ಭರ್ತಿಯಾಗದ ಜೀವನಾಡಿ ಕೆಆರ್‌ಎಸ್‌ ಜಲಾಶಯ


Team Udayavani, Sep 29, 2021, 3:19 PM IST

ಭರ್ತಿಯಾಗದ ಜೀವನಾಡಿ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಸತತ ಮೂರು ವರ್ಷಗಳಿಂದ ಭರ್ತಿಯಾಗಿದ್ದ ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಜಲಾಶಯ ಈ ಬಾರಿ ಭರ್ತಿಯಾಗದಿರುವುದು ಕಾವೇರಿಕೊಳ್ಳದ ಭಾಗದ ರೈತರಲ್ಲಿ ನಿರಾಸೆ ಮೂಡಿಸಿದೆ.

ಮುಂದಿನ ಬೇಸಿಗೆ ಬೆಳೆಗೆ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಹಿಂಗಾರು ಹಾಗೂ ಮುಂಗಾರು ಮಳೆ ಬೀಳದ ಕಾರಣ ಕೆಆರ್‌ಎಸ್‌ ಜಲಾಶಯ ಈ ಬಾರಿ ಭರ್ತಿ ಯಾಗಿಲ್ಲ. ಹೀಗಾಗಿ ಬೇಸಿಗೆ ಕಾಲದಲ್ಲಿ ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ಸಾಧ್ಯತೆ ಇದೆ.

ಕೈಕೊಟ್ಟ ಹಿಂಗಾರು: ಕೆಆರ್‌ಎಸ್‌ ಜಲಾಶಯಭರ್ತಿಯಾದರೆ, ರೈತರಲ್ಲಿ ಹಾಗೂ ಜನರಲ್ಲಿ ನೆಮ್ಮದಿ ಮೂಡುತ್ತಿತ್ತು. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆಯಾಗದ ಕಾರಣ ಜಲಾಶಯ ಭರ್ತಿಯಾಗಿಲ್ಲ. ಸೆಪ್ಟೆಂಬರ್‌ನಲ್ಲಿ ಹಿಂಗಾರು ಮಳೆ ಕೈಹಿಡಿಯಬಹುದು ಎಂದು ಭಾವಿಸಲಾಗಿತ್ತು. ಆದರೆ ಮಳೆ ಬರಲೇ ಇಲ್ಲ. 113 ಅಡಿಗೆ ಕುಸಿತ: ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವುದರಿಂದ ಜಲಾಶಯದ ನೀರಿನ ಮಟ್ಟ 113.20 ಅಡಿಗೆ ಕುಸಿದಿದೆ. ನದಿ ಹಾಗೂ ನಾಲೆ ಸೇರಿದಂತೆ ಒಟ್ಟಾರೆ ಪ್ರತಿನಿತ್ಯ 10 ಸಾವಿರದಿಂದ 12 ಸಾವಿರ ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ.

ಇದರಿಂದ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಮಂಗಳವಾರ ಸಂಜೆ ವೇಳೆಗೆ 113 ಅಡಿಗೆ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 124.50 ಅಡಿ ನೀರು ಇತ್ತು. ಒಳಹರಿವು 10 ಸಾವಿರ ಕ್ಯೂಸೆಕ್‌ ಇದ್ದರೆ, ಹೊರ ಹರಿವು 2,406 ಕ್ಯೂಸೆಕ್‌ ಇತ್ತು. 49.033 ಟಿಎಂಸಿ ನೀರು ಸಂಗ್ರಹವಾಗಿತ್ತು. ತಮಿಳುನಾಡಿಗೆ 60 ಟಿಎಂಸಿ ನೀರು: ತಮಿಳುನಾಡಿಗೆ ಹಂಚಿಕೆ ಸೂತ್ರದಂತೆ ಜೂನ್‌ನಲ್ಲಿ 10 ಟಿಎಂಸಿ, ಜುಲೈ 34 ಟಿಎಂಸಿ, ಆಗಸ್ಟ್‌ 50 ಟಿಎಂಸಿ, ಸೆಪ್ಟೆಂಬರ್‌ನಲ್ಲಿ 30 ಟಿಎಂಸಿ ನೀರು ಹರಿಸಬೇಕು. ಆದರೆ ಸಾಮಾನ್ಯ ಮಳೆಯಾದ

ಸಂದರ್ಭದಲ್ಲಿ ಹಂಚಿಕೆ ಸೂತ್ರದಂತೆ ಜೂನ್‌ನಲ್ಲಿ 9.1 ಟಿಎಂಸಿ, ಜುಲೈ ನಲ್ಲಿ 31.27 ಟಿಎಂಸಿ, ಆಗಸ್ಟ್‌ ನಲ್ಲಿ 45.95 ಟಿ  ಎಂ ಸಿ ನೀರು ಹರಿಸಬೇಕಾಗಿದೆ. ಆದರೆ ಪ್ರಸ್ತುತ ವರ್ಷ ಇದು ವರೆಗೂ ತಮಿಳುನಾಡಿಗೆ 60 ಟಿಎಂಸಿಗೂ ಹೆಚ್ಚು ನೀರು ಹರಿದಿದ್ದು, ಇನ್ನೂ 57 ಟಿಎಂಸಿ ನೀರು ಹರಿಸಬೇಕಾದ ಅನಿವಾರ್ಯತೆ ಇದ್ದು, ಆಕ್ಟೋಬರ್‌ ತಿಂಗಳ 22 ಟಿಎಂಸಿ ನೀರು ಹರಿಸಿದರೆ ಜಲಾಶಯ ಬರಿದಾಗುವ ಸಾಧ್ಯತೆ ಇದೆ.

ನೀರು ಬಿಡಲು ಸಾಧ್ಯವಿಲ್ಲ ಎಂದ ಕರ್ನಾಟಕ : ಕಾವೇರಿ ನೀರು ನಿರ್ವಹಣಾ ಮಂಡಳಿಯ ಕಳೆದ ಬಾರಿಯ ಸಭೆಯಲ್ಲಿ ತಮಿಳುನಾಡಿಗೆ 9 ಟಿಎಂಸಿ ನೀರು ಹರಿಸಬೇಕು ಎಂದು ಸೂಚಿಸಿತ್ತು. ಅದರಂತೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ರಾತ್ರಿ ವೇಳೆ ಅತಿ ಹೆಚ್ಚು ನೀರು ಹರಿಸುವ ಮೂಲಕ ನೀರಾವರಿ ಅ ಧಿಕಾರಿಗಳು ತಮಿಳುನಾಡಿಗೆ ಬಿಡಬೇಕಾಗಿದ್ದ ನೀರಿನ ಪ್ರಮಾಣ ಹರಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತ ಸೋಮವಾರ ನಡೆದ ಕಾವೇರಿ ನೀರು ನಿರ್ವಹಣಾ ಮಂಡಳಿಯ ಸಭೆಯಲ್ಲಿ ಕಾವೇರಿ ಕೊಳ್ಳದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆಯಾಗದ ಕಾರಣ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿದೆ. ತಮಿಳುನಾಡಿಗೆ ಒಂದು ವೇಳೆ ಹರಿಸಿದರೆ, ಆ ಭಾಗದ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗಲಿದೆ ಎಂದು ತಿಳಿಸಿದೆ.  ಅದರಂತೆ ಅ.7ರೊಳಗೆ ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟ, ಮಳೆಯ ಪ್ರಮಾಣದ ವರದಿ ಸಲ್ಲಿಸುವಂತೆ ಮಂಡಳಿ ಸೂಚಿಸಿದ್ದು, ವರದಿ ಪರಿಶೀಲನೆ ನಂತರ ಎಷ್ಟು ಟಿಎಂಸಿ ನೀರು ಹರಿಸಬೇಕು ಎಂಬುದು ತಿಳಿಯಲಿದೆ.

ಸಂಕಷ್ಟ ಸೂತ್ರ:

ಕಳೆದ ಮೂರು ವರ್ಷಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದ ಕಾರಣ, ಮುಂಗಾರು ಮಳೆ ಮುಗಿಯುವ ಹೊತ್ತಿಗೆ ತಮಿಳುನಾಡಿನ ಕೋಟಾದ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಜಲಾಶಯ ತುಂಬದ ಕಾರಣ ಇನ್ನೂ ಅರ್ಧದಷ್ಟು ಕೋಟಾದ ನೀರನ್ನು ಬಿಡಲು ಸಾಧ್ಯವಾಗಿಲ್ಲ. ಒಂದು ವೇಳೆ ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ತಮಿಳುನಾಡಿಗೆ ನೀರು ಬಿಡಲು ಸಂಕಷ್ಟ ಸೂತ್ರ ಅನುಸರಿಸಬೇಕಾಗುತ್ತದೆ. ಆ ವೇಳೆಗೆ ಬೇಸಿಗೆ ಕಾಲ ಆರಂಭವಾಗಲಿದ್ದು, ಬೆಂಗಳೂರು,ಮೈಸೂರು, ಮಂಡ್ಯ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ.

ಸಿಎಂಗೆ ಸದ್ಯಕ್ಕೆ ತಪ್ಪಿದ ಬಾಗಿನ ಭಾಗ್ಯ :

ಈ ಬಾರಿ ಕೆಆರ್‌ಎಸ್‌ ಜಲಾಶಯ ಭರ್ತಿಯಾಗದ ಕಾರಣ ಜಲಾಶಯಕ್ಕೆ ಪ್ರತಿವರ್ಷ ಸಿಎಂ ಬಾಗಿನ ನೀಡುವ ಸಂಪ್ರದಾಯ ಈ ಬಾರಿ ಇಲ್ಲದಂತಾಗಿದ್ದು, ಇದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾವೇರಿಗೆ ಬಾಗಿನ ಬಿಡುವ ಭಾಗ್ಯ ತಪ್ಪಿದಂತಾಗಿದೆ.ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 2015 ರಿಂದ 2017ರವರೆಗೆ ಸತತ ಮೂರು ವರ್ಷಗಳ ಕಾಲ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿರಲಿಲ್ಲ. ಹೀಗಾಗಿ ಮೂರು ಬಾರಿ ಬಾಗಿನ ನೀಡುವ ಭಾಗ್ಯ ಕಳೆದುಕೊಂಡಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಗಳಲ್ಲಿ ಕೆಆರ್‌ಎಸ್‌ ಭರ್ತಿಯಾಗಿದ್ದ ಕಾರಣ ಐದು ಬಾರಿ ಕಾವೇರಿ ಮಾತೆಗೆ ಬಾಗಿನ ನೀಡಿ ಅತೀ ಹೆಚ್ಚು ಬಾರಿ ಕೆಆರ್‌ಎಸ್‌ಗೆ ಬಾಗಿನ ಸಲ್ಲಿಸಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ.

ನಾಲೆ ಆಧುನೀಕರಣ ಕಾಮಗಾರಿ ಕೈಗೊಳಲು ಸಿದ್ಧತೆ  :

ನಾಲೆಗಳ ಆಧುನೀಕರಣಕ್ಕೂ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ. ಬೇಸಿಗೆಯಲ್ಲಿ ನಾಲೆಗಳಿಗೆ ನೀರು ನಿಲ್ಲಿಸಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ನಾಲೆ ಆಧುನೀಕರಣ ಕಾಮಗಾರಿ ನಡೆಸುವ ಸಂಬಂಧ ಈಗಾಗಲೇ ಸಚಿವ ಕೆ.ಸಿ.ನಾರಾಯಣಗೌಡ ಅಧ್ಯಕ್ಷತೆಯಲ್ಲಿ ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ಬೇಸಿಗೆ ಬೆಳೆಗೆ ನೀರು ಬಿಡಬೇಕೋ, ಕಾಮಗಾರಿನಡೆಸಬೇಕೋ ಎಂಬುದರ ಬಗ್ಗೆ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ನಂತರಇನ್ನೊಂದು ಸಭೆ ಕರೆದು ತೀರ್ಮಾನಿಸಲಾಗುವುದುಎಂದು ಭರವಸೆ ನೀಡಲಾಗಿತ್ತು. ಆದರೆ ಇದುವರೆಗೂ ಸಭೆ ನಡೆದಿಲ್ಲ.

ಬೆಳೆ, ಕುಡಿಯುವ ನೀರಿಗೆ ತೊಂದರೆ:

ಪ್ರತಿವರ್ಷ ತಮಿಳುನಾಡಿಗೆ 177 ಟಿಎಂಸಿ ನೀರನ್ನು ಹರಿಸಬೇಕು. ಅದರಂತೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಸದ್ಯ 124.80 ಅಡಿ ಸಾಮರ್ಥ್ಯ ಜಲಾಶಯದಲ್ಲಿ 113.20 ಅಡಿ ಮಾತ್ರ ನೀರಿದೆ. 35.063 ಟಿಎಂಸಿ ನೀರುಸಂಗ್ರಹವಾಗಿದೆ. ಇದರಲ್ಲಿ ಮುಂಗಾರು ಬೆಳೆಗಳಿಗೆ ಇನ್ನೂ ನೀರಿನ ಅಗತ್ಯವಿದೆ.ಅಲ್ಲದೆ, ಮುಂದಿನ ಬೇಸಿಗೆ ಹಾಗೂ ಕುಡಿಯುವ ನೀರು ಸರಬರಾಜಿನಜತೆಗೆ ತಮಿಳುನಾಡಿಗೆ ಬಿಡಬೇಕಾದ ನೀರಿನ ಕೋಟಾವನ್ನು ಮ್ಯಾನೇಜ್‌ ಮಾಡಬೇಕಿದೆ. ಸದ್ಯ ಜಲಾಶಯದ ಒಳಹರಿವು 4,645 ಕ್ಯೂಸೆಕ್‌ ಇದ್ದರೆ, ಹೊರಹರಿವು 7,765 ಕ್ಯೂಸೆಕ್‌ ಇದೆ. ಇದೇ ರೀತಿ ನೀರು ಹರಿದರೆ ನಾಲ್ಕೆçದು ದಿನಗಳಲ್ಲಿ 110 ಅಡಿಗೆ ಕುಸಿಯಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.