ಇತಿಹಾಸ ಸೃಷ್ಟಿಸಿ ಜನಮಾನಸದಲ್ಲಿ ಉಳಿದ ಕೆಂಪೇಗೌಡ


Team Udayavani, Jun 28, 2018, 11:39 AM IST

mandya.jpg

ಮಂಡ್ಯ: ಇತಿಹಾಸ ಎನ್ನುವುದು ಬಲ್ಲವರು ಮಾಡಿದ ದಾಖಲೆ. ದೂರದೃಷ್ಟಿ, ಶಕ್ತಿ-ಸಾಮರ್ಥ್ಯ, ಉತ್ತಮ ಆಡಳಿತದಿಂದ ಇತಿಹಾಸ ಸೃಷ್ಟಿಸಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅವರಲ್ಲಿ ಕೆಂಪೇಗೌಡರೂ ಒಬ್ಬರು ಎಂದು ಶಂಕರಗೌಡ ಮಹಾ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಎಸ್‌.ಬಿ.ಶಂಕರೇಗೌಡ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಮಂದಿರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ಇತಿಹಾಸದ ಅರಿವು ನಮ್ಮನ್ನು ಐತಿಹಾಸಿಕ ಗೊಳಿಸುತ್ತದೆ. ನಮ್ಮ ಅಸ್ಮಿತೆ ಗುರುತಿಸಿಕೊಳ್ಳಲು ಅವಕಾಶ ನೀಡುತ್ತದೆ. ಹೊಸದಾಗಿ ಇತಿಹಾಸ ಸೃಷ್ಟಿಸುವವರು ಇತಿಹಾಸ ಅರಿತಿರಬೇಕು. ಅವರಿಂದಷ್ಟೇ ಇತಿಹಾಸ ಸೃಷ್ಟಿಸಲು ಸಾಧ್ಯ ಎಂದು ನುಡಿದರು. 

ಭೈರವ ನಾಣ್ಯ ಚಾಲ್ತಿಗೆ: ಕೆಂಪೇಗೌಡರು ವಿಜಯನಗರ ಅರಸರ ಸಾಮಂತ ಅರಸರಾಗಿದ್ದುಕೊಂಡು ಅಭಿವೃದ್ಧಿಯ ಹೊಸ ಪರ್ವವನ್ನೇ ಸೃಷ್ಟಿಸಿದರು. ಅದು ವಿಜಯನಗರ ಅರಸರ ಮೆಚ್ಚುಗೆಗೂ ಪಾತ್ರವಾಗಿತ್ತು. ವಾಣಿಜ್ಯ ಕೇಂದ್ರಗಳನ್ನು ಗುರುತಿಸಲು ಪೇಟೆಗಳನ್ನು ಸೃಷ್ಟಿಸಿದರು. ಅಂಥ ಪೇಟೆಗಳಲ್ಲಿ ಚಿಕ್ಕಪೇಟೆ, ಬಳೆಪೇಟೆ, ಅಕ್ಕಿ ಪೇಟೆ, ಉಪ್ಪಾರಪೇಟೆ ಸೇರಿದಂತೆ ಹಲವು ಇಂದಿಗೂ ಅದೇ ಹೆಸರಿನಿಂದ ಗುರುತಿಸಿಕೊಳ್ಳುತ್ತಿವೆ. ಕೆಂಪೇಗೌಡರ ಅಭಿವೃದ್ಧಿ ಒಪ್ಪಿದ್ದ ವಿಜಯನಗರದ ಅರಸರು ಭೈರವ ನಾಣ್ಯ ಚಾಲ್ತಿಗೆ ತಂದಿದ್ದರು ಎಂದು ತಿಳಿಸಿದರು.

ಕೆಂಪೇಗೌಡರು ವೈಷ್ಣವ ಮತ್ತು ಶೈವ ಪಂಥದ ಅನುಯಾಯಿಯಾಗಿದ್ದರೂ ಅನ್ಯಧರ್ಮದ ವಿರುದ್ಧ ಅಸಹಿಷ್ಣುತೆ ಪ್ರದರ್ಶಿಸಲಿಲ್ಲ. ಧರ್ಮ ಸಾಮರಸ್ಯ, ಸಮನ್ವಯದ ಆಡಳಿತ ನಡೆಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದ ಅವರು, ಇವರ ಅಭಿವೃದ್ಧಿ ಹಾಗೂ ಜನಪ್ರಿಯತೆ ಸಹಿಸದ ಚನ್ನಪಟ್ಟಣದ ಸಾಮಂತ ರಾಜ ವಂಚನೆಯಿಂದ ಕೆಂಪೇಗೌಡರನ್ನು ಜೈಲಿಗಟ್ಟುತ್ತಾನೆ. ಅಲ್ಲಿಂದ ತಪ್ಪಿಸಿಕೊಳ್ಳುವುದು ರಾಜದ್ರೋಹವಾಗುವುದೆಂದು ಭಾವಿಸಿದ್ದ ಕೆಂಪೇಗೌಡರು ಸುಮಾರು ಐದು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇದು ಅವರ ರಾಜಭಕ್ತಿಗೆ ಇರುವ ದೊಡ್ಡ ನಿದರ್ಶನ ಎಂದು ಹೇಳಿದರು. 

ಇತಿಹಾಸದ ರೇಖೆ ವಿಸ್ತಾರವಾಗಲಿ: ಕೆಂಪೇಗೌಡರು ಕೇವಲ ಬೆಂಗಳೂರು ಪ್ರಾಂತ್ಯಕ್ಕೆ, ಒಕ್ಕಲಿಗರಿಗೆ ಸೀಮಿತರಾದ ವ್ಯಕ್ತಿಯಲ್ಲ. ಅವರು ಎಲ್ಲ ಧರ್ಮ, ಸಮುದಾಯದವರಿಗೆ ಸಲ್ಲುವಂತಹವರು. ಈ ನಾಡಿನ ಆಸಕ್ತಿಯೂ ಆಗಿದ್ದಾರೆ. ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಒನಕೆ ಒಬವ್ವ ಸೇರಿದಂತೆ ಅನೇಕ ಹೋರಾಟಗಾರರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸದೆ ಅವರ ಸಾಧನೆಯನ್ನು ನಾಡಿಗೆ, ದೇಶಕ್ಕೆ ವಿಸ್ತರಿಸಬೇಕು. ಇತಿಹಾಸ ಎನ್ನುವುದು ಸ್ಥಳೀಯತೆ ಮೂಲಕ ಸೃಷ್ಟಿಯಾಗಬೇಕು. ಅದರೊಂದಿಗೆ ಇತಿಹಾಸದ ರೇಖೆ ವಿಸ್ತಾರವಾಗಬೇಕು. ಇಲ್ಲವಾದರೆ ಈ ನಾಡು, ದೇಶದ ಭದ್ರತೆ ಕಾಪಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ನುಡಿದರು.

ಆದಿಚುಂಚನಗಿರಿ ಕೊಮ್ಮೇರಹಳ್ಳಿ ಶಾಖಾ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಎಂ.ಶ್ರೀನಿವಾಸ್‌, ವಿಧಾನಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನಸ್ವಾಮಿ, ಜಿಲ್ಲಾಧಿಕಾರಿ ಎನ್‌. ಮಂಜುಶ್ರೀ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಜಿ.ರಾಧಿಕಾ, ನಗರಸಭೆ ಪ್ರಭಾರ ಅಧ್ಯಕ್ಷೆ ಸುಜಾತಾಮಣಿ, ಜಿಪಂ ಯೋಜನಾಧಿಕಾರಿ ಗಣಪತಿ ನಾಯಕ್‌, ಉಪವಿಭಾಗಾಧಿಕಾರಿ ರಾಜೇಶ್‌, ತಾಪಂ ಸದಸ್ಯ ಮಂಜೇಗೌಡ, ತಹಶೀಲ್ದಾರ್‌ ನಾಗೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಾಂತಮ್ಮ, ಸ್ವಾಭಿಮಾನಿ ಒಕ್ಕಲಿಗರ ವೇದಿಕೆ ಬಾಣಸವಾಡಿ ನಾಗಣ್ಣಗೌಡ, ಜೋಗಿಗೌಡ, ಯಶೋಧಾ, ಶಕುಂತಲಾ ಇತರರಿದ್ದರು.

ಮೆರವಣಿಗೆ: ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಮೆರವಣಿಗೆ ಕಲಾಮಂದಿರದವರೆಗೆ ಸಾಗಿಬಂದಿತು. ಕೆಂಪೇಗೌಡರ ಪೋಷಾಕಿನಲ್ಲಿ ನಾಗೇಗೌಡರು ಕುದುರೆ ಏರಿ ಬಂದು ಗಮನಸೆಳೆದರು.

ಪೂಜಾ ಕುಣಿತ, ಡೊಳ್ಳು ಕುಣಿತ, ತಮಟೆ, ಗೊರವರ ಕುಣಿತ, ವೀರಗಾಸೆ ಕುಣಿತ ಸೇರಿದಂತೆ ಹಲವು ಜಾನಪದ ಕಲಾತಂಡಗಳು ಮೆರವಣಿಗೆ ಯಲ್ಲಿ ಭಾಗವಹಿಸಿದ್ದವು.

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.