ಅಂತರ್ಜಾತಿ ವಿವಾಹ: ಯುವತಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ


Team Udayavani, Jan 26, 2019, 9:29 AM IST

dalit.jpg

ಮಳವಳ್ಳಿ: ಅಂತರ್ಜಾತಿ ವಿವಾಹವಾಗಿದ್ದಳೆಂಬ ಕಾರಣಕ್ಕೆ ಯುವತಿ ಮತ್ತು ಆಕೆಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆಯೊಂದು ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯಶೋಧ ಮತ್ತು ಆಕೆಯ ಕುಟುಂಬವನ್ನು ಗ್ರಾಮಸ್ಥರು ಸಾಮಾಜಿಕವಾಗಿ ಬಹಿಷ್ಕರಿಸಿದ್ದಲ್ಲದೆ, 25 ಸಾವಿರ ರೂ. ದಂಡ ಹಾಕಿದ್ದಾರೆ.

ಘಟನೆಯ ವಿವಿರ: ಗೊಲ್ಲರಹಳ್ಳಿ ಗ್ರಾಮದ ದಲಿತ ಕೋಮಿಗೆ ಸೇರಿದ ಯಶೋಧ ಕಳೆದ ಎರಡು ವರ್ಷಗಳ ಹಿಂದೆ ಸವರ್ಣೀಯ ಸಮುದಾಯ ಯುವಕ ಕರಕಲಕಟ್ಟೆ ವೆಂಕಟರಾಜು ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇದರಿಂದ ಕುಪಿತಗೊಂಡ ಗೊಲ್ಲರಹಳ್ಳಿ ಗ್ರಾಮದ ದಲಿತ ಸಮುದಾಯವೇ ಆಕೆಯನ್ನು ತಮ್ಮ ಜಾತಿಯಿಂದ ಬಹಿಷ್ಕರಿಸಿದ್ದೂ ಅಲ್ಲದೆ, 25 ಸಾವಿರ ರೂ. ದಂಡ ಹಾಕಿದ್ದರು. ಜೊತೆಗೆ ಯಶೋಧಾಳನ್ನು ಮನೆಗೆ ಸೇರಿಸಿದಂತೆ ತಾಕೀತು ಮಾಡಿದ್ದಾರೆ.

ಮಾತನಾಡಿದವರಿಗೂ ಸಾವಿರ ದಂಡ: ಆಕೆ ಗರ್ಭಿಣಿಯಾಗಿ ಮನೆಗೆ ವಾಪಸ್ಸಾದ್ದಳು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಗ್ರಾಮದ ಮುಖಂಡರು ಪಂಚಾಯಿತಿ ಸೇರಿ ಸಭೆ ನಡೆಸಿ, ಇಡೀ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಆ ಕುಟುಂಬದೊಂದಿಗೆ ಯಾರೂ ಮಾತನಾಡಬಾರದು. ಒಂದು ವೇಳೆ ಮಾತನಾಡಿದರೆ ಒಂದು ಸಾವಿರ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ. ಪತ್ನಿ ನೋಡಲು ಮನೆಗೆ ಬರುತ್ತಿದ್ದ ಯಶೋಧ ಪತಿ ಕರಕಲಕಟ್ಟೆ ವೆಂಕಟರಾಜು ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.

ವಕೀಲರಿಗೂ ಬಹಿಷ್ಕಾರ: ಯಶೋಧ ಕುಟುಂಬದೊಂದಿಗೆ ಯಾರಾದರೂ ಮಾತನಾಡಿರುವುದು, ಸಹಾಯ ಮಾಡಿದವರ ಬಗ್ಗೆ ಮಾಹಿತಿ ನೀಡಿದ ಗ್ರಾಮಸ್ಥರಿಗೂ 500 ರೂ. ಬಹುಮಾನವನ್ನೂ ಘೋಷಿಸಿದ್ದಾರೆ. ಗ್ರಾಮದಲ್ಲಿರುವ ದೇವಸ್ಥಾನ ಪ್ರವೇಶವಕ್ಕೂ ಅವಕಾಶ ನೀಡಿರಲಿಲ್ಲ. ಈ ವಿಚಾರ ತಿಳಿದ ಸ್ಥಳೀಯ ವಕೀಲ ಪುಟ್ಟಮಾದು ಅವರು ಕುಟುಂಬಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶ ಕೊಡಿಸಿದರೆಂಬ ಕಾರಣಕ್ಕೆ ಅವರನ್ನೂ ಬಹಿಷ್ಕರಿಸಲಾಗಿದೆ.

ಇದರಿಂದ ಮನನೊಂದ ಯಶೋಧ ಕುಟುಂಬ ಹಲಗೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ಕುರಿತಂತೆ ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಮಾಹಿತಿ ಅರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಯಶೋಧಾ ನಿವಾಸಕ್ಕೆ ಭೇಟಿ ನೀಡಿ ಆಕೆ ಮತ್ತವರ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಿದ್ದಾರೆ. ಬಹಿಷ್ಕಾರಕ್ಕೆ ಸಂಬಂಧಿಸಿದಂತೆ ಯಶೋಧ ತಾಯಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

21ನೇ ಶತಮಾನದಲ್ಲೂ ಇಂತಹ ಸಾಮಾಜಿಕ ಅನಿಷ್ಠ ಪದ್ಧತಿ ಜಾರಿಯಲ್ಲಿರುವುದು, ಅಲ್ಲದೇ ಸ್ವಜಾತಿಯವರೇ ಸಾಮಾಜಿಕ ಬಹಿಷ್ಕಾರದಂತಹ ಆಚರಣೆ ಮಾಡುವುದು ನಾಚಿಕೆಗೇಡಿನ ಸಂಗತಿ.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.