ದೇಗುಲದ ಅವ್ಯವಹಾರ: ಆರೋಪ

ಅಕ್ರಮ ಖಾಸಗಿ ಟ್ರಸ್ಟ್ ನಿಂದ ಅವ್ಯವಹಾರ „ ಲೋಕಾಯುಕ್ತರಿಗೆ ರೈತ ಮುಖಂಡ ಮೋಹನ್‌ಕುಮಾರ್‌ ದೂರು

Team Udayavani, Nov 11, 2021, 2:48 PM IST

ದೇಗುಲದ ಅವ್ಯವಹಾರ- ಆರೋಪ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಸುಮಾರು 500-600 ವರ್ಷಗಳ ಇತಿಹಾಸವಿರುವ ಶ್ರೀರಾಮ ಮಂದಿರ ದೇವಸ್ಥಾನದಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರೈತ ಮುಖಂಡ ಕಿರಂಗೂರು ಮೋಹನ್‌ ಕುಮಾರ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ದೇವಾಲಯಕ್ಕೆ ರಾಜ್ಯದ ವಿವಿಧೆಡೆಗಳಿಂದ ಮನೆದೇವರ ಕುಟುಂಬಗಳಿವೆ. ರಾಜ್ಯ, ಹೊರ ರಾಜ್ಯಗಳಿಂದ ಬರುವ ಹಾಗೂ ವಿದೇಶದಲ್ಲೂ ಕೂಡ ಭಕ್ತರನ್ನು ಹೊಂದಿರುವ ಈ ದೇವಾಲಯವು ಅದರದೇ ಆದ ಬೆಲೆಬಾಳುವ ಜಮೀನು ಸರ್ವೆ ನಂ.1088, 649 ಹಾಗೂ ದೇವಾಲಯದ ಸುತ್ತ ತೆಂಗು, ಅಡಕೆ ಇನ್ನೂ ಕೆಲವು ಆದಾಯ ಬರುವ ಮರಗಿಡಗಳಿವೆ. ಭಕ್ತಾದಿಗಳು ದೇವರ ಹೆಸರಿನಲ್ಲಿ ಕಾಣಿಕೆ ರೂಪದಲ್ಲಿ ಚಿನ್ನ, ಬೆಳ್ಳಿ, ನಗದನ್ನು ನೀಡುತ್ತಾರೆ.

ಅಕ್ರಮ ಖಾಸಗಿ ಟ್ರಸ್ಟ್‌ನಿಂದ ಅವ್ಯವಹಾರ: ಖಾಸಗಿ ಟ್ರಸ್ಟ್‌ ಮಾಡಿಕೊಂಡಿರುವವರು ಅಕ್ರಮ ಕೂಟ ಕಟ್ಟಿಕೊಂಡು ಇದನ್ನೆಲ್ಲ ದೋಚುತ್ತಿದ್ದಾರೆ. ಲೆಕ್ಕವಿಲ್ಲದೇ ಸರ್ಕಾರದ ಖಜಾನೆಗೆ ನಷ್ಟವುಂಟು ಮಾಡುತ್ತಿದ್ದಾರೆ. ಈ ಹಣದಲ್ಲೇ ಖಾಸಗಿ ಟ್ರಸ್ಟ್‌ ಮಾಡಿಕೊಂಡಿರುವವರು ಬಡ್ಡಿ, ಚೀಟಿ ಇನ್ನಿತರ ಅಕ್ರಮ ವ್ಯವಹಾರ ನಡೆಸುತ್ತಾ ಬಂದಿರುತ್ತಾರೆ. ಬರುವ ಭಕ್ತಾದಿಗಳಲ್ಲಿ ತಮ್ಮ ಹಿತಕಾಯುವವರಿಗೆ ಮಾತ್ರ ಕಾಣಿಕೆ ಕೈಯಲ್ಲಿ ನೀಡುವವರಿಗೆ ಪ್ರವೇಶ ಕಲ್ಪಿಸುತ್ತಾರೆ. ಸ್ಥಳೀಯರಿಗೆ ಅವಕಾಶ ನಿರಾಕರಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಸ್ಥಳೀಯರಿಗೆ ಬೆದರಿಕೆ: ಕಾಣಿಕೆ ರೂಪದಲ್ಲಿ ದೇವಾಲಯದ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ರೂ. ಹಣವನ್ನು ಭಕ್ತಾದಿಗಳಿಂದ ಪೀಕುತ್ತಾರೆ. ಅದನ್ನು ತಮ್ಮ ಸ್ವಂತ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸ್ಥಳೀಯ ಭಕ್ತಾದಿಗಳು ಹಾಗೂ ದೇವಾಲಯದ ಬಗ್ಗೆ ಗ್ರಾಮಸ್ಥರು ಪ್ರಶ್ನೆ ಮಾಡುವ ಭಕ್ತಾದಿಗಳಿಗೆ ಬೆದರಿಕೆ ಹಾಕಿ ಹೊರ ಹಾಕುತ್ತಾರೆ. ಸ್ಥಳೀಯರು ದೇವಾಲಯಕ್ಕೆ ಹೋಗುವುದಕ್ಕೆ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆರೋಪಿಸಿದ್ದಾರೆ.

ಖಾಸಗಿ ವ್ಯಕ್ತಿಗಳಿಂದ ದುರ್ಬಳಕೆ: ಶ್ರೀರಾಮ ದೇವಸ್ಥಾನದ ಹೆಸರಿನಲ್ಲಿರುವ ಸರ್ವೆ ನಂ.1088, 649ರ ಜಮೀನಿನ ಆದಾಯವನ್ನು ಲಪಟಾಯಿಸಿ ದ್ದಾರೆ. ತಮ್ಮ ಹೆಸರಿಗೆ ಜಮೀನನ್ನು ಮಾಡಿಸಿಕೊಳ್ಳಲು ಪಾಂಡವಪುರ ಉಪವಿಭಾಗಾಧಿಕಾರಿಗಳಿಗೆ ಒತ್ತಡ ಹಾಕುತ್ತಿದ್ದಾರೆ. ಖಾಸಗಿ ಟ್ರಸ್ಟ್‌ ವ್ಯಕ್ತಿಗಳು, ಕೆಲವು ಅಧಿ ಕಾರಿಗಳು ಶಾಮೀಲಾಗಿ ನಿರಂತರವಾಗಿ ಬರುವ ಆದಾಯವನ್ನು ಪಾಲು ಮಾಡಿಕೊಂಡಿರುವ ಶಂಕೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:- ಭಾರೀ ಮಳೆಗೆ ತತ್ತರಿಸಿದ ಚೆನ್ನೈ, ಜನಜೀವನ ಅಸ್ತವ್ಯಸ್ತ; ವಿಮಾನ ಸಂಚಾರ ರದ್ದು

ಜಮೀನು ವಶಕ್ಕೆ ಪಡೆಯದ ಅಧಿಕಾರಿಗಳು: ಕೋಟ್ಯಂತರ ರೂ.ಮೌಲ್ಯದ ಜಮೀನನ್ನು ವಶಕ್ಕೆ ಪಡೆಯದೇ ತಾಲೂಕು ಆಡಳಿತ ಮೀನಾಮೇಷ ಎಣಿಸುತ್ತಿದೆ. ಖಾಸಗಿ ವ್ಯಕ್ತಿಗಳು ದೇವಾಲಯದೊಳಗೆ ಉಳಿದುಕೊಂಡು ದೂರು ಕೊಟ್ಟವರ ಮೇಲೆ ಹಾಗೂ ಅಲ್ಲಿಗೆ ಹೋಗುವ ಭಕ್ತಾದಿಗಳಿಗೆ ಕಿರಿಕಿರಿ ಮಾಡುತ್ತಿ ದ್ದಾರೆ. ಅವರನ್ನು ಹೊರಗೆ ಕಳುಹಿಸಿ ಅರ್ಚಕರನ್ನು ನೇಮಕ ಮಾಡಿ, ತೆಂಗು, ಅಡಕೆ ಹಾಗೂ ಜಮೀನು ಮುಜರಾಯಿ ಇಲಾಖೆಯ ವಶಕ್ಕೆ ಪಡೆದು ಹರಾಜು ಪ್ರಕ್ರಿಯೆ ಮಾಡಿ ಬರುವ ಆದಾಯವನ್ನು ಸರ್ಕಾರದ ಖಜಾನೆಗೆ ಜಮಾ ಮಾಡಬೇಕಾದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಮಗ್ರ ತನಿಖೆಗೆ ಒತ್ತಾಯ: ಲೋಕಾಯುಕ್ತ ನ್ಯಾಯಾಲಯವು ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಮಗ್ರ ತನಿಖೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಖಾಸಗಿ ಟ್ರಸ್ಟ್‌ ಮಾಡಿಕೊಂಡು ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಂಡಿರುವವರ ಮೇಲೆ ಕ್ರಮ ಜರುಗಿಸ ಬೇಕು. ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಭಕ್ತರಿಗೆ ಮುಕ್ತ ಪ್ರವೇಶ ಸಿಗಬೇಕು. ದೇವಾಲಯಕ್ಕೆ ಬರುವ ಕಾಣಿಕೆ ರೂಪದ ಚಿನ್ನ, ಬೆಳ್ಳಿ, ನಗದು ಎಲ್ಲವನ್ನೂ ರಶೀದಿ ಮೂಲಕ ಸರ್ಕಾರದ ಖಜಾನೆಯಲ್ಲಿ ಜಮಾ ಆಗಬೇಕು. ದೇವಾಲಯದ ಹೆಸರಿನಲ್ಲಿ ಒಳಗೊಂಡಂತೆ ಇನ್ನೂ ಹೆಚ್ಚಿನ ಜಮೀನು ಇದ್ದರೆ ಅದನ್ನು ತನಿಖೆ ಮಾಡಿ ಇಲಾಖೆ ಸುಪರ್ದಿಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಖಾಸಗಿ ಟ್ರಸ್ಟ್‌ ಹೆಸರಿನಲ್ಲಿ ಲೂಟಿ ಆಗುತ್ತಿರುವುದ ರಿಂದ ಸರ್ಕಾರಕ್ಕೆ ಅಧಿಕಾರಿಗಳಿಂದ ನಷ್ಟವಾಗಿದೆ. ಖಾಸಗಿ ಟ್ರಸ್ಟ್‌ನವರಿಂದ ನಷ್ಟ ಕಟ್ಟಿಸಿಕೊಂಡು ಅವರ ಹಾಗೂ ಅಧಿಕಾರಿಗಳ ಮೇಲೆ ಧಾರ್ಮಿಕ ದತ್ತಿ ಇಲಾಖೆಯ ಕಾನೂನು ವ್ಯಾಪ್ತಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲೋಕಾ ಯುಕ್ತ, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿ, ಪಾಂಡವಪುರ ಉಪವಿಭಾಗಾ ಧಿಕಾರಿ ಹಾಗೂ ಶ್ರೀರಂಗಪಟ್ಟಣ ತಹಶೀಲ್ದಾರ್‌ಗೆ ದೂರು ಸಲ್ಲಿಸಿದ್ದಾರೆ.

 “ಶ್ರೀರಾಮಮಂದಿರ ದೇವಾಲಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿ ದ್ದರೂ ಕೆಲವರು ಖಾಸಗಿ ಟ್ರಸ್ಟ್‌ ಮಾಡಿ ಕೊಂಡು ದೇವಾಲಯದ ಆದಾಯ, ಆಸ್ತಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳು ಸಹ ಶಾಮೀಲಾಗಿರುವುದ ರಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದೂರು ನೀಡಿದ್ದೇನೆ.” – ಮೋಹನ್‌ಕುಮಾರ್‌, ರೈತ ಮುಖಂಡ

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.