ಮನ್ಮುಲ್ನಲ್ಲಿ ಜೆಡಿಎಸ್ ಪಾರುಪತ್ಯ
8 ಸ್ಥಾನಗಳಲ್ಲಿ ಜಯಭೇರಿ, 3 ಸ್ಥಾನಕ್ಕೆ ಕುಸಿದ ಕಾಂಗ್ರೆಸ್ • ಮೊದಲ ಬಾರಿಗೆ ಒಂದು ಸ್ಥಾನ ಗೆದ್ದ ಬಿಜೆಪಿ
Team Udayavani, Sep 9, 2019, 12:28 PM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ವಿಜಯದ ನಗೆ ಬೀರಿದರು.
ಮಂಡ್ಯ: ಲೋಕಸಭಾ ಚುನಾವಣಾ ಸೋಲು ಮತ್ತು ಜೆಡಿಎಸ್ ನಾಯಕತ್ವದ ಮೈತ್ರಿ ಸರ್ಕಾರದ ಪತನದಿಂದ ಕಂಗೆಟ್ಟುಹೋಗಿದ್ದ ಜೆಡಿಎಸ್ಗೆ ಇದೀಗ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಗೆಲುವು ರಾಜಕೀಯ ಜೀವದಾನ ನೀಡಿದಂತಾಗಿದೆ.
ಸ್ಥಳೀಯವಾಗಿ ಬಹುತೇಕ ಸ್ಥಳೀಯ ಸಂಸ್ಥೆಗಳು ಜೆಡಿಎಸ್ ಪಾಲಾಗಿದ್ದು ಇದೀಗ ಮನ್ಮುಲ್ನಲ್ಲಿ ಅಧಿಕಾರ ಹಿಡಿಯುವ ಸ್ಪಷ್ಟ ಸಾಧ್ಯತೆಗಳಿರುವುದರಿಂದ ಜೆಡಿಎಸ್ ತನ್ನ ಬೇರುಗಳನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ.
ಮನ್ಮುಲ್ನ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಕಾಂಗ್ರೆಸ್ 3 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಬಿಜೆಪಿ 1 ಸ್ಥಾನದಲ್ಲಿ ಗೆಲುವು ಸಾಧಿಸುವುದರೊಂದಿಗೆ ಮನ್ಮುಲ್ಗೆ ಪ್ರವೇಶ ಪಡೆದಿದೆ.
ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಮಳವಳ್ಳಿಯ ವಿ.ಎಂ.ವಿಶ್ವನಾಥ್, ಪಾಂಡವಪುರದ ರಾಮಚಂದ್ರು, ನಾಗಮಂಗಲದಿಂದ ನೆಲ್ಲೀಗೆರೆ ಬಾಲು, ರವಿ ಗೆಲುವು ಸಾಧಿಸಿದ್ದಾರೆ. ಮದ್ದೂರಿನಿಂದ ಎಸ್.ಪಿ. ಸ್ವಾಮಿ, ಕೆ.ಆರ್.ಪೇಟೆಯಿಂದ ಹೆಚ್.ಟಿ.ಮಂಜು, ಮಂಡ್ಯದಿಂದ ರಾಮಚಂದ್ರ ಹಾಗೂ ರಘುನಂದನ್ ಆಯ್ಕೆಯಾಗಿದ್ದಾರೆ.
ಶ್ರೀರಂಗಪಟ್ಟಣದಿಂದ ಬೋರೇಗೌಡ, ಕೆ.ಆರ್.ಪೇಟೆಯಿಂದ ಕೆ.ರವಿ, ಮಂಡ್ಯದಿಂದ ಯು.ಸಿ.ಶಿವಕುಮಾರ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮದ್ದೂರು ತಾಲೂಕಿನಿಂದ ಎಂ.ರೂಪಾ ಆಯ್ಕೆಯಾಗಿದ್ದಾರೆ.
ಹಿಂದಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿದ್ದ ಕದಲೂರು ರಾಮಕೃಷ್ಣ ಈ ಬಾರಿ ಪರಾಭವಗೊಂಡಿದ್ದಾರೆ. ನಿರ್ದೇಶಕರಾಗಿದ್ದ ಶೀಳನೆರೆ ಅಂಬರೀಶ್, ಮಂಡ್ಯದ ಬಿಳಿದೇಗಲು ಚಂದ್ರ ಸೋಲನ್ನಪ್ಪಿದ್ದರೆ, ಕೆ.ಆರ್.ಪೇಟೆಯ ಕೆ.ರವಿ, ಶ್ರೀರಂಗಪಟ್ಟಣದ ಬೋರೇಗೌಡ, ಮಳವಳ್ಳಿ ವಿ.ಎಂ.ವಿಶ್ವನಾಥ್, ಮಂಡ್ಯದಿಂದ ಯು.ಸಿ.ಶಿವಕುಮಾರ್ಅವರು ಮತ್ತೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್.ಎನ್.ಲಕ್ಷ್ಮೀನಾರಾಯಣ ಕೇವಲ 2 ಮತಗಳ ಅಂತರದಿಂದ ಸೋಲನುಭವಿಸಿದ್ದರೆ, ಮದ್ದೂರಿನಿಂದ ಸ್ಪರ್ಧಿಸಿದ್ದ ಕದಲೂರು ರಾಮಕೃಷ್ಣ 5 ಮತ ಹಾಗೂ ಮಂಡ್ಯ ತಾಲೂಕಿನಿಂದ ಸ್ಪರ್ಧಿಸಿದ್ದ ಕಾಳೇಗೌಡ 6 ಮತಗಳ ಅಂತರದಿಂದ ಪರಾಭವಗೊಂಡಿರುವುದು ವಿಶೇಷ. ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದ ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್ ಸಹ ಪರಾಭವಗೊಂಡಿದ್ದಾರೆ.
ಹಿಂದಿನ ಆಡಳಿತ ಮಂಡಳಿ ಚುನಾವಣೆಯಲ್ಲಿ 7 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್ ಪಾರುಪತ್ಯ ಸಾಧಿಸಿತ್ತು. ಜೆಡಿಎಸ್ ಕೇವಲ 5 ಸ್ಥಾನಗಳಲ್ಲಷ್ಟೇ ಗೆದ್ದಿತ್ತು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಎನ್.ಚಲುವರಾಯಸ್ವಾಮಿ ಹಾಗೂ ರಮೇಶ್ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರಿದ್ದರಿಂದ ಮೂವರು ನಿರ್ದೇಶಕರು ಜೆಡಿಎಸ್ ತೊರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ