ಸಿಬ್ಬಂದಿ,ಕಾರ್ಮಿಕರಿಗೆ ಲಸಿಕೆ ಕೊಡಿಸಲು ಸೂಚನೆ
ಹಿತರಕ್ಷಣೆ ನಿಮ್ಮ ಜವಾಬ್ದಾರಿ ; ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಜಿಲ್ಲಾಧಿಕಾರಿ ಅಶ್ವಥಿ ಸೂಚನೆ
Team Udayavani, Aug 17, 2021, 4:38 PM IST
ಮಂಡ್ಯ: ಜಿಲ್ಲೆಯಲ್ಲಿನ ಕೈಗಾರಿಕೋದ್ಯಮಿಗಳು ಮತ್ತು ಇತರೆ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಶೀಘ್ರದಲ್ಲಿಯೇ ಕೋವಿಡ್ ಮೊದಲನೇ ಮತ್ತು ಎರಡನೇ ಡೋಸ್ ಕೊಡಿಸುವುದರ ಜೊತೆಗೆ ಕೋವಿಡ್ ಮೂರನೇ ಅಲೆ ತಡೆಗಟ್ಟುವಲ್ಲಿ ಸರ್ಕಾರದ ಜತೆ ಕೈಜೋಡಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದಜಿಲ್ಲೆಯಲ್ಲಿ ಸಕ್ರಿಯವಾಗಿರುವ ಕೈಗಾರಿಕೆಗಳು, ಸಂಘಟನೆಗಳು, ಸಂಘ-ಸಂಸ್ಥೆಗಳು,
ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಇಲಾಖೆಗಳ ಸಹಯೋಗದೊಂದಿಗೆಸಿಎಸ್ಆರ್ ಚಟುವಟಿಕೆಯಲ್ಲಿ ಲಸಿಕಾಕರಣ ನಡೆಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮಿಗಳು ತಮ್ಮ ಸಂಸ್ಥೆಯ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಶೇ.100ರಷ್ಟು ಲಸಿಕೆ ನೀಡಿ ಕೋವಿಡ್ ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದರು.
ಲಸಿಕೆ ನೀಡಲು ಸಹಕರಿಸಿ: ಜಿಲ್ಲೆಯಲ್ಲಿ ಒಟ್ಟು18 ಲಕ್ಷ ಜನಸಂಖ್ಯೆ ಇದ್ದು, ಈಗಾಗಲೇ 9.70 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಕೋವಿಡ್ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಶೇ.70ರಷ್ಟು ಲಸಿಕಾಕರಣದ ಅಗತ್ಯವಿದೆ. ಆದ್ದರಿಂದ ಕೈಗಾರಿಕೋದ್ಯಮಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ಕಾರ್ಮಿಕರಿಗೆ ಲಸಿಕೆ ನೀಡುವಲ್ಲಿ ಸಹಕರಿಸಬೇಕು ಎಂದರು.
ಇದನ್ನೂ ಓದಿ:ನನ್ನ ಮಕ್ಕಳಿಗೆ ಬೇಡವೇ ಬೇಡ ಬಣ್ಣದ ಲೋಕದ ಬದುಕು : ನಟಿ ಕರೀನಾ ಕಪೂರ್
ಕಾರ್ಮಿಕರ ಹಿತರಕ್ಷಣೆ ಮರೆಯದಿರಿ: ಜಿಲ್ಲೆಯಲ್ಲಿನ ಉದ್ಯಮಿಗಳು ಕೋವಿಡ್ ಸಂದರ್ಭದಲ್ಲಿ ಮಾಸ್ಕ್ ಗಳು, ಆಹಾರ ಕಿಟ್ಗಳು ನೀಡಬೇಕು. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ಕೈಗಾರಿಕೆಗಳು ಉದ್ಯಮ ಸ್ಥಗಿತವಾಗಬಾರದು ಎಂಬ ಉದ್ದೇಶದಿಂದ ಕೈಗಾರಿಕೆಗಳ ಕಾರ್ಯಕ್ಕೆ ಅನುಮತಿ ನೀಡಲಾಗಿದೆ. ಆದ್ದರಿಂದ ನೀವು ನಿಮ್ಮ ಕಾರ್ಮಿಕರ ಹಿತರಕ್ಷಣೆಯನ್ನು ಅರಿತು ಕೂಡಲೇ ಲಸಿಕಾಕರಣಕ್ಕೆ ಆದ್ಯತೆ ನೀಡಿ ಎಂದರು.
ಜಿಲ್ಲೆಯಲ್ಲಿನ ಮಹಿಳಾ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿಒಕ್ಕೂಟಗಳುಹಾಗೂಅವರಕುಟುಂಬದವರಿಗೆ ಕೋವಿಡ್ ಲಸಿಕೆ ನೀಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿಗೆ ತಿಳಿಸಿದರು.
20ರೊಳಗೆ ಲಸಿಕೆ ನೀಡಿ: ಸರ್ಕಾರದಿಂದ ನಿರಂತರವಾಗಿ ಲಸಿಕೆ ನೀಡಲಾಗುತ್ತಿದೆ. ಜತೆಗೆ ಜಿಲ್ಲೆಯಲ್ಲಿನ ಹಣಕಾಸು ಸಂಸ್ಥೆಗಳು, ಸಂಘ-ಸಂಸ್ಥೆಗಳು, ಕೈಗಾರಿಕೆ ಸಂಸ್ಥೆಗಳು ಮತ್ತು ಇತರೆ ಖಾಸಗಿ ಕಂಪನಿಗಳು ಅ.20ರೊಳಗೆ ತಮ್ಮ ಸಿಬ್ಬಂದಿ ಮತ್ತು ಕಾರ್ಮಿಕರಿಗೆ ಲಸಿಕೆ ನೀಡಿ ಸರಿಯಾದ ಅಂಕಿಅಂಶಗಳನ್ನು ತಿಳಿಸಿ ಎಂದರು.
ಜಿಪಂ ಸಿಇಒ ದಿವ್ಯಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಅಪರ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ,ರೆಡ್ಕ್ರಾಸ್ ಸಂಸ್ಥೆಯ ಮುಖ್ಯಸ್ಥೆ ಮೀರಾ ಶಿವಲಿಂಗಯ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ತುಷಾರಮಣಿ ಸೇರಿದಂತೆ ಕೈಗಾರಿಕೋದ್ಯಮಿಗಳು, ಹಣಕಾಸು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ