ನೀರು ಹರಿಸದಿದ್ದರೆ ಇಂದೇ ಕೆಆರ್‌ಎಸ್‌ ಮುತ್ತಿಗೆ

ಬೆಳಗ್ಗೆ 11 ಗಂಟೆಯವರೆಗೆ ಸರ್ಕಾರಕ್ಕೆ ರೈತ ಸಂಘ ಗಡುವು • ಸಚಿವ ಸಂಪುಟ ಸಭೆ ತೀರ್ಮಾನ ಆಧರಿಸಿ ನಿರ್ಧಾರ

Team Udayavani, Jun 28, 2019, 8:39 AM IST

mandya-tdy-1..

ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿರುವುದು.

ಮಂಡ್ಯ: ನೀರಿಲ್ಲದೆ ಒಣಗುತ್ತಿರುವ ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಶುಕ್ರವಾರ (ಜೂ.28) ಬೆಳಗ್ಗೆ 11 ಗಂಟೆಯವರೆಗೆ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರಕ್ಕೆ ಗಡುವು ನೀಡಿದೆ. ನಿಗದಿತ ಗಡುವಿನೊಳಗೆ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಪ್ರಕಟಿಸದಿದ್ದರೆ ಸಾವಿರಾರು ರೈತರೊಂದಿಗೆ ಕೆಆರ್‌ಎಸ್‌ ಮುತ್ತಿಗೆ ಹಾಕಲು ನಿರ್ಧರಿಸಿದೆ.

ಬೆಳೆಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತಸಂಘದ ಕಾರ್ಯಕರ್ತರು ಕಳೆದೊಂದು ವಾರದಿಂದ ಕಾವೇರಿ ನೀರಾವರಿ ನಿಗಮದ ಎದುರು ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತಸಂಘದ ಕಾರ್ಯಕರ್ತರು ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನೀರು ಹರಿಸುವ ಬಗ್ಗೆ ಸ್ಪಷ್ಟ ತೀರ್ಮಾನ ಪ್ರಕಟಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಗೆ ಉಗ್ರ ಸ್ವರೂಪ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದರಿಂದ ಅವರ ಹೊಟ್ಟೆಗೆ ಬೆಂಕಿ ಬಿದ್ದಿದೆ. ನೀರು ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೇಲೆ ಹಾಕಿ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಬೇಡ. ಪ್ರಾಧಿಕಾರಕ್ಕೆ ಇಲ್ಲಿನ ವಸ್ತುಸ್ಥಿತಿ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ನೀರು ಬಿಡುಗಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

2 ಟಿಎಂಸಿ ನೀರು ಹರಿಸಿ ಸಾಕು: ಕೆಆರ್‌ಎಸ್‌ ಜಲಾಶಯದಲ್ಲಿ ಹತ್ತು ಟಿಎಂಸಿ ನೀರಿದೆ. ಬೆಳೆಗಳಿಗೆ ಅವಶ್ಯಕತೆ ಇರುವುದು ಕೇವಲ ಎರಡು ಟಿಎಂಸಿ ಮಾತ್ರ. ಅಗತ್ಯವಿರುವಷ್ಟು ನೀರು ಬಿಡುಗಡೆ ಮಾಡಿದರೆ ರೈತರನ್ನು ಬದುಕನ್ನು ರಕ್ಷಣೆ ಮಾಡಿದಂತಾಗುವುದು. ಅದಕ್ಕಾಗಿ ರಾಜ್ಯಸರ್ಕಾರ ಶೀಘ್ರ ತೀರ್ಮಾನ ಕೈಗೊಂಡು ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಿ ನೀರನ್ನು ರೈತರೇ ಬಿಡುಗಡೆ ಮಾಡಿಕೊಳ್ಳುವುದಕ್ಕೆ ಮುಂದಾಗಬೇಕಾಗುತ್ತದೆ. ಅದರಿಂದ ಉಂಟಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಜವಾಬ್ದಾರಿಯಾಗಲಿದೆ ಎಂದು ಎಚ್ಚರಿಸಿದರು.

ಸಿಎಂ ದ್ವೇಷದ ರಾಜಕಾರಣ: ನಾಲೆಗಳಿಗೆ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಮೈತ್ರಿ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪುತ್ರನ ಚುನಾವಣಾ ಸೋಲನ್ನೇ ಮುಂದಿಟ್ಟುಕೊಂಡು ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಹಠ ಸಾಧಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ನೀರಿಲ್ಲದೆ ಬೆಳೆಗಳು ಒಣಗುವ ಹಂತದಲ್ಲಿದ್ದರೂ ನೀರು ಹರಿಸದೆ ರೈತರ ಬದುಕಿಗೆ ಕೊಳ್ಳಿ ಇಡುತ್ತಿದ್ದಾರೆ. ಈ ಕೂಡಲೇ ನಾಲೆಗಳಿಗೆ ನೀರೊದಗಿಸುವ ನಿರ್ಧಾರ ಪ್ರಕಟಿಸುವ ಮೂಲಕ ರೈತರನ್ನು ಸಂಕಷ್ಟದಿಂದ ಪಾರು ಮಾಡುವಂತೆ ರೈತ ಮುಖಂಡ ಶಂಭೂನಹಳ್ಳಿ ಸುರೇಶ್‌ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಎ.ಎಲ್.ಕೆಂಪೂಗೌಡ, ದಸಂಸ ಮುಖಂಡ ಗುರುಪ್ರಸಾದ್‌ ಕೆರಗೊಡು, ಜಿ.ಎಸ್‌.ಲಿಂಗಪ್ಪಾಜಿ, ಬಿ.ಬೊಮ್ಮೇಗೌಡ, ಶೆಟ್ಟಹಳ್ಳಿ ರವಿಕುಮಾರ್‌, ಪಿ.ಕೆ.ನಾಗಣ್ಣ, ಸಿದ್ದೇಗೌಡ, ಲತಾ ಶಂಕರ್‌, ಶಿವಾರ ಚಂದ್ರು, ಪಿ.ನಾಗರಾಜು, ಜಿ.ಎ.ಶಂಕರ್‌, ಪಾಂಡು, ಎಸ್‌.ಸಿ.ಮರಿಚನ್ನೇಗೌಡ, ಸಿದ್ದೇಗೌಡ ಇತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.