ಮಂಡ್ಯ : ಕುಡಿದ ಮತ್ತಿನಲ್ಲಿ ಮಾವನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಳಿಯ
Team Udayavani, Dec 11, 2020, 7:35 PM IST
Representative Image
ಮಂಡ್ಯ : ಕುಡಿದ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ
ಮಂಡ್ಯ: ಕುಡಿದ ಅಮಲಿನಲ್ಲಿದ್ದ ಅಳಿಯನೊಬ್ಬ ತನ್ನ ಮಾವನನ್ನು ನಡುಬೀದಿಯಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಗ್ರಾಮದ ಲಾರಿ ಚಾಲಕ ಸುರೇಶ್(50) ಮೃತ ವ್ಯಕ್ತಿ. ಈತನ ಅಳಿಯ ಟಿಪ್ಪರ್ ಚಾಲಕ ರಘು ಅಲಿಯಾಸ್ ಜಿಮ್ಮಿ ಕೊಲೆ ಮಾಡಿದ ವ್ಯಕ್ತಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ವಿವರ:
ಮೂಲತಃ ಅರಕಲಗೂಡು ತಾಲ್ಲೂಕಿನವರಾದ ಮೃತ ಸುರೇಶ್ 20 ವರ್ಷದ ಹಿಂದೆ ಚಿನಕುರಳಿ ಗ್ರಾಮಕ್ಕೆ ಬಂದು ಡ್ರೈವರ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನು. 7 ವರ್ಷದ ಹಿಂದೆ ತಮ್ಮ ಮಗಳನ್ನು ಟಿಪ್ಪರ್ ಚಾಲಕ ಚಿನಕುರಳಿ ಗ್ರಾಮದ ರಘು ಅಲಿಯಾಸ್ ಜಿಮ್ಮಿ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು.
ತೀವ್ರ ಕುಡಿತದ ಚಟ ಹೊಂದಿದ್ದ ರಘು ಜತೆ ಸಂಸಾರ ಮಾಡಲು ಕಷ್ಟ ಎಂದು ಆತನ ಹೆಂಡತಿ ಕೆಲ ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳೊಂದಿಗೆ ತವರಿಗೆ ಬಂದಿದ್ದಳು. ಹೆಂಡತಿಯನ್ನು ವಾಪಸ್ ಕಳುಹಿಸಿ ಎಂದು ರಘು, ಮಾವ ಸುರೇಶ್ನನ್ನು ಹಲವಾರು ಬಾರಿ ಕೇಳಿಕೊಂಡಿದ್ದಾನೆ. ಸುರೇಶ್ ಮಗಳನ್ನು ಕಳುಹಿಸಿರಲಿಲ್ಲ. ಇದರಿಂದ ಬೇಸತ್ತ ರಘು, ಗುರುವಾರ ರಾತ್ರಿ ಚಿನಕುರಳಿ ಗ್ರಾಮದ ಟೀ ಅಂಗಡಿಯಲ್ಲಿ ಸುರೇಶ್ ಟೀ ಕುಡಿಯುತ್ತಿದ್ದ ವೇಳೆ ಕೊಡಲಿಯಿಂದ ಮಾವನ ತಲೆ ಮತ್ತು ಹೊಟ್ಟೆಗೆ ಹೊಡೆದಿದ್ದಾನೆ. ಈ ವೇಳೆ ಸುರೇಶ್ಗೆ ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಪಾoಡವಪುರ ಪೊಲೀಸರು ರಘು ಅಲಿಯಾಸ್ ಜಿಮ್ಮಿ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ