Kikkeri: ಭೂ ಕಬಳಿಕೆಗೆ ಸತ್ತ ವ್ಯಕ್ತಿಯನ್ನೇ ಜೀವಂತವಾಗಿರಿಸಿದರು


Team Udayavani, Feb 17, 2024, 6:31 PM IST

Kikkeri: ಭೂ ಕಬಳಿಕೆಗೆ ಸತ್ತ ವ್ಯಕ್ತಿಯನ್ನೇ ಜೀವಂತವಾಗಿರಿಸಿದರು

ಕಿಕ್ಕೇರಿ: ಮೃತ ವ್ಯಕ್ತಿಯ ಹೆಸರನ್ನು ಜೀವಂತವಾಗಿರುವ ವ್ಯಕ್ತಿಗಿಟ್ಟು ನಕಲಿ ಆಧಾರ್‌ ಕಾರ್ಡ್‌ಹಾಗೂ ಇತರ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಕಬಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸುಮಾರು 34 ವರ್ಷಗಳ ಹಿಂದೆ (25-11-1990) ಕಿಕ್ಕೇರಿಯ ದೊಳ್ಳಶೆಟ್ಟಿ (ಹನುಮಂತಶೆಟ್ಟಿ) ಎಂಬ ವ್ಯಕ್ತಿ ಮೃತರಾಗಿದ್ದರು. ಇವರ ಹೆಸರಿನಲ್ಲಿ ಜಮೀನಿದ್ದು, ಈ ಜಮೀನು ಲಪಟಾಯಿಸಲು ಜೀವಂತ ಇರುವಂತೆ ದಾಖಲೆ ಸೃಷ್ಟಿಸಿ ನೋಂದಣಿ ಮೂಲಕ ಕ್ರಯ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಮೃತ ವ್ಯಕ್ತಿಯ ಮಗ ಕೆ.ಎಚ್‌.ಕೃಷ್ಣಮೂರ್ತಿ ಪೌತಿ ಖಾತೆ ಮಾಡಿಸಿಕೊಳ್ಳಲು ಈಚೆಗೆ ಕಂದಾಯ ಇಲಾಖೆಗೆ ಹೋದಾಗ ತಮ್ಮ ತಂದೆ ಹೆಸರಿನ ಆಸ್ತಿ ಬೇರೆ ವ್ಯಕ್ತಿ ಹೆಸರಿಗೆ ಕ್ರಯದ ಮೂಲಕ ವರ್ಗಾವಣೆ ಆಗಿರುವುದು ತಿಳಿದಿದೆ.

ಮೃತ ದೊಳ್ಳಶೆಟ್ಟಿ ಹೆಸರಿನಲ್ಲಿ ಹೋಬಳಿಯ ಜುಜ್ಜಲಕ್ಯಾತನಹಳ್ಳಿ ಗ್ರಾಮದ ಸರ್ವೆ ನಂ. 8/ಡಿ. 08.8ಗುಂಟೆ ಜಮೀನಿದೆ. ಈ ಆಸ್ತಿಯನ್ನು ಇದೇ ಜುಜ್ಜಲಕ್ಯಾತನಹಳ್ಳಿ ಗ್ರಾಮದ ಲೇಟ್‌ ಕೃಷ್ಣೇಗೌಡರ ಮಗ ರಂಗೇಗೌಡ 20-03-2023ರಂದು ಕಿಕ್ಕೇರಿ ಹೋಬಳಿಯ ಚೌಡೇನಹಳ್ಳಿ ಗ್ರಾಮದ ನಂಜೇಗೌಡ ಎಂಬುವರನ್ನು ದೊಳ್ಳಶೆಟ್ಟಿ ಎಂದು ಬಿಂಬಿಸಿ, ಆಧಾರ್‌ಕಾರ್ಡ್‌ ನಮೂದಿಸಿ (ನಂ. 632744522581) ಇವರನ್ನೇ ಕೆ.ಆರ್‌.ಪೇಟೆಗೆ ಕರೆದುಕೊಂಡು ಹೋಗಿ ಶುದ್ಧಕ್ರಯವನ್ನು ಕೆ.ಆರ್‌.ಪೇಟೆ ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ಮಾಡಿಸಿಕೊಳ್ಳಲಾಗಿದೆ.

ಅಸಲಿಗೆ ಬರೆದುಕೊಟ್ಟ ವ್ಯಕ್ತಿಯ ಬಳಿ ಇರುವ ಆಧಾರ್‌ ಕಾರ್ಡ್‌ಗೂ, ಆರ್‌.ಟಿ.ಸಿ.ಯಲ್ಲಿರುವ ದೊಳ್ಳಶೆಟ್ಟಿಗೂ ಯಾವುದೇ ತಾಳೆ ಇಲ್ಲ. ದೊಳ್ಳಶೆಟ್ಟಿ ಮೃತನಾಗಿ 34 ವರ್ಷಗಳಾಗಿವೆ. ಅಕ್ರಮದಲ್ಲಿ ತಾಲೂಕು ಉಪನೋಂದಣಾಧಿಕಾರಿಗಳು, ದಸ್ತಾವೇಜು ಬರಹಗಾರರು, ಸರ್ವೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಇದೆ. ಸುಳ್ಳು ದಾಖಲೆ ಸೃಷ್ಟಿಸಿ ಮೃತ ವ್ಯಕ್ತಿ ಕುಟುಂಬಕ್ಕೆ ಸೇರಬೇಕಾದ ಸ್ವತ್ತನ್ನು ಬೇರೊಬ್ಬರಿಗೆ ಕ್ರಯಪತ್ರ ಮಾಡಿಕೊಡಲು ಸಹಕರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮೃತ ದೊಳ್ಳಶೆಟ್ಟಿ ಮಗನಾದ ಕೆ.ಎಚ್‌.ಕೃಷ್ಣಮೂರ್ತಿ ಡೀಸಿ, ಎಸ್ಪಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.