ರೈತರಿಗೆ ಸಕಾಲದಲ್ಲಿ ಸವಲತ್ತು ತಲುಪಿಸಿ: ಸುಬ್ಬೇಗೌಡ
ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಕೃಷಿಕ ಸಮಾಜದ ಸರ್ವ ಸದಸ್ಯರ ಸಭೆ
Team Udayavani, Mar 11, 2020, 5:38 PM IST
ಕೆ.ಆರ್.ಪೇಟೆ: ಕೃಷಿ ಪೂರಕ ಎಲ್ಲಾ ಇಲಾಖೆ ಅಧಿಕಾರಿಗಳು ಯೋಜನೆಗಳನ್ನು ಸಮರ್ಪಕ ಮತ್ತು ಸಕಾಲದಲ್ಲಿ ತಲುಪಿಸಿದಾಗ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದು ಪ್ರಗತಿ ಪರ ರೈತ ಹಾಗೂ ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ವಿಠಲಾಪುರ ಸುಬ್ಬೇಗೌಡ ಹೇಳಿದರು.
ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ನಡೆದು ತಾಲೂಕು ಕೃಷಿಕ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರೈತರ ಅಭಿವೃದ್ಧಿಗೆ ಪೂರಕವಾದ ಕೃಷಿ, ತೋಟಗಾರಿಕೆ, ವಲಯ ಅರಣ್ಯ, ಸಾಮಾಜಿಕ ಅರಣ್ಯ, ರೇಷ್ಮೆ, ಎಪಿಎಂಸಿ, ಪಶುಪಾಲನಾ ಇಲಾಖೆಗಳು ರೈತರಿಗಿರುವ ಸೌಲಭ್ಯ ಸಮರ್ಪಕವಾಗಿ ಸಕಾಲದಲ್ಲಿ ತಲುಪಿಸುತ್ತಿಲ್ಲ. ಅಧಿಕಾರಿಗಳು ಸಭೆಗಳಿಗೇ ಬರುವುದಿಲ್ಲ. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ರೈತರ ಸಾಲ ಮನ್ನಾ ಮಾಡುವಾಗ ದಾಖಲೆಗಳು ಸರಿ ಇಲ್ಲ ಎಂದು ಸಾಕಷ್ಟು ರೈತರಿಗೆ ಇನ್ನೂ ಸಾಲ ಮನ್ನಾ ಮಾಡಿಲ್ಲ. ಹಾಗಾಗಿ ದಾಖಲೆ ಪಡೆದು ಮನ್ನಾ ಆಗದ ರೈತರಿಗೆ ಸಾಲ ಮನ್ನಾ ಮಾಡುವ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪತ್ರ ಬರೆಯೋಣ ಎಂದು ಸುಬ್ಬೇಗೌಡ ಹೇಳಿದಾಗ ಎಲ್ಲಾ ಸದಸ್ಯರು ಧ್ವನಿಗೂಡಿಸಿದರು.
ಅರಣ್ಯ ಇಲಾಖೆ ಅನುದಾನದಲ್ಲಿ ಚಿರತೆ ಹಾವಳಿ ಇರುವ ಕಾಡಂಚಿನ ಗ್ರಾಮಗಳಲ್ಲಿ ಸೋಲಾರ್ ದೀಪ ಅಳವಡಿಸಲು ಸಭೆಯಲ್ಲಿ ಚರ್ಚಿಸಿದಾಗ ಸಾಮಾಜಿಕ ಅರಣ್ಯಾಧಿಕಾರಿ ಶಿಲ್ಪ ಈ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆದು ಅನುದಾನ ಕೋರಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಪಶುಪಾಲನಾ ಇಲಾಖೆಯ ಅಧಿಕಾರಿ ಶಂಕರ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಈಶ್ವರಪ್ರಸಾದ್, ತಾಲೂಕು ಪ್ರಧಾನ ಕಾರ್ಯದರ್ಶಿ ಅಕ್ಕಿಹೆಬ್ಟಾಳು ರಾಮಸ್ವಾಮಿ, ನಿರ್ದೇಶಕರಾದ ನಾರಾಯಣಗೌಡ, ನಾರಾಯಣಗೌಡ, ಚನ್ನೇಗೌಡ, ಲಕ್ಷ್ಮೇಗೌಡ, ಜಗದೀಶ್, ಸ್ವಾಮೀಗೌಡ, ರಂಗನಾಥೇಗೌಡ, ಕೃಷಿ ತಾಂತ್ರಿಕ ಅಧಿಕಾರಿ ಶ್ರೀಧರ್, ಆರಾಧ್ಯ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ