ಉರುಮಾರಮ್ಮ ದೇಗುಲ ಹುಂಡಿ ಹಣ ಕಳವು
Team Udayavani, May 8, 2022, 3:59 PM IST
ಮಂಡ್ಯ: ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮದ ಊರಮಾರಮ್ಮ ದೇಗುಲ ಹುಂಡಿ ಹಣ ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಎರಡು ವರ್ಷಗಳ ಹಿಂದೆ ಜೀರ್ಣೋದ್ಧಾರಗೊಂಡಿದ್ದ ಪುರಾತನ ದೇವಾಲಯ ಗ್ರಾಮದ ಹೊರವಲಯದಲ್ಲಿತ್ತು. 100 ವರ್ಷ ನಂತರ ಕಳೆದ ಏಪ್ರಿಲ್ನಲ್ಲಿ ಕೊಂಡ – ಬಂಡಿ ಉತ್ಸವ ಸೇರಿ ಹಲವು ಧಾರ್ಮಿಕ ಕಾರ್ಯಗಳು ನೆರವೇರಿದ್ದವು. ಕಳೆದ ತಿಂಗಳು ಜರುಗಿದ ಧಾರ್ಮಿಕ ಕಾರ್ಯದಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸಿ, ಲಕ್ಷಾಂತರ ರೂ. ನಗದು, ಆಭರಣ ಕಾಣಿಕೆಯಾಗಿ ಅರ್ಪಿಸಿದ್ದರು. ಇನ್ನೂ ಹುಂಡಿ ಹಣ ಎಣಿಕೆ ಮಾಡಿರಲಿಲ್ಲ.
ಇದನ್ನು ಮನಗಂಡಿರುವ ದುಷ್ಕರ್ಮಿಗಳು, ಶುಕ್ರವಾರ ರಾತ್ರಿ ದೇವಾಲಯದ ಕಬ್ಬಿಣದ ಗ್ರಿಲ್ ಮುರಿದು ಎರಡು ಹುಂಡಿ ಒಡೆದು ಅದರಲ್ಲಿದ್ದ ಹಣ, ಆಭರಣ ದೋಚಿ ಪರಾರಿ ಆಗಿದ್ದಾರೆ.
ಈ ಸಂಬಂಧ ಗ್ರಾಮಸ್ಥರ ದೂರಿನ ಮೇರೆಗೆ ಗ್ರಾಮಾಂತರ ಠಾಣೆ ಸಿಪಿಐ ಸಿದ್ದಪ್ಪ, ಪಿಎಸ್ಐಗಳಾದ ರವಿಕುಮಾರ್, ಸುನೀತಾ, ಪೇದೆಗಳಾದ ರಾಜೇಂದ್ರ, ಚಿಕ್ಕಯ್ಯ ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…