ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಆರೋಪ


Team Udayavani, Feb 10, 2022, 5:21 PM IST

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಆರೋಪ

ಪಾಂಡವಪುರ: ಪಟ್ಟಣದ ಚಂದ್ರೆ ಬಡಾವಣೆಯಲ್ಲಿ ಗೃಹಿಣಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ದೊರಕಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಮ್ಮ ಮಗಳನ್ನು ಆಕೆ ಗಂಡ, ಮಾವ, ಅತ್ತೆ ಹಾಗೂ ಮೈದುನ ಸೇರಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಿ ಮೃತ ಯುವತಿ ತಾಯಿ ಶೈಲಜಾಪಾಂಡವಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಟ್ಟಣದ ಚಂದ್ರೆ ಬಡಾವಣೆ ನಿವಾಸಿ ಕಾರ್ತಿಕ್‌ ಅವರ ಪತ್ನಿ ರಕ್ಷಿತಾ (21) ಎಂಬಾಕೆಯೇ ಕೊಲೆಯಾಗಿರುವ ಗೃಹಿಣಿ. ಪತಿ ಕಾರ್ತಿಕ್‌, ಮಾವ ಶಂಭುಗೌಡ, ಅತ್ತೆ ಜಲಜಾ ಹಾಗೂ ಮೈದುನ ಅಭಿ ಅಲಿಯಾಸ್‌ ಅಭಿಷೇಕ್‌ ಕೊಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಶೈಲಜಾ ಕೋಂ ಲೇಟ್‌ ಲೋಕೇಶ್‌ ಪುತ್ರಿ ರಕ್ಷತಾಳನ್ನು 2019ರಲ್ಲಿ ಹರಳಹಳ್ಳಿಯ ಶಂಭೂಗೌಡರ ಪುತ್ರ ಕಾರ್ತಿಕ್‌ ಪ್ರೀತಿಸಿ ವಿವಾಹವಾಗಿದ್ದ ಎಂದು ಹೇಳಲಾಗಿದೆ.

ರಕ್ಷಿತಾ ಹಾಗೂ ಕಾರ್ತಿಕ್‌ ಅವರಿಗೆ ಮೌನಿತಾ ಎಂಬ ಎರಡು ವರ್ಷದ ಮಗಳಿದ್ದಾಳೆ. ರಕ್ಷಿತಾಳನ್ನು ಮದುವೆಯಾದ 6 ತಿಂಗಳ ಬಳಿಕ ಪತಿ ಕಾರ್ತಿಕ್‌ ಜಾತಿನಿಂದನೆ ಮಾಡಿ ಬೈಯ್ಯುತ್ತಿದ್ದನೆಂದು ಆಕೆ ನನಗೆ ತಿಳಿಸಿದ್ದಳು. ಈ ಸಂಬಂಧ ರಕ್ಷಿತಾಳಿಗೆ ಸಮಾಧಾನ ಹೇಳಲಾಗಿತ್ತು. ಇದಾದ ಬಳಿಕ ಮಂಗಳವಾರ ಮಧ್ಯರಾತ್ರಿ (ಫೆ.8ರಂದು) ಸುಮಾರು ಪತಿ ಕಾರ್ತಿಕ್‌, ಮಾವ ಶಂಭುಗೌಡ, ಅತ್ತೆ ಜಲಜಾ ಹಾಗೂ ಮೈದುನ ಅಭಿ ಅಲಿಯಾಸ್‌ ಅಭಿಷೇಕ್‌, ನನ್ನ ಮಗಳಿಗೆ ಹೊಡೆದು ಕೊಲೆ ಮಾಡಿ ನೇಣು ಹಾಕಿದ್ದಾರೆ.

ತಾಯಿ ಶೈಲಜಾ ದೂರು: ದೂರವಾಣಿ ಮೂಲಕ ಅಕ್ಕಪಕ್ಕದವರು ವಿಚಾರ ತಿಳಿಸಿದ್ದರಿಂದ ಚಂದ್ರೆ ಬಡಾವಣೆ ಮನೆ ಹತ್ತಿರ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಇರುತ್ತಾಳೆ. ಮನೆಯಲ್ಲಿ ಗಲಾಟೆಯಾಗಿ ರಕ್ತದ ಕಲೆಗಳಿದ್ದು, ಮಗಳಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸಿಸಿ ಜಾತಿನಿಂದನೆ ಮಾಡಿ ಹೊಡೆದು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ರಕ್ಷಿತಾಳ ತಾಯಿ ಶೈಲಜಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಅಳಿಯ ಕಾರ್ತಿಕ್‌, ಶಂಭುಗೌಡ, ಜಲಜಾ, ಅಭಿ ಅಲಿಯಾಸ್‌ ಅಭಿಷೇಕ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಪಾಂಡವಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪಟ್ಟಣದ ಉಪವಿಭಾಗಿಯ ಆಸ್ಪತ್ರೆ ಶವಾಗಾರದಲ್ಲಿ ಗೃಹಿಣಿ ರಕ್ಷಿತಾಳ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.