ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆಯೇ ಮದ್ದು


Team Udayavani, May 17, 2019, 4:10 PM IST

man-1

ಮಂಡ್ಯ: ಪ್ರತಿಯೊಬ್ಬರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛ ಮಾಡಿದರೆ, ಸ್ವಚ್ಛ ದೇಶ ನಿರ್ಮಾಣವಾಗುವ ಜೊತೆಗೆ ಸಾಂಕ್ರಾಮಿಕ ರೋಗ ಮುಕ್ತ ದೇಶ ನಿರ್ಮಾಣವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫ‌ರ್‌ ಹೇಳಿದರು.

ನಗರದ ಜಯಚಾಮರಾಜ ಒಡೆಯರ್‌ ವೃತ್ತದಿಂದ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿ ಆವರಣದವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಡೆಂಘೀ ಜಾಗೃತಿ ಜಾಥಾಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಸಾಂಕ್ರಾಮಿಕ ರೋಗಗಳ ಜಾಗೃತಿ: ಡೆಂಘೀ, ಚಿಕನ್‌ ಗುನ್ಯಾ ಸೇರಿ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗುವುದು ಮನುಷ್ಯನಿಗೆ ಅವಶ್ಯಕವಾಗಿದೆ. ಇಂತಹ ಗಂಭೀರ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗಲು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಪ್ರಮುಖವಾಗಿದೆ. ಈ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ಡೆಂಘೀ ರೋಗ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮೇ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಜಾಗೃತಿ ಮೂಡಿಸುತ್ತಿವೆ. ಜನರು ರೋಗ ಮುಕ್ತರಾಗಿ ಆರೋಗ್ಯಯುತ ಜೀವನ ಮಾಡಬೇಕು ಎಂದು ಹೇಳಿದರು.

ಸ್ವಚ್ಛತೆ ಕಾಪಾಡಿ: ಮನುಷ್ಯ ಆರೋಗ್ಯ ಕಾಪಾಡಿಕೊಳ್ಳಲು ತಾನು ವಾಸ ಮಾಡುವ ಸುತ್ತಲಿನ ಪರಿಸರದ ಸ್ವಚ್ಛತೆ ಇರಬೇಕು. ಸ್ವಚ್ಛತೆಯೇ ಸಾಂಕ್ರಾಮಿಕ ರೋಗಗಳ ವಿನಾಶಕ್ಕೆ ರಾಮಬಾಣವಾಗಿದೆ. ಹೀಗಾಗಿ ತಮ್ಮ ಮನೆ, ಹಾಗೂ ಸುತ್ತಲಿನ ಪರಿಸರ ಸ್ವಚ್ಛ ಮಾಡುವಲ್ಲಿ ಪ್ರತಿಯೊಬ್ಬರೂ ಭಾಗೀದಾರರಾಗಬೇಕು. ಸೊಳ್ಳೆಗಳಿಂದ ಬರುತ್ತಿರುವ ರೋಗಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಹೀಗಾಗಿ ಆರೋಗ್ಯ ಕಾರ್ಯಕರ್ತರು ಸೇರಿ ವಿವಿಧ ಸಂಘಟನೆಗಳ ಮೂಲಕ ಪ್ರತಿಯೊಂದು ಹಳ್ಳಿಗಳಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸೊಳ್ಳೆ ನಿವಾರಕ ಬಳಸಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಚೇಗೌಡ ಮಾತನಾಡಿ, ಸಾಂಕ್ರಾಮಿಕ ರೋಗಗಳಿಗೆ ಮನುಷ್ಯನ ಸುತ್ತಲೂ ಇರುವ ನೈರ್ಮಲ್ಯದ ಕೊರತೆಯೇ ಕಾರಣವಾಗಿದೆ. ಸೊಳ್ಳೆಗಳು ಬಹುತೇಕ ಮಾರಣಾಂತಿಕ ಸಾಂಕ್ರಾಮಿಕ ರೋಗ ಹರಡುವ ಕೀಟವಾಗಿದೆ. ಹಗಲಿನಲ್ಲಿ ಕಚ್ಚುವ ಏಡಿಸ್‌ ಈಜಿಪ್ಟಿ ಸೊಳ್ಳೆಯಿಂದ ಡೆಂಘೀ ರೋಗ ಬರುತ್ತದೆ. ಹೀಗಾಗಿ ನೀರು ನಿಲ್ಲದಂತೆ ಗುಂಡಿಗಳನ್ನು ಹಾಗೂ ಚರಂಡಿಗಳನ್ನು ಮುಚ್ಚುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬೇಕು. ಮನೆಯಲ್ಲಿ ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿವಾರಕಗಳನ್ನು ಬಳಕೆ ಮಾಡಬೇಕು. ಡೆಂಘೀ ಬರದಂತೆ ಜಾಗೃತಿ ವಹಿಸಬೇಕು ಎಂದರು.

ಡೆಂಘೀ ಮುಕ್ತ ಜಿಲ್ಲೆ: ಮೇ ತಿಂಗಳ ಕೊನೆಯ ದಿನಗಳು, ಜೂನ್‌ ಹಾಗೂ ಜುಲೈ ತಿಂಗಳ ಮಳೆಗಾಲದಲ್ಲಿ ಡೆಂಘೀ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಸಾರ್ವಜನಿಕರು ಜ್ವರ, ತಲೆನೋವು, ವಾಂತಿ, ತೀವ್ರ ಕಣ್ಣಿನ ನೋವು ಹಾಗೂ ಅತಿಯಾದ ಸುಸ್ತು ಕಂಡು ಬಂದಲ್ಲಿ ನಿರ್ಲಕ್ಷ್ಯ ಮಾಡದೆ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು. ರಾಜ್ಯದಲ್ಲಿ 201-17ನೇ ಸಾಲಿನಲ್ಲಿ ಡೆಂಘೀ ಪ್ರಕರಣದಿಂದ ಹಲವು ಜನರು ಸಾವನ್ನಪ್ಪಿದ್ದಾರೆ. ಆದರೆ ಕಳೆದ 2018ನೇ ಸಾಲಿನಲ್ಲಿ ಡೆಂಘೀ ರೋಗ ದಿಂದ ಸಾವು ಸಂಭವಿಸಿಲ್ಲ. ಸ್ವಚ್ಛತೆ ಬಗ್ಗೆ ಕಾಳಜಿ ವಹಿಸುವ ಮೂಲಕ ಡೆಂಘೀ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದರು. ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಅಧಿಕಾರಿ ಡಾ.ಭವಾನಿ ಶಂಕರ್‌, ವೈದ್ಯಾಧಿಕಾರಿ ಡಾ.ಬಾಲಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.