ಅಪಹರಣಕ್ಕೆ ಬಂದರೆಂದು ಹಲ್ಲೆ


Team Udayavani, Sep 21, 2022, 2:18 PM IST

ಅಪಹರಣಕ್ಕೆ ಬಂದರೆಂದು ಹಲ್ಲೆ

ಶ್ರೀರಂಗಪಟ್ಟಣ: ಅಪ್ರಾಪ್ತರನ್ನು ಅಪಹರಿಸಿ ಅಂಗಾಂಗಗಳನ್ನು ಕಿತ್ತುಕೊಳ್ಳುವ ಬೆಚ್ಚಿ ಬೀಳಿಸುವ ದೃಶ್ಯಾ ವಳಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಬಾಲಕ ನೋ ರ್ವನನ್ನು ಅಪಹರಿಸಲಾಗುತ್ತಿದೆ ಎಂದು ಆರೋಪಿಸಿ ಮೂವರು ಅಪ್ರಾಪ್ತ ಬಾಲಕರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಕಿರಂ ಗೂರು ಗ್ರಾಮದ ಬಳಿ ಸೋಮವಾರ ತಡ ರಾತ್ರಿ ನಡೆದಿದೆ.

ಘಟನೆ ಏನು?: ಕಿರಂಗೂರು ಗ್ರಾಮದ ಮನೆ ಯೊಂ ದರ ಮುಂದೆ ಮಗು ಸೋಮವಾರ ತಡ ರಾತ್ರಿ ಆಟವಾಡುತ್ತಿತ್ತು. ಈ ವೇಳೆ ಚಾಕ್ಲೆಟ್‌ ನೀಡುವ ನೆಪದಲ್ಲಿ ಬಾಲಕನನ್ನು ಕರೆದು ಮೂವರು ಅಪ್ರಾಪ್ತ ಬಾಲಕರು ಅಪಹರಿಸಲು ಯತ್ನಿಸಿದರು ಎನ್ನಲಾಗಿದೆ. ಈ ವೇಳೆ ಪೋಷಕರು ಹಾಗೂ ಸ್ಥಳೀಯರು ಗಮನಿಸಿ ಬೆನ್ನಟ್ಟಿ ಮೂರು ಮಂದಿ ಬಾಲಕರನ್ನು ಹಿಡಿದು ವಿಚಾರಿಸಿದಾಗ, ಮಾತು ಬದಲಾಯಿಸಿ ದರು. ಈ ಹಿನ್ನೆಲೆಯಲ್ಲಿ ಬಾಲಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ, ಮಂಡ್ಯ ಬೆಸಗರಳ್ಳಿ ಹಾಗೂ ನಾಗಮಂಗಲ ಬಳಿಯ ಸ್ಲಂ ಪ್ರದೇಶದಲ್ಲಿನ ಚಿಂದಿ ಹಾಯುವ ನಿವಾಸಿಗಳೆಂದು ಬಾಲಕರು ಮಾಹಿತಿ ನೀಡಿದ್ದಾರೆ.

ಬಾಲಮಂದಿರಕ್ಕೆ: ಸ್ಥಳೀಯರ ದೂರವಾಣಿ ಕರೆ ಯಿಂದ ಸ್ಥಳಕ್ಕೆ ಶಿಶು ಅಭಿವೃದ್ಧಿ ಅಧಿಕಾರಿಗಳು ಅಪ ಹರಣ ಯತ್ನಕ್ಕೆ ಒಳಗಾಗಿದ್ದ ಮಕ್ಕಳ ಪೋಷಕರೊಂ ದಿಗೆ ಚರ್ಚೆ ನಡೆಸಿದರು. ಅಲ್ಲದೇ, ಅಪಹರಣ ಮಾಡಲು ಯತ್ನ ಮಾಡಿದ ಮೂರು ಅಪ್ರಾಪ್ತ ಬಾಲಕರ ಬಗ್ಗೆ ತನಿಖೆ ಕೈಗೊಳ್ಳಲು ಶಿಶು ಅಭಿವೃದ್ಧಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮುನ್ನವೇ ಪೊಲೀಸರು ಮೂವರು ಬಾಲಕರನ್ನು ತಡ ರಾತ್ರಿಯೇ ಮಂಡ್ಯದ ಬಾಲ ಮಂದಿರದ ವಶಕ್ಕೆ ಒಪ್ಪಿಸಿದ್ದರು. ಮತ್ತೆ ಸಿಪಿಐ ಪ್ರಕಾಶ್‌ ನೇತೃತ್ವದಲ್ಲಿ ಮಂ ಗಳವಾರ ಬೆಳಗ್ಗೆ ಬಾಲ ಮಂದಿರದಿಂದ ಅಪ್ರಾ ಪ್ತ ಬಾಲಕರನ್ನು ಕರೆ ತಂದು ತನಿಖೆ ಕೈಗೊಂಡಿದ್ದಾರೆ.

ಮೂವರೂ ಚಿಂದಿ ಆಯುವರು: ಈ ಮೂವರು ಬಾಲಕರಿಗೆ ಪೋಷಕರಿಲ್ಲದೆ ವಿವಿಧೆಡೆ ಚಿಂದಿ ಹಾಯುವ ಕೆಲಸ ಮಾಡಿಕೊಂಡಿದ್ದರು. ಸೆಲ್ಯೂಷನ್‌ ಮೂಸುವ ಖಯಾಲಿ ಇದ್ದು ರಾತ್ರಿ ಸಮಯದಲ್ಲಿ ಊಟ ಕೇಳಲು ಹೋಗಿರುವುದಾಗಿ ಬಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ, ಮನೆ ಬಳಿ ಮಕ್ಕಳು ಆಟವಾಡುವ ವೇಳೆ ಅವರಿಗೆ ಚಾಕ್ಲೆಟ್‌ ನೀಡಿ ಅವರನ್ನು ಕರೆದು ಮಾತನಾಡಿಸಿರುವುದು ಬಹಿರಂಗ ಗೊಂಡಿದೆ. ಹೆದರಿದ ಮಕ್ಕಳು ಪೋಷ ಕರನ್ನು ಕೂಗಿ ಕೊಂಡಿದ್ದು ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿದ್ದಾರೆ. ಇದರಿಂದ ನಿಶೆಯಲ್ಲಿದ್ದ ಮೂವರು ಬಾಲಕರನ್ನು ಹಿಡಿದು ತನಿಖೆಗೆ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ: ಕಿರಂಗೂರಿನ ಹನುಮಂತಪ್ಪ ಎಂಬವರ ಮಕ್ಕಳನ್ನು ಅಪಹರಣ ಮಾಡಲು ಮೂವರು ಅಪ್ರಾಪ್ತ ಬಾಲಕರು ಬಂದಿರುವ ಬಗ್ಗೆ ಮಾಹಿತಿ ಪಡೆದು ಅವರ ಮನೆಯ ಮಕ್ಕಳನ್ನು ವಿಚಾರಿಸ ಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ಕೈಗೊಂಡಿದ್ದಾರೆ. ಮಂಡ್ಯ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳೂ ತನಿಖೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ. ಬಳಿಕ, ಇನ್ನಷ್ಟು ಮಾಹಿತಿ ತಿಳಿದು ಬರಲಿದೆ ಎಂದು ಶಿಶು  ಅಭಿವೃದ್ಧಿ ಅಧಿಕಾರಿ ಪಿ.ಅಶೋಕ್‌ ತಿಳಿಸಿದ್ದಾರೆ.

ಹಲವು ದಿನಗಳಿಂದ ಮಕ್ಕಳ ಕಳ್ಳರ ಬಗ್ಗೆ ವದಂತಿ ಹರಡಿತ್ತು. ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು. ಚಿಂದಿ ಆಯಲು ಬರುವ ಅಪ್ರಾಪ್ತರ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ. ಈ ಕೂಡಲೇ ಅಗತ್ಯ ಶಿಕ್ಷಣ ನೀಡಿ ಸೌಲಭ್ಯ ಕಲ್ಪಿಸಬೇಕು. ಶಂಕರ್‌ಬಾಬು, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.