ಯೋಧನ ಭಾವಚಿತ್ರಕ್ಕೆ ಕ್ಷೀರಾಭಿಷೇಕ
Team Udayavani, Feb 17, 2019, 7:34 AM IST
ಶ್ರೀರಂಗಪಟ್ಟಣ: ಉಗ್ರರ ದಾಳಿಯಿಂದ ಮೃತಪಟ್ಟ ಗುಡಿಗೆರೆ ಯೋಧ ಗುರು ಭಾವಚಿತ್ರಕ್ಕೆ ಮಂಡ್ಯ ಕರವೇ ಕಾರ್ಯಕರ್ತರು ಪಟ್ಟಣದ ಕುವೆಂಪು ವೃತ್ತದಲ್ಲಿ ಹಾಲಿನ ಅಭಿಷೇಕ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.
ಮಂಡ್ಯರಕ್ಷಣಾ ವೇದಿಕೆಯ ಅಧ್ಯಕ್ಷ ಶಂಕರಬಾಬು ನೇತೃತ್ವದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ಬಳಿ ಜಮಾವಣೆಗೊಂಡು ಪುಲ್ವಾಮಾದಲ್ಲಿ ನಡೆದ ಘಟನೆಗೆ ಪಾಕಿಸ್ತಾನವೇ ನೇರ ಹೊಣೆ ಎಂದು ಆರೋಪಿಸಿ ಕಿಡಿಕಾರಿ ಪಾಕಿಸ್ತಾನದ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಹುತಾತ್ಮ ಯೋಧ ಗುರು ಅವರು ಬಡ ಕುಟುಂಬದಲ್ಲಿ ಜನಿಸಿ ಭಾರತ ಮಾತೆಗೆ ತಮ್ಮ ಪ್ರಾಣ ನೀಡಿದ್ದಾರೆ. ಇಂತಹ ಉಗ್ರ ಸಂಘಟನೆ ಬೆಳೆಯದಂತೆ ಭಾರತದಲ್ಲಿ ನೋಡಿಕೊಳ್ಳಬೇಕು. ಉಗ್ರಗಾಮಿಗಳಿಗೆ ಬೆಂಬಲಕ್ಕೆ ನಿಂತ ಪಾಕಿಸ್ತಾನದ ವಿರುದ್ಧ ಯುದ್ದ ಸಾರಿ ಅವರ ಮೇಲೆ ದಾಳಿ ನಡೆಸುವ ಮೂಲಕ ಸೇಡು ತೀರಿಸಿಕೊಂಡಾಗ ಮಾತ್ರ ನಮ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಆಗ್ರಹಿಸಿ,
ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಸಾಲು, ಸಾಲು ಘೋಷಣೆಯನ್ನು ಮೊಳಗಿಸಿದರು. ಕೇಂದ್ರ ಸರಕಾರ ಪಾಕಿಸ್ತಾನದ ವಿರುದ್ಧ ನೇರವಾಗಿ ಯುದ್ಧ ಘೋಷಣೆ ಮಾಡಬೇಕು. ಇಲ್ಲದಿದ್ದರೆ ದೇಶದ ಜನ ಆತಂಕದಲ್ಲಿಯೇ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.
ಬಾಳೆಮಂಜು, ನಾರಾಯಣಸ್ವಾಮಿ ರೇಣುಕಾ, ಆಟೋನಾಗರಾಜು ಸೇರಿದಂತೆ ಮಹಿಳಾ ಕಾರ್ಯಕರ್ತರು ಸೇರಿದಂತೆ ಇತರ ಸಂಘಟನೆಯ ಕಾರ್ಯಕರ್ತರು ಹಾಜರಿದ್ದು, ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ಪುಷ್ಪನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ