ಸೌಲಭ್ಯವಿಲ್ಲದೇ ಸೊರಗಿದ ಕ್ರೀಡಾಂಗಣ


Team Udayavani, Aug 1, 2022, 6:18 PM IST

tdy-15

ಮದ್ದೂರು: ಪಟ್ಟಣದ ಹೃದಯ ಭಾಗದಲ್ಲಿರುವ ತಾಲೂಕು ಕ್ರೀಡಾಂಗಣ ಸೌಲಭ್ಯವಿಲ್ಲದೇ ಸೊರಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಒಳಪಡುವ ತಾಲೂಕು ಕ್ರೀಡಾಂಗಣ ಮಳೆಗಾಲದಲ್ಲಿ ಕೆರೆಯಂತಾಗುತ್ತಿದೆ.

ಕ್ರೀಡಾಪಟುಗಳು ಸೇರಿದಂತೆ ಬೆಳಗ್ಗೆ ಮತ್ತು ಸಂಜೆವಾಯು ವಿಹಾರಕ್ಕೆಂದು ಆಗಮಿಸುವ ನೂರಾರು ಜನರಿಗೆ ತೊಡಕ್ಕುಂಟಾಗಿದ್ದು ಇದುವರೆವಿಗೂ ಸಂಬಂಧಿಸಿದ ಅಧಿಕಾರಿಗಳು ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿಲ್ಲ.

ಆಧುನೀಕರಣವಿಲ್ಲ: ಇತ್ತೀಚಿನ ವರ್ಷಗಳಲ್ಲಿ ಆಧುನೀಕರಣ ಸೇರಿದಂತೆ ಇತರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಗ್ರಾಮೀಣ ಕ್ರೀಡಾಪಟುಗಳು ಹಾಗೂ ಸ್ಥಳೀಯ ಪ್ರತಿಭೆಗಳ ಉತ್ತೇಜಿಸಲು ತಾಲೂಕು ಕೇಂದ್ರಗಳಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಕ್ರೀಡಾಂಗಣಗಳುಅಭಿವೃದ್ಧಿಗೆ ಚುನಾಯಿತ ಪ್ರತಿನಿಧಿಗಳು ಕಂಡೂ ಕಾಣದಂತಿದ್ದಾರೆ. ಇನ್ನು ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೂ ಕಾರಣವಾಗಿದೆ.

ನಿರ್ವಹಣೆ ಮಾಡಿಲ್ಲ: ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ವ್ಯವಸ್ಥೆ, ವಾಹನನಿಲ್ದಾಣ, ವಿಶ್ರಾಂತಿ ಕೊಠಡಿ, ಆಸನದ ವ್ಯವಸ್ಥೆಸೇರಿ ಇತರೆ ಇಲ್ಲಗಳ ದೊಡ್ಡ ಪಟ್ಟಿಯೇ ಇಲ್ಲಿದ್ದುನಿರ್ವಹಣೆಯಂತೂ ಹೇಳ ತೀರದಾಗಿದೆ.

ಸಂಕಷ್ಟ: ರಾಷ್ಟ್ರೀಯ ಹಬ್ಬಗಳೂ ಸೇರಿದಂತೆ ಕೆಲ ಸಂಘಟನೆಗಳು ಆಯೋಜಿಸುವ ಕ್ರೀಡಾಸಂಬಂಧಿ ಕಾರ್ಯಕ್ರಮಗಳ ವೇಳೆ ವೇದಿಕೆ,ಆಸನ, ಮೇಜು, ಖುರ್ಚಿ, ಶಾಮಿಯಾನ, ಕುಡಿ ಯುವ ನೀರು ಇನ್ನಿತರೆ ವ್ಯವಸ್ಥೆಗಳನ್ನು ಆಯೋ ಜಕರೇ ಸ್ವತಃ ಕಲ್ಪಿಸಿಕೊಳ್ಳುವ ಅನಿವಾರ್ಯತೆಇದೆ. ಇದರಿಂದಾಗಿ ಆಯೋಜಕರ ಸಂಕಷ್ಟ ಕೇಳುವವರೇ ಇಲ್ಲವಾಗಿದ್ದಾರೆ.

ನಿರ್ಲಕ್ಷ್ಯ:ಇತ್ತೀಚಿನ ದಿನಗಳಲ್ಲಿ ಬೃಹತ್‌ ಪ್ರಮಾಣದ ಆರೋಗ್ಯ ಶಿಬಿರ, ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮ, ರಾಜಕೀಯ ಪಕ್ಷಗಳವಿವಿಧ ಕಾರ್ಯಕ್ರಮಗಳಿಗೆ ಸರ್ಕಾರಿ ಕ್ರೀಡಾಂಗಣ ಬಳಕೆಯಾಗುತ್ತಿದೆ. ಆದರೆ, ಮೂಲ ಉದ್ದೇಶವೇ ಹೊರತಾಗಿ ಕ್ರೀಡಾ ಚಟುವಟಿಕೆಗಳಿಂದದೂರವೇ ಉಳಿಯುವ ಸ್ಥಿತಿಯಿದೆ. ಕ್ರೀಡಾಂಗಣದ ಉತ್ತರ ಭಾಗದಿಂದ ಪೂರ್ವೋತ್ತರವಾಗಿ ಅಳವಡಿಸಿರುವ ಕಲ್ಲು ಹಾಸಿನ ಆಸನಗಳಅಳವಡಿಕೆ ಕಿತ್ತು ಮೇಲೆದ್ದಿವೆ. ವಿಷ ಜಂತುಗಳು,ಗಿಡ-ಗಂಟಿಗಳು ಬೆಳೆಯುತ್ತಿವೆ. ಇನ್ನು ಮೂಲ ಕಲ್ಲು ಹಾಸು ಕಿತ್ತು ಬಂದಿದ್ದರೂ ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಯಾವೊಬ್ಬರೂ ಗಮನಹರಿಸಿಲ್ಲ.

ಸ್ಥಳೀಯ ಕ್ರೀಡಾಪಟುಗಳ ಹಿತ ದೃಷ್ಟಿಯಿಂದಮಂಡ್ಯ ಜಿಪಂ ವತಿಯಿಂದ ನಿರ್ಮಾಣಗೊಂಡನೀರಿನ (ತೊಂಬೆ) ಸ್ಥಾವರಕ್ಕೆ ಈವರೆಗೂ ನೀರುಪೂರೈಕೆಗೆ ಪೈಪ್‌ಲೈನ್‌ ಅಳವಡಿಸಿಲ್ಲ. ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮದ್ದೂರು ಕ್ರೀಡಾಂಗಣದ ಪ್ರಸ್ತುತ ಸ್ಥಿತಿ ಹೇಗಿದೆ? :

ಒಳಾಂಗಣ ಕ್ರೀಡಾಂಗಣದ ಅವ್ಯವಸ್ಥೆ ಹೇಳ ತೀರದಾಗಿದ್ದು ಮಳೆ, ಗಾಳಿಗೆ ಶಿಥಿಲವಾಗಿರುವ ಸೂರು ಮಳೆ ನೀರು ಸೋರಿ ಕಿತ್ತು ನಿಂತಿರುವ ಮೇಲ್ಚಾವಣಿ ಮತ್ತು ವುಡ್‌ ಕೋರ್ಟ್‌ ಇಲ್ಲಿನ ಅವ್ಯವಸ್ಥೆಗಳಿಗೆ ಉದಾಹರಣೆ. ಕ್ರೀಡಾಂಗಣ ಹಲವು ಅದ್ವಾನಗಳಿಂದ ಕೂಡಿದ್ದು ಹಳ್ಳ ಕೊಳ್ಳಗಳಿಂದ ಆವೃತವಾಗಿದ್ದರೂ ದುರಸ್ತಿಗೆ ಮುಂದಾಗದಿರುವುದು ಶೋಚನೀಯ. ಕೆಲ ದೇಹದಾರ್ಢ್ಯ ಪರಿಕರಗಳು ನಿರ್ವಹಣೆಕೊರತೆಯಿಂದ ತುಕ್ಕು ಹಿಡಿದಿವೆ. ಬದಲಿ ಯಂತ್ರಗಳ ಅಳವಡಿಕೆಗೆ ಕ್ರಮವಹಿಸಿಲ್ಲ. ಈ ಕುರಿತು ಜಿಪಂಹಾಗೂ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ವರ್ಗದ ಗಮನ ಸೆಳೆದರೂ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗದಿರುವುದರಿಂದ ಕ್ರೀಡಾಸಕ್ತರಲ್ಲಿ ಬೇಸರ ತರಿಸಿದೆ.

ಮಂಡ್ಯ ಜಿಲ್ಲೆಯವರೇ ಆದ ಕೆ.ಸಿ.ನಾರಾಯಣಗೌಡರು ಯುವ ಜನ ಸೇವಾ ಮತ್ತು ಕ್ರೀಡಾಇಲಾಖೆಯ ಸಂಪುಟ ದರ್ಜೆಸಚಿವರಾಗಿದ್ದಾರೆ. ಮಂಡ್ಯ ಸೇರಿದಂತೆತಾಲೂಕಿನ ವಿವಿಧ ಕ್ರೀಡಾಂಗಣಗಳಉನ್ನತೀಕರಣಕ್ಕೆ ಕ್ರಮವಹಿಸಿದ್ದಾರೆ.ಸಂಬಂಧಿಸಿದ ಅಧಿಕಾರಿಗಳು ಅಗತ್ಯಕ್ರಮ ಕೈಗೊಳ್ಳಬೇಕಿದೆ. -ಮ.ನ.ಪ್ರಸನ್ನಕುಮಾರ್‌, ಮದ್ದೂರು ಪುರಸಭೆ ಸದಸ್ಯರು

ಮದ್ದೂರು ಸರ್ಕಾರಿ ಕ್ರೀಡಾಂಗಣ ಅಭಿವೃದ್ಧಿ ಸಂಬಂಧ ಈಗಾಗಲೇ ಸಂಬಂಧಿಸಿದ ಮೇಲಧಿಕಾರಿಗಳೊಟ್ಟಿಗೆ ಪತ್ರ ವ್ಯವಹಾರ ನಡೆಸಲಾಗಿದೆ. ಮುಂದಿನ ಅನುದಾನದಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಇನ್ನು ಈಗಾಗಲೇನೀತಿ ನಿಬಂಧನೆಗಳ ಕುರಿತಾಗಿ ನಾಮಫ‌ಲಕ ಅಳವಡಿಸಿ ಮುಂಜಾಗ್ರತೆ ವಹಿಸಲಾಗಿದೆ. – ಜಿ.ಓಂಪ್ರಕಾಶ್‌,ಸಹಾಯಕ ನಿರ್ದೇಶಕ, ಯುವಜನ ಸೇವೆಮತ್ತು ಕ್ರೀಡಾ ಇಲಾಖೆ, ಮಂಡ್ಯ

 

– ಎಸ್‌.ಪುಟ್ಟರಾಜು

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.