![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವಲಸಿಗರನ್ನು ಗಡಿಯಲ್ಲೇ ತಪಾಸಣೆ ಮಾಡಿ
Team Udayavani, May 23, 2020, 4:29 AM IST
![gad tap](https://www.udayavani.com/wp-content/uploads/2020/05/gad-tap-620x330.jpg)
ಮಂಡ್ಯ: ಮುಂಬೈ ವಲಸಿಗರಿಂದ ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಅಲ್ಲೇ ಕೊರೊನಾ ತಪಾಸಣೆಗೊಳಪಡಿಸಿ ಸೋಂಕು ಇಲ್ಲದವರಿಗೆ ಮಾತ್ರ ಪ್ರವೇಶ ನೀಡುವುದು ಉತ್ತಮ ಎಂದು ಶಾಸಕ ಶ್ರೀನಿವಾಸ್ ಹೇಳಿದರು.
ನಗರದಲ್ಲಿರುವ ಪೂಜಾ ಶಾಮಿಯಾನ ಕಚೇರಿಯಲ್ಲಿ ಶಾಮಿಯಾನ-ದೀಪಾಲಂಕಾರ ಮತ್ತು ಧ್ವನಿವರ್ಧಕ ಮಾಲೀಕರ ಕ್ಷೇಮಾಭಿವೃದಿ ಸಂಘ ಮತ್ತು ಹನಕೆರೆ ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಧ್ವನಿವರ್ಧಕ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು. ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಇಂತಹ ನಿರ್ಣಯವನ್ನು ಸರ್ಕಾರದ ಮುಂದಿಡಲಾಗಿದೆ.
ವಲಸಿಗರನ್ನು ಗಡಿಯಲ್ಲೇ ಕೋವಿಡ್ ತಪಾಸಣೆ ನಡೆಸಿ ಆನಂತರ ಸ್ವಂತ ಊರುಗಳಿಗೆ ಕಳಿಸುವುದು ಅಥವಾ ಕ್ವಾರಂಟೈನ್ನಲ್ಲಿ ಇರಿಸಿ ಸೂಕ್ತ ಚಿಕಿತ್ಸೆ ನೀಡುವುದು ಉತ್ತಮ ಎಂದು ತಿಳಿಸಿದರು. ಶಾಮಿಯಾನ ಮಾಲೀಕರ ಸಂಘದ ಮುಖ್ಯಸ್ಥ ರಮೇಶ್ ಮಾತನಾಡಿ, ಶಾಮಿಯಾನದ ಅಂಗಡಿಗಳ ಕಾರ್ಮಿಕರು ಮತ್ತು ಮಾಲೀಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರದೊಂದಿಗೆ ಮಾತನಾಡಿದರು.
ಕೋವಿಡ್ ಹಿನ್ನೆಲೆಯಲ್ಲಿ 2 ವರ್ಷ ಯಾವುದೇ ಸಭೆ ಸಮಾರಂಭ ನಡೆಯುವುದಿಲ್ಲ. ಧಾರ್ಮಿಕ ಕಾರ್ಯಗಳೂ ನಡೆಯುವುದಿಲ್ಲ. ಕೂಡಲೇ 50 ಸಾವಿರ ಪರಿಹಾರ ಕೊಡಿಸುವುದು, ತೆರಿಗೆ ಪಾವತಿಸುವುದರಿಂದ ವಿನಾಯಿತಿ ನೀಡುವುದು, ಸರ್ಕಾರದಿಂದ ಬಾಕಿ ಬರಬೇಕಿರುವ ಬಿಲ್ಗಳನ್ನು ಶೀಘ್ರ ಬಿಡುಗಡೆ ಮಾಡಿಸುವುದು, ಬಾಡಿಗೆ, ತೆರಿಗೆ, ವಿದ್ಯುತ್ ಬಿಲ್ ಇತರೆ ವೆಚ್ಚಗಳಿಗೆ ರಿಯಾಯಿತಿ ನೀಡುವಂಗೆ ಮನವಿ ಮಾಡಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.