ಕೊಕ್ಕರೆ ಬೆಳ್ಳೂರು ಪೆಲಿಕಾನ್ಗೆ ಹಕ್ಕಿಜ್ವರವಿಲ್ಲ
Team Udayavani, Mar 23, 2020, 3:00 AM IST
ಭಾರತೀನಗರ: ಸಮೀಪದ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲಿ ಕಳೆದ ಮಂಗಳವಾರ (ಮಾ.17) ಮೃತಪಟ್ಟಿದ್ದ ಪೆಲಿಕಾನ್ಗೆ ಹಕ್ಕಿಜ್ವರವಿಲ್ಲ ಎಂದು ಬೆಂಗಳೂರು ಹೆಬ್ಟಾಳದ ಪಶು ವೈದ್ಯಕೀಯ ಹಾಗೂ ಜೈವಿಕ ಸಂಸ್ಥೆ ದೃಢೀಕರಿಸಿದೆ.
ಮೃತ ಪೆಲಿಕಾನ್ ಕಳೆದ ಮಾ.13ರಂದು ಶುಕ್ರವಾರ ಅಸ್ವಸ್ಥಗೊಂಡು ಮರದಿಂದ ಕೆಳಕ್ಕುರುಳಿತ್ತು. ಕೂಳಗೆರೆ ಪಶು ಆಸ್ಪತ್ರೆ ವೈದ್ಯ ಡಾ.ಸತೀಶ್, ಅಸ್ವಸ್ಥಗೊಂಡ ಪೆಲಿಕಾನ್ಗೆ ಶುಶ್ರೂಷೆ ನೀಡುತ್ತಿದ್ದರು. ಅಸ್ವಸ್ಥಗೊಂಡ ಪೆಲಿಕಾನ್ ವೈದ್ಯರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ(ಮಾ.17ರಂದು) ಅಸು ನೀಗಿತ್ತು.
ಮೃತ ಪೆಲಿಕಾನ್ಗೆ ಹಕ್ಕಿಜ್ವರ ಇದೆಯೋ ಇಲ್ಲವೋ ದೃಢೀಕರಿಸಿಕೊಳ್ಳಲು, ಪೆಲಿಕಾನ್ ಕಳೇಬರವನ್ನು ಹೆಬ್ಟಾಳದ ಪಶು ವೈದ್ಯಕೀಯ ಹಾಗೂ ಜೈವಿಕ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಮೃತಪಟ್ಟ ಪೆಲಿಕಾನ್ನಲ್ಲಿ ಹಕ್ಕಿಜ್ವರದ ಲಕ್ಷಣ ಕಂಡು ಬಂದಿಲ್ಲ ಎಂದು ಸಂಸ್ಥೆ ವರದಿ ತಿಳಿಸಿದೆ ಎಂದು ಕೂಳಗೆರೆ ಪಶು ಆಸ್ಪತ್ರೆ ವೈದ್ಯ ಡಾ.ಸತೀಶ್ ಹೇಳಿದರು.
ಮೈಸೂರಿನಲ್ಲಿ ಹಕ್ಕಿಜ್ವರ ದೃಢಪಟ್ಟ ಬೆನ್ನಲ್ಲೇ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಮಾ.18ರಂದು ಗ್ರಾಮಕ್ಕೆ ಭೇಟಿ ನೀಡಿ ಮುಂಜಾಗ್ರತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಆಗಾಗ್ಗೆ ಆ್ಯಂಟಿ ವೈರಲ್ ಔಷಧ ಸಿಂಪಡಣೆ, ನಾಟಿ ಕೋಳಿಗಳ ರಕ್ತದ ಮಾದರಿ, ಹಿಕ್ಕೆ, ಮಣ್ಣು, ನೀರು ಪರೀಕ್ಷೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದರು.
ಮಾ.17ರಂದು ಮೃತಪಟ್ಟ ಪೆಲಿಕಾನ್ ಹಕ್ಕಿ ದೊಡ್ಡದೊಂದು ಮೀನು ನುಂಗಿ ಜೀರ್ಣಿಸಿಕೊಳ್ಳಲಾಗದೆ ಮೃತಪಟ್ಟಿದೆ. ಮೃತಪಟ್ಟಿರುವ ಈ ಪೆಲಿಕಾನ್ ಹಕ್ಕಿಗೆ ಹಕ್ಕಿಜ್ವರವಿಲ್ಲ ಎಂದು ವರದಿ ಬಂದಿದೆ.
-ಡಾ.ಸತೀಶ, ಪಶುವೈದ್ಯಾಧಿಕಾರಿ, ಕೂಳಗೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು