![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಮರೀಚಿಕೆ
Team Udayavani, Oct 10, 2020, 3:15 PM IST
![ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಮರೀಚಿಕೆ](https://www.udayavani.com/wp-content/uploads/2020/10/mandya-tdy2-620x372.jpg)
ಭಾರತೀನಗರ: ಜನರ ಆರೋಗ್ಯ ಕಾಪಾಡಬೇಕಾದ ವೈದ್ಯರು, ಆಸ್ಪತ್ರೆಯ ಆಡಳಿತಾಧಿಕಾರಿಗಳೇ ರೋಗ ಹರಡಲು ಕಾರಣರಾಗಿದ್ದಾರೆ.
ಹೌದು, ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಒಳಚರಂಡಿ ಕಟ್ಟಿಕೊಂಡು ಹಲವುದಿನಗಳೇ ಕಳೆದಿದ್ದರೂ, ಇದನ್ನು ಸ್ವತ್ಛಗೊಳಿಸಲು ಕ್ರಮ ಕೈಗೊಂಡಿಲ್ಲ. ಹೀಗಾಗಿ ಆಸ್ಪತ್ರೆಯ ಕಲುಷಿತ ನೀರು ಮುಖ್ಯ ರಸ್ತೆಗೆ ಹರಿಯುತ್ತಿದೆ. ಇದರಿಂದ ಜನರ ಸಂಚಾರಕ್ಕೆ ತೊಂದರೆಯಾಗಿದೆ. ಕಲುಷಿತ ನೀರು ರಸ್ತೆಯ ಇಕ್ಕೆಲಗಳ ಗುಂಡಿಯನ್ನು ಸೇರುತ್ತಿದೆ. ಇದರಿಂದ ರೋಗ ಹರಡುವ ಭೀತಿ ಎದುರಾಗಿದೆ.
ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳುವ ಜನತೆ ಮೂಗು ಮುಚ್ಚಿಕೊಂಡು ತೆರಳುತ್ತಿದ್ದಾರೆ. ಅಲ್ಲದೆ, ಗುಂಡಿಗಳಲ್ಲಿ ನಿಂತಿರುವ ನೀರಿನಲ್ಲಿ ನಾಯಿಗಳು ಬಂದು ಮಲಗುತ್ತಿದ್ದು,ಇದು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಕೋವಿಡ್ ತಾಂಡವ:ಕೋವಿಡ್-19 ಜಿಲ್ಲೆಯಲ್ಲಿ ತಾಂಡವವಾಡುತ್ತಿದೆ. ನಿತ್ಯ 200ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.ನಿತ್ಯ ಸ್ವತ್ಛತೆ ಬಗ್ಗೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಅರಿವು ಮೂಡಿಸುತ್ತಿದ್ದರೂ, ಸಮು ದಾಯ ಆರೋಗ್ಯಕೇಂದ್ರದ ಆಡಳಿತಾಧಿಕಾರಿಗಳಿಗೆ ಅನ್ವಯವಾದಂತೆ ಕಾಣುತ್ತಿಲ್ಲ. ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸಾರ್ವಜನಿಕರು,ಆರೋಗ್ಯಕೇಂದ್ರದಆಡಳಿತಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಾರ್ವಜನಿಕರ ಆಕ್ರೋಶ: ಆರೋಗ್ಯ ಕಾಪಾಡಬೇಕಾದ ಆರೋಗ್ಯಕೇಂದ್ರವು ಅನಾರೋಗ್ಯವನ್ನು ಹರಡುತ್ತಿದೆ. ಆಸ್ಪತ್ರೆ ಆವರಣದಲ್ಲಿ ಸ್ವತ್ಛತೆಯನ್ನು ಕಾಪಾಡದಿದ್ದರೆ ಮುಂದಿನದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಶಿವನಂಜೇಗೌಡ, ಗೌಡಯ್ಯನದೊಡ್ಡಿ ಕಾಳೇಗೌಡ, ಮೊಗಣ್ಣ, ಕುಮಾರ, ರಾಮ, ಶಿವು ಎಚ್ಚರಿಸಿದ್ದಾರೆ.
ಆಸ್ಪತ್ರೆ ಮುಂಭಾಗ ಹರಿಯುತ್ತಿರುವ ಕಲುಷಿತ ನೀರು ತಡೆಗೆ ಈಗಾಗಲೇಕ್ರಮ ಕೈಗೊಳ್ಳಲಾಗಿದೆ. ಸಂಬಂಧಿಸಿದವರಿಗೆ ಕಲುಷಿತನೀರು ರಸ್ತೆಗೆ ಹರಿಯದಂತೆ ನೋಡಿಕೊಳ್ಳಬೇಕು ಎಂದು ತಾಕೀಲು ಮಾಡಲಾಗಿದೆ.- ಡಾ. ಸಂದೀಪ್, ಆಡಳಿತ ವೈದ್ಯಾಧಿಕಾರಿ
ಆಸ್ಪತ್ರೆಗೆ ಬಂದರೆಕೊಳಚೆ ನೀರನ್ನು ತುಳಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಆರೋಗ್ಯಕಾಪಾಡಬೇಕಾದ ಆಸ್ಪತ್ರೆ ವೈದ್ಯಾಧಿಕಾರಿಗಳು ಒಳಚರಂಡಿ ಸರಿಪಡಿಸಿಲ್ಲ. ಇನ್ನಾದರೂ ಈ ಬಗ್ಗೆ ಸಂಬಂಧಪಟ್ಟವರುಕ್ರಮ ಕೈಗೊಂಡು, ನೈರ್ಮಲ್ಯಕಾಪಾಡಲಿ. – ಮಧು, ಮಣಿಗೆರೆ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.