ಗೌರವಧನ ಹೆಚ್ಚಳಕ್ಕಾಗಿ ಒತ್ತಾಯ
Team Udayavani, Jul 2, 2020, 5:09 AM IST
ಮಂಡ್ಯ: ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ಗೌರವಧನ ನಿಗದಿಪಡಿಸಿ, ಅಗತ್ಯವಿರುವಷ್ಟು ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ಕಲ್ಪಿಸಲು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಪ್ರತಿಭಟನೆ ನಡೆಸಿದರು. ಡೀಸಿ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು ಧರಣಿ ನಡೆಸಿ, ಸರ್ಕಾರಕ್ಕೆ ಜಿಲ್ಲಾಡ ಳಿತದ ಮೂಲಕ ಮನವಿ ಸಲ್ಲಿಸಿದರು.
ಪ್ರತಿ ಆಶಾ ಕಾರ್ಯಕರ್ತೆಗೆ 8ರಿಂದ 9 ಸಾವಿರ ರೂ.ಗೌರವ ಧನ ನೀಡಲಾಗುತ್ತಿದೆ. ಪ್ರೋತ್ಸಾಹಧನದ ವಿವಿಧ ಕೆಲಸಗಳ ಹಣವನ್ನು ಮತ್ತು ಗೌರವಧನದ ಹಣವನ್ನು ಬಿಡಿ ಬಿಡಿಯಾಗಿ ಪೋರ್ಟಲ್ನಲ್ಲಿ ದಾಖಲು ಮಾಡಬೇಕಿರುವುದರಿಂದ ಈ ಹಣ ಸರಿ ಯಾಗಿ ಕಾರ್ಯಕರ್ತೆಯರಿಗೆ ತಲುಪುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಇಲಾಖೆ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ.
ಪ್ರೋತ್ಸಾಹಧನ ಮತ್ತು ಗೌರವಧನ ಎರಡ ನ್ನೂ ಒಟ್ಟಿಗೆ ಸೇರಿಸಿ ಒಂದೇ ನಿಶ್ಚಿತ ಗೌರವಧನವಾಗಿ 12 ಸಾವಿರ ರೂ. ನೀಡುವಂತೆ ಒತ್ತಾಯಿಸಿದರು. ಆಶಾ ಕಾರ್ಯಕರ್ತೆಯರು ತಮ್ಮ ಜೀವನವನ್ನು ಅಪಾಯಕ್ಕೆ ಒಡ್ಡಿಕೊಂಡು ಸೋಂಕು ನಿಯಂತ್ರಣ ಕೆಲಸ ದಲ್ಲಿ ಸೋಂಕಿತ ಜನರ ನಡುವೆ ಅವಿರತವಾಗಿ ಹೋರಾಡುತ್ತಿದ್ದಾರೆ. ಈ ಸಮಯದಲ್ಲಿ ಕಾರ್ಯಕರ್ತೆಯರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಾರ್ಯಕರ್ತೆಯರಿಗೆ ಬೇಕಾದಷ್ಟು ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಸೇರಿದಂತೆ ಇನ್ನಿತರ ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ನೀಡಲಾಗಿಲ್ಲ. ಆಶಾ ಕಾರ್ಯಕರ್ತೆಯರ ಆರೋಗ್ಯ ರಕ್ಷಿಸುವ ಎಲ್ಲಾ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡುವಂತೆ ಆಗ್ರಹಿಸಿದರು. ಸಂಘದ ಶೋಭಾ, ನಾಗರತ್ನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು