ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ


Team Udayavani, Nov 11, 2020, 4:55 PM IST

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಮಂಡ್ಯ: ಗೋದಾಮುಗಳಲ್ಲಿ ಕೊಳೆಯುತ್ತಿರುವ  ಆಹಾರ ಧಾನ್ಯಗಳ ರಕ್ಷಣೆಗೆ ಸೂಕ್ತ ಕ್ರಮ, ಬಿಸಿಯೂಟ ಫ‌ಲಾನುಭವಿಗಳಿಗೆ ಸಮರ್ಪಕ ಧಾನ್ಯ ವಿತರಣೆ ಹಾಗೂ ಅಗತ್ಯ ವಸ್ತುಗಳಬೆಲೆ ಏರಿಕೆ ಖಂಡಿಸಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅಗತ್ಯವಸ್ತುಗಳಾದ ಈರುಳ್ಳಿ, ಬೆಳ್ಳುಳ್ಳಿ, ಟೊಮೆಟೋ, ಗ್ಯಾಸ್‌ ಸಿಲಿಂಡರ್‌ ಸೇರಿ ವಿವಿಧ ವಸ್ತುಗಳನ್ನಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೇ,ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆ ಆಗಿರುವುದರಿಂದ ಹಿಂದೆ ಸೌದೆ ಒಲೆಯಲ್ಲಿ ಆಹಾರ ತಯಾರಿಸುವ ಸ್ಥಿತಿಗೆ ಕೇಂದ್ರ ಸರ್ಕಾರ ಬಡವರ ಮೇಲೆ ಪ್ರಹಾರ ನಡೆಸಲು ಮುಂದಾಗಿದೆ ಎಂದು ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಕ್ರಮ ಕೈಗೊಳ್ಳಿ: ಕೋವಿಡ್ ದಿಂದ ಲಾಕ್‌ಡೌನ್‌ಸಂದರ್ಭದಲ್ಲಿ ಸಾಕಷ್ಟು ಮಂದಿ ಉದ್ಯೋಗಕಳೆದು ಕೊಂಡರು. ಆರ್ಥಿಕವಾಗಿ ಸಂಕಷ್ಟ ಎದುರಾಯಿತು. ಅಲ್ಲದೆ, ಶಾಲಾ, ಅಂಗನವಾಡಿ ಕೇಂದ್ರಗಳನ್ನು ತೆರೆಯದ ಪರಿಣಾಮ ಮಕ್ಕಳು ಬಿಸಿಯೂಟದಿಂದ ವಂಚಿತವಾದವು. ಇದು ಸರ್ಕಾರಕ್ಕೆ ಗೊತ್ತಿದ್ದರೂ ಆಹಾರ ಧಾನ್ಯಗಳನ್ನು ಮನೆ ಪೂರೈಸದೆ ನಿಲ್ಲಿಸಿದೆ. ಇದರಿಂದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಗೋದಾಮುಗಳಲ್ಲಿ ಅಪಾರ ಪ್ರಮಾಣದ ಆಹಾರ ಧಾನ್ಯ ಕೊಳೆತುನಾರುತ್ತಿದೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾನವೀಯತೆ ಇಲ್ಲ:  43258 ಟನ್‌ ಅಕ್ಕಿ, 1716ಟನ್‌ ಗೋಧಿ, 12,046 ಟನ್‌ ತೊಗರಿಬೇಳೆ, ಖಾದ್ಯ ತೈಲ ಮನುಷ್ಯರ ಬಳಕೆಗೆ ಯೋಗ್ಯವಲ್ಲದ ಸ್ಥಿತಿ ತಲುಪಿವೆ. ಇದು ಮಾನವ ನಿರ್ಮಿತ ದುರಂತ. ಗೋದಾಮುಗಳಲ್ಲಿ ಆಹಾರಧಾನ್ಯ ಸಂಗ್ರಹ ವಿದ್ದೂ ವಿತರಿಸದಂತೆ ತಡೆ ಹಿಡಿದ ಆರ್ಥಿಕ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಉಪಯೋಗಕ್ಕೆ ಬಳಸಬಹುದಾದ ಧಾನ್ಯಗಳನ್ನು ಅಗತ್ಯವಿರುವವರಿಗೆ ಹೆಚ್ಚುವರಿ ವಿತರಿಸಬೇಕು ಎಂದು ಒತ್ತಾಯಿಸಿದರು.

ಸುಗ್ರಿವಾಜ್ಞೆ ಹಿಂಪಡೆಯಿರಿ: ತಕ್ಷಣವೇ ಕೇರಳ ಮಾದರಿಯಲ್ಲಿ ಮಧ್ಯಾಹ್ನದ ಬಿಸಿಯೂಟದ ಎಲ್ಲಾ ಫ‌ಲಾನುಭವಿಗಳಿಗೂ ತಾರತಮ್ಯವಿಲ್ಲದೆ ಹಂಚ ಬೇಕು. ಘೋಷಣೆಗೆ ಮತ್ತು ಪ್ರಚಾರಕ್ಕೆ ಕೆಲವೆಡೆ ಹಂಚಿಬಿಟ್ಟ ಹಿಂದಿನ ಅನುಭವ ಮರುಕಳಿಸದಂತೆ ಎಚ್ಚರ ವಹಿಸಬೇಕು. ವಿದ್ಯುತ್‌ದರ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ಕೃಷಿ ಸುಗ್ರಿವಾಜ್ಞೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅಖೀಲ ಭಾರತ ಜನವಾದಿ ಸಂಘಟನೆರಾಜ್ಯಾಧ್ಯಕ್ಷೆ ದೇವಿ, ಜಿಲ್ಲಾಧ್ಯಕ್ಷೆ ಶೋಭಾ, ಮಂಜುಳಾ, ಸುಶೀಲಾ, ಡಿ.ಕೆ.ಲತಾ, ಪ್ರೇಮಾ, ಜಯಶೀಲಾ, ಸುಮಿತ್ರಾ ಮತ್ತಿತರರಿದ್ದರು.

ಶಾಲೆ, ಅಂಗನವಾಡಿ ಕೇಂದ್ರಗಳನ್ನು ಬಂದ್‌ ಮಾಡಿದ್ದರಿಂದ ಮಕ್ಕಳು ಬಿಸಿಯೂಟದಿಂದ ವಂಚಿತರಾಗಿವೆ. ಇತ್ತ ಆಹಾರ ಧಾನ್ಯ ಗೋದಾಮುಗಳಲ್ಲಿ ಹುಳು ಹಿಡಿಯುತ್ತಿವೆ.ಕೂಡಲೇ ಸರ್ಕಾರ ಎಚ್ಚೆತ್ತು ಬಿಸಿಯೂಟಯೋಜನೆ ಫ‌ಲಾನುಭವಿಗಳಿಗೆ ಆಹಾರವಿತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು. ದೇವಿ, ರಾಜ್ಯಾಧ್ಯಕ್ಷೆ, ಅಖೀಲ ಭಾರತ ಜನವಾದಿ ಸಂಘಟನೆ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.