹಶೀಲ್ದಾರ್‌ ಆಗಿದ್ದಾಗ ಕೆರೆ ಒತ್ತುವರಿಗಾಗಿ ಶ್ರಮಿಸಿದ್ದರು. ವರ್ಗಾವಣೆ ನಂತರ ಕೆರೆ ಒತ್ತುವರಿ ತೆರವಾಗಿಲ್ಲ. ಹೀಗಾಗಿ ನೀರಿನ ಸಾಂದ್ರತೆ ಕಳೆದುಕೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬಿಸಿಲಿಗೆ ಜೀವಿಗಳು ತತ್ತರ: ಕೆರೆಯಲ್ಲಿ ನೀರು ತುಂಬಿದ್ದರೆ ಮಾತ್ರ, ಇಲ್ಲಿನ ರೈತರ ಬದುಕು ಹಸನು ಕಾಣಬಹುದಾಗಿದೆ. ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಬಿಸಿಲಿಗೆ ಪ್ರಾಣಿಪಕ್ಷಿಗಳು ತತ್ತರಿಸುತ್ತಿವೆ. ನೀರಿನ ಜೋಪಾನ ಮಾಡಿಕೊಳ್ಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗಮನಹರಿಸದಿದ್ದರೆ, ಬೇಸಿಗೆ ಮುಗಿಯುವು ದರೊಳಗೆ ಸಂಪೂರ್ಣ ಕೆರೆ ಬರಿದಾಗುವ ಜೊತೆಗೆ ಪ್ರಾಣಿಪಕ್ಷಿಗಳ ಜೀವಕ್ಕೆ ಕುತ್ತು ಕಾಡಲಿದೆ. ಅಕ್ರಮವಾಗಿ ಕೆರೆ ನೀರಿನ ಬಳಕೆ ವರ್ಷಪೂರ್ಣ ಕೆರೆದಂಡೆಯ ಪ್ರದೇಶಗಳಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಕಂಡು ಕಾಣದಂತೆ ಕಣ್ಣುಮುಚ್ಚಿಕೊಂಡಿರುವುದೇ ಇಂತಹ ಅಕ್ರಮ ಕಾರಣ ಎನ್ನುವುದು ನಾಗರಿಕರ ನಿವೇದನೆಯಾಗಿದೆ.

ಅಧಿಕಾರಿಗಳು ಮೌನ: ಕಿಕ್ಕೇರಮ್ಮನ ಗುಡಿಯ ರಸ್ತೆಯಿಂದ ಶ್ರವಣಬೆಳಗೂಳಕ್ಕೆ ಹೋಗುವ ರಸ್ತೆಯ ಬೂನಹಳ್ಳಿ ತಿರುವು, ಮಾದಿಹಳ್ಳಿ, ಸೊಳ್ಳೇಪುರ, ಬ್ರಹ್ಮೇಶ್ವರ ದೇಗುಲ ಕೆರೆ ದಂಡೆಯಲ್ಲಿ ಅಕ್ರಮವಾಗಿ ಪಂಪ್‌ ಮೂಲಕ ನೀರಿನ ಬಳಕೆ ಎಗ್ಗಿಲ್ಲದೆ ಸಾಗುತ್ತಿದೆ. ಪ್ರಭಾವಿ ವ್ಯಕ್ತಿಗಳ ಕೃತ್ಯಕ್ಕೆ ಅಧಿಕಾರಿಗಳು ಮೌನವಾಗಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಕಳೆದ ಎರಡು ವರ್ಷದಿಂದ ನಾಮಕಾವಸ್ಥೆಗೆ ಅಧಿಕಾರಿಗಳು ಅಕ್ರಮ ಮೋಟಾರ್‌ ಅಳವಡಿಸಿ ಕೊಂಡಿರುವ ರೈತರ ಪಂಪುಸೆಟ್‌ ವಶಪಡಿಸಿಕೊ ಳ್ಳುವುದು, ನಂತರ ಒಂದೆರಡು ದಿನಗಳ ನಂತರ ಎಂದಿನಂತೆ ನಡೆಯುವುದು ಯಥಾಸ್ಥಿತಿಯಂ ತಾಗಿದೆ ಎಂಬ ದೂರುಗಳು ಕೇಳಿಬರುತ್ತಿದೆ.

ಕೆರೆಯಲ್ಲಿ ಜಾನುವಾರುಗಳಿಗೂ ಕುಡಿಯಲು ನೀರು ಬಿಡದೆ ಅಕ್ರಮವಾಗಿ ಅಳವಡಿಸಿಕೊಂಡಿರುವ ಮೋಟಾರ್‌ಗಳನ್ನು ಕೂಡಲೇ ಅಧಿಕಾರಿಗಳು ವಶಪಡಿಸಿಕೊಂಡು, ಕ್ರಮ ಕೈಗೊಳ್ಳಬೇಕಿದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆರೆಯ ನೀರು ಬಳಸಿಕೊಳ್ಳುತ್ತಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಯಂತ್ರಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು. – ಗುರುಪ್ರಸಾದ್‌, ಎಇಇ, ಕಾವೇರಿ ನೀರಾವರಿ ನಿಗಮ

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.