ಕೆಆರ್ಎಸ್ ನೀರಿನ ಮಟ್ಟ 69 ಅಡಿಗೆ ಕುಸಿತ
Team Udayavani, May 19, 2018, 7:00 AM IST
ಶ್ರೀರಂಗಪಟ್ಟಣ: ಬೇಸಿಗೆ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 69.37 ಅಡಿಗಳಿಗೆ ಕುಸಿದಿದೆ.
ಒಳ ಹರಿವು 482 ಕ್ಯುಸೆಕ್, ಹೊರಹರಿವು 943 ಕ್ಯುಸೆಕ್ ಇದೆ. ಒಟ್ಟು ಜಲಾಶಯದಲ್ಲಿ 6.82 ಟಿಎಂಸಿ ನೀರಿನ
ಸಂಗ್ರಹವಿದೆ.
ಜಲಾಶಯದಿಂದ ಪ್ರತಿದಿನ 900 ಕ್ಯುಸೆಕ್ ನೀರನ್ನು ಕುಡಿಯಲು ಬಿಡಲಾಗುತ್ತಿದೆ. 4.2 ಟಿಎಂಸಿ ನೀರು
ಡೆಡ್ ಸ್ಟೋರೆಜ್ ಇದೆ. ಇದನ್ನು ಬಿಟ್ಟು ಉಳಿದ 2.4 ಟಿಎಂಸಿ ನೀರನ್ನು ಕುಡಿಯಲು ಬಳಸಬಹುದು. ಜೊತೆಗೆ, ಕಬಿನಿ ಜಲಾಶಯದಿಂದ ಬರುವ ತಿಂಗಳಲ್ಲಿ ನೀರು ಸಂಗ್ರಹವಾಗುವ ಸಾಧ್ಯತೆ ಇದೆ. ಆ ನೀರನ್ನೂ ಕುಡಿಯಲು
ಬಳಸಬಹುದು. ಹೀಗಾಗಿ, ಸದ್ಯಕ್ಕೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಕಳೆದ ವರ್ಷ ಇದೇ ತಿಂಗಳಲ್ಲಿ
ಜಲಾಶಯದಲ್ಲಿ 70 ಅಡಿ ನೀರಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಬೆಂಗಳೂರು, ಮೈಸೂರು,
ರಾಮನಗರ ಜಿಲ್ಲೆ ಸೇರಿದಂತೆ ಸುತ್ತಮುತ್ತಲ ಭಾಗಗಳಿಗೆ ಕುಡಿಯಲು ಮಾತ್ರ ಜಲಾಶಯದ ನೀರನ್ನು ಬಳಸಲಾಗುತ್ತಿದೆ.
ಈ ಮಧ್ಯೆ, ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದ್ದು,ಇದರಿಂದಾಗಿ ಸುತ್ತಮುತ್ತಲ ಕೊಳವೆ ಬಾವಿಗಳಲ್ಲಿಯೂ ನೀರು ಬತ್ತಿ ಹೋಗುತ್ತಿದೆ. ಇದರಿಂದಾಗಿ ಕೆಆರ್ಎಸ್ ಜಲಾಶಯದ ಕೆಳಗಿನ ಹಳ್ಳಿಗಳಲ್ಲಿ ಜಲಕ್ಷಾಮ ಎದುರಾಗುವ ಪರಿಸ್ಥಿತಿ ಉಂಟಾಗಿದೆ. ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್